Homeಮುಖಪುಟಸಿಎಂ ಕುಟುಂಬದ ವಿರುದ್ಧ ದ್ವೇಷಪೂರಿತ, ಅವಹೇಳನಕಾರಿ ಹೇಳಿಕೆ: ಜಾರ್ಖಂಡ್ ಬಿಜೆಪಿ ಅಧ್ಯಕ್ಷನ ವಿರುದ್ಧ FIR

ಸಿಎಂ ಕುಟುಂಬದ ವಿರುದ್ಧ ದ್ವೇಷಪೂರಿತ, ಅವಹೇಳನಕಾರಿ ಹೇಳಿಕೆ: ಜಾರ್ಖಂಡ್ ಬಿಜೆಪಿ ಅಧ್ಯಕ್ಷನ ವಿರುದ್ಧ FIR

- Advertisement -
- Advertisement -

ಮುಖ್ಯಮಂತ್ರಿ ಹೇಮಂತ್ ಸೋರೆನ್ ಹಾಗೂ ಸೋರೆನ್ ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ವಿರುದ್ಧ ರಾಂಚಿಯ ಕಂಕೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕರ್ತ ಸೋನು ಟಿರ್ಕಿ ಅವರು ದೂರಿನ ಮೇರೆಗೆ ಆಗಸ್ಟ್ 23 ರಂದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಬಿಜೆಪಿ ನಡೆಸುತ್ತಿರುವ ಸಂಕಲ್ಪ ಯಾತ್ರೆ ಸಂದರ್ಭದಲ್ಲಿ ಬಾಬುಲಾಲ್ ಮರಾಂಡಿ ಅವರು ತಮ್ಮ ರಾಜಕೀಯ ಲಾಭಕ್ಕಾಗಿ ಸೋರೆನ್ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಬಳಸಿದ್ದಾರೆ ಮತ್ತು ಇದು ಅವರ ಹಾಗೂ ಆದಿವಾಸಿಗಳ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಪೊಲೀಸರು ಆಗಸ್ಟ್ 23ರಂದು ಎಫ್‌ಐಆರ್ ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 500 (ಮಾವದಾನಿ) ಸೆಕ್ಷನ್ 505 (ಸಾರ್ವಜನಿಕವಾಗಿ ಎಂದನು ಮತ್ತು 504/2  (ಉದ್ದೇಶಪೂರ್ವಕ ಮೂದಲಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.

ಮರಾಂಡಿ ವಿರುದ್ಧದ ಕ್ರಮಕ್ಕೆ ಬಿಜೆಪಿ ಟೀಕೆ

ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಪ್ರಕರಣ ದಾಖಲಾಗಿರುವುದಕ್ಕೆ ಬಿಜೆಪಿ ಕಿಡಿಕಾರಿದೆ. ಮರಾಂಡಿ ಅವರ ವಿರುದ್ಧ ಇತ್ತೀಚಿನ ದಿನಗಳಲ್ಲಿ ದಾಖಲಾಗಿರುವ ನಾಲ್ಕನೇ ಸರ್ಕಾರಿ ಪ್ರಾಯೋಜಿತ ಪ್ರಕರಣ ಇದು ಎಂದು ಹೇಳಿದೆ.

”ಉಳಿದ ಮೂರು ಪ್ರಕರಣಗಳು ಸಿಂಮ್‌ದಗಾ, ಲಾಖೆಹರ್ ಮತ್ತು ದೇವರ್‌ನಲ್ಲಿ ದಾಖಲಾಗಿವೆ. ಬಿಜೆಪಿಯ ಸಂಕಲ್ಪ ಯಾತ್ರೆಗೆ ಭಾರಿ ಜನ ಬೆಂಬಲ ವ್ಯಕ್ತವಾಗುತ್ತಿರುವುದರಿಂದ ಆಡಳಿತ ಪಕ್ಷವು ಕಂಗೆಟ್ಟಿದೆ” ಎಂದು ಬಿಜೆಪಿ ಟೀಕಿಸಿದೆ.

”ಮರಾಂಡಿ ಅವರು ರಾಜ್ಯವನ್ನು ಹಸಿವು, ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ಮುಕ್ತಗೊಳಿಸುವುದಕ್ಕಾಗಿ ಅಕ್ಟೋಬರ್ 10ರ ವರೆಗೆ ಸಂಕಲ್ಪ ಯಾತ್ರೆ ಮುಂದುವರಿಸಲಿದ್ದಾರೆ” ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿ: ‘ನೀವು ವಕೀಲಿ ವೃತ್ತಿ ನಡೆಸಲು ಹೇಗೆ ಸಾಧ್ಯ?’: ಬಿಲ್ಕಿಸ್ ಬಾನೋ ಪ್ರಕರಣದ ಅಪರಾಧಿಗೆ ಸುಪ್ರೀಂ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...