Homeಮುಖಪುಟಇಶಾ ಫೌಂಡೇಶನ್‌ನ ಅಕ್ರಮಗಳ ವಿರುದ್ಧ ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್

ಇಶಾ ಫೌಂಡೇಶನ್‌ನ ಅಕ್ರಮಗಳ ವಿರುದ್ಧ ತನಿಖೆಗೆ ಆದೇಶಿಸಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ಕೊಯಮತ್ತೂರಿನಲ್ಲಿರುವ ತನ್ನ ಕ್ಯಾಂಪಸ್‌ನ 20.805 ಹೆಕ್ಟೇರ್ ಭೂಮಿಯಲ್ಲಿ ಅನಧಿಕೃತ ನಿರ್ಮಾಣಗಳನ್ನು ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಅಕ್ರಮಗಳು ಕಂಡು ಬಂದರೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪಟ್ಟಣ ಮತ್ತು ಗ್ರಾಮಾಂತರ ಯೋಜನಾ ಜಂಟಿ ನಿರ್ದೇಶಕರಿಂದ ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

ಕೊಯಮತ್ತೂರಿನ ಇಕ್ಕರೈ ಬೊಳುವಂಪಟ್ಟಿಯಲ್ಲಿರುವ ಇಶಾ ಫೌಂಡೇಶನ್‌ನ 150 ಎಕರೆ ಕ್ಯಾಂಪಸ್, 112 ಅಡಿ ಆದಿಯೋಗಿ ಪ್ರತಿಮೆ ಸೇರಿದಂತೆ ಅನೇಕ ನಿಯಮಗಳ ಸ್ಪಷ್ಟ ಉಲ್ಲಂಘನೆ ಮಾಡಿದೆ ಎಂದು ನ್ಯೂಸ್‌ಲಾಂಡ್ರಿ ವರದಿ ಮಾಡಿತ್ತು.

ಈ ಆದಿಯೋಗಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ. ಆಗಿನ ಉಪ ನಿರ್ದೇಶಕ ಆರ್ ಸೆಲ್ವರಾಜ್ ಅವರು, ”ತಮ್ಮ ಇಲಾಖೆಯ ಅನುಮೋದನೆಯಿಲ್ಲದೆ ಈ ಪ್ರತಿಮೆಯನ್ನು ನಿರ್ಮಿಸಲಾಗಿದೆ” ಎಂದು ಹೇಳಿದ್ದಾರೆ.

2021ರಲ್ಲಿ ವೆಲ್ಲಿಯಂಗಿರಿ ಹಿಲ್ ಟ್ರೈಬಲ್ ಪ್ರೊಟೆಕ್ಷನ್ ಸೊಸೈಟಿಯ ಅರ್ಜಿದಾರರಾದ ಪಿ ಮುತ್ತಮ್ಮಾಳ್ ಅವರನ್ನು , ನ್ಯೂಸ್‌ಲಾಂಡ್ರಿ ಭೇಟಿ ಮಾಡಿದಾಗ, ”2017ರಲ್ಲಿ ಅರ್ಜಿ ಸಲ್ಲಿಸಿದ್ದಕ್ಕಾಗಿ ಇಶಾ ಫೌಂಡೇಶನ್‌ನವರು ಕಿರುಕುಳ ನೀಡಿದ್ದರು” ಎಂದು ಹೇಳಿದ್ದರು.

ವೆಲ್ಲಿಯಂಗಿರಿಯ ತಪ್ಪಲಿನಲ್ಲಿ ಇಶಾ ಫೌಂಡೇಶನ್ ನಡೆಸುತ್ತಿರುವ ನಿರ್ಮಾಣ ಕಾಮಗಾರಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಇಕ್ಕರೈ ಬೊಳುವಂಪಟ್ಟಿಯ ಮುತ್ತತ್ತು ಅಯಾಲ್ ವಸಾಹತು ಪ್ರದೇಶದಲ್ಲಿರುವ ತಮ್ಮ ಮನೆಯನ್ನು ಪಿ ಮುತ್ತಮ್ಮಾಳ್ ಅವರು ತೊರೆದರು.

ಆಗಸ್ಟ್ 18ರಂದು ಮದ್ರಾಸ್ ಹೈಕೋರ್ಟ್ ಈ ನಿರ್ದೇಶನ ನೀಡಿದೆ.

ಇದೀಗ ಈ ಬಗ್ಗೆ ಮಾತನಾಡಿದ ಮುತ್ತಮ್ಮಲ್ ಾವರು, ”ಕ್ರಮ ಕೈಗೊಳ್ಳುವುದು ಸರ್ಕಾರದ ಕೆಲಸ. ಸರ್ಕಾರವು ಅಕ್ರಮ ಕಟ್ಟಡಗಳನ್ನು ತೆಗೆದುಹಾಕಬೇಕು ಮತ್ತು ಅರಣ್ಯ, ವನ್ಯಜೀವಿಗಳು ಮತ್ತು ಬುಡಕಟ್ಟು ಜನರಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

‘ಯಾವುದೇ ಎನ್‌ಒಸಿ ದಾಖಲೆ ಇಲ್ಲ’

ಪಟ್ಟಣ ಮತ್ತು ಗ್ರಾಮಾಂತರ ಯೋಜನೆಯ ಜಂಟಿ ನಿರ್ದೇಶಕ ತಿರು ಆರ್ ರಾಜಗುರು ಅವರು ಸಲ್ಲಿಸಿದ ಸ್ಥಿತಿ ವರದಿಯನ್ನು ಮದ್ರಾಸ್ ಹೈಕೋರ್ಟ್ ಗಮನಿಸಿದೆ. ಇಶಾ ಫೌಂಡೇಶನ್ ನಿರ್ಮಾಣಕ್ಕೆ ಅನುಮತಿ ಕೋರಿಲ್ಲ ಅಥವಾ ನಿರಾಕ್ಷೇಪಣಾ ಪ್ರಮಾಣಪತ್ರವನ್ನೂ ಪಡೆದಿಲ್ಲ ಎಂದು ವರದಿ ತಿಳಿಸಿದೆ.

ಆನಂತರ ಮುಖ್ಯ ನ್ಯಾಯಮೂರ್ತಿ ಎಸ್ ವಿ ಗಂಗಾಪುರವಾಲಾ ಮತ್ತು ನ್ಯಾಯಮೂರ್ತಿ ಪಿ ಡಿ ಆದಿಕೇಶವುಲು ಅವರ ಪೀಠ ತನಿಖೆಗೆ ಆದೇಶಿಸಿದೆ.

ವರದಿಯಲ್ಲಿ 15.53 ಎಕರೆ ನಂಜೈ ಭೂಮಿ ಅಥವಾ ಜೌಗು ಪ್ರದೇಶ ಮತ್ತು 5.275 ಹೆಕ್ಟೇರ್ ಪುಂಜೈ ಅಥವಾ ಒಣ ಭೂಮಿ ಸೇರಿದಂತೆ 20.805 ಹೆಕ್ಟೇರ್ ಭೂಮಿಯಲ್ಲಿ ನಿರ್ಮಾಣವನ್ನು ಉಲ್ಲೇಖಿಸಲಾಗಿದೆ. ಕಚೇರಿಯಲ್ಲಿ ಜಿಲ್ಲಾಧಿಕಾರಿ ಎನ್‌ಒಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಎನ್‌ಒಸಿ, ಗುಡ್ಡಗಾಡು ಪ್ರದೇಶ ಸಂರಕ್ಷಣಾ ಪ್ರಾಧಿಕಾರ ಎನ್‌ಒಸಿ, ಅಗ್ನಿಶಾಮಕ ಇಲಾಖೆ ಎನ್‌ಒಸಿ ಇತ್ಯಾದಿಗಳ ಬಗ್ಗೆ ಯಾವುದೇ ದಾಖಲೆ ಕಂಡುಬಂದಿಲ್ಲ.

ಇಕ್ಕರೈ ಬೊಳುವಂಪಟ್ಟಿ ಪಂಚಾಯಿತಿಯೊಂದಿಗೆ ಪರಿಶೀಲಿಸಿದಾಗ, ಪಂಚಾಯಿತಿ ಅಧ್ಯಕ್ಷರಿಂದ ಯಾವುದೇ ಅನುಮತಿ ನೀಡಲಾಗಿಲ್ಲ ಎಂದು ಸಲ್ಲಿಸಲಾಗಿದೆ. ಧಾರ್ಮಿಕ ಕಟ್ಟಡಕ್ಕೆ ಜಿಲ್ಲಾಧಿಕಾರಿ ಎನ್‌ಒಸಿ ನೀಡಿಲ್ಲ ಎಂದು ಸಲ್ಲಿಸಲಾಗಿದೆ.

”ಜಿಲ್ಲೆಯ ಪಟ್ಟಣ ಮತ್ತು ಗ್ರಾಮ ಯೋಜನೆ ಜಂಟಿ ನಿರ್ದೇಶಕರು, ಅರ್ಜಿದಾರರು ಮತ್ತು ಇಶಾ ಫೌಂಡೇಶನ್ ಸಲ್ಲಿಸಬಹುದಾದ ದಾಖಲೆಗಳನ್ನು ಪರಿಗಣಿಸುತ್ತಾರೆ. ಜಾರಿಯಲ್ಲಿರುವ ಅನುಮತಿಯ ಬಗ್ಗೆ ಪರಿಶೀಲಿಸುತ್ತಾರೆ. ಅದು ಕ್ರಮಬದ್ಧವಾಗಿಲ್ಲದಿದ್ದರೆ, ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬೇಕು. ಯೋಜನೆ ಮತ್ತು ನಿರಾಕ್ಷೇಪಣಾ ಪ್ರಮಾಣಪತ್ರಕ್ಕೆ ಅನುಗುಣವಾಗಿ ನಿರ್ಮಿಸಲಾಗದ ಕಟ್ಟಡಕ್ಕೆ ಸಂಬಂಧಿಸಿದಂತೆ ತ್ವರಿತವಾಗಿ ಕ್ರಮಕೈಗೊಳ್ಳಬೇಕು” ಎಂದು ನ್ಯಾಯಾಲಯವು ಆದೇಶಿಸಿದೆ.

ಇದನ್ನೂ ಓದಿ: ಇಶಾ ಫೌಂಡೇಶನ್‌ನ ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಅನುಮತಿ ನೀಡಿದ ರಾಜ್ಯ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...