Homeಮುಖಪುಟಮುಜಾಫರ್‌ನಗರ ಶಾಲಾ ವೀಡಿಯೊ ಜಿ 20 ಸಭೆಯಲ್ಲಿ ತೋರಿಸಿ: ಬಿಜೆಪಿಗೆ ಅಖಿಲೇಶ್ ಯಾದವ್ ಆಗ್ರಹ

ಮುಜಾಫರ್‌ನಗರ ಶಾಲಾ ವೀಡಿಯೊ ಜಿ 20 ಸಭೆಯಲ್ಲಿ ತೋರಿಸಿ: ಬಿಜೆಪಿಗೆ ಅಖಿಲೇಶ್ ಯಾದವ್ ಆಗ್ರಹ

- Advertisement -
- Advertisement -

ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ಶಾಲಾ ಶಿಕ್ಷಕಿಯೋರ್ವರು ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯುವಂತೆ ಸಹಪಾಠಿಗಳಿಗೆ ಹೇಳುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಉತ್ತರ ಪ್ರದೇಶದ  ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಮತ್ತು ಜಿ 20 ಸಭೆಯಲ್ಲಿ ಘಟನೆಯ ವೀಡಿಯೊವನ್ನು ತೋರಿಸಿ ಎಂದು ಬಿಜೆಪಿಗೆ ಆಗ್ರಹಿಸಿದ್ದಾರೆ.

ವಿಡಿಯೋ ವೈರಲ್ ಬೆನ್ನಲ್ಲೇ ಬಿಜೆಪಿ ಪಕ್ಷದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ ಅಖಿಲೇಶ್ ಯಾದವ್, ಬಿಜೆಪಿಗರು ದೇಶದಲ್ಲಿ ದ್ವೇಷವನ್ನು ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದರು. ಶಿಕ್ಷಕಿ ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯುವಂತೆ  ಸಹಪಾಠಿ ವಿದ್ಯಾರ್ಥಿಗಳಿಗೆ ಹೇಳುವುದು ಬಿಜೆಪಿಯ ದ್ವೇಷ  ಹರಡುವ ಅಜೆಂಡಾದ ಫಲಿತಾಂಶವಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅಖಿಲೇಶ್ ಯಾದವ್, ಜಿ 20 ಸಭೆಯಲ್ಲಿ ಘಟನೆಯ ವೀಡಿಯೊವನ್ನು ತೋರಿಸುವಂತೆ  ಬಿಜೆಪಿ ಪಕ್ಷವನ್ನು ಕೇಳಿದ್ದಾರೆ. ಜಿ 20 ಅಧ್ಯಕ್ಷ ಸ್ಥಾನವನ್ನು ಭಾರತ ಪಡೆದಿರುವುದರಿಂದ ಈ ಬಾರಿ ಜಿ 20 ಸಭೆಯನ್ನು ಭಾರತದಲ್ಲಿ ನಡೆಯಲಿದೆ.

ಅಖಿಲೇಶ್ ಯಾದವ್ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಹೇಳಿಕೆಯ  ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ  ಹಂಚಿಕೊಂಡಿದ್ದು,  G20ನಲ್ಲಿ ಈ ವಿಡಿಯೋವನ್ನು ತೋರಿಸುವ ಮೂಲಕ  ದ್ವೇಷದ ಅಜೆಂಡಾ ಸರಿಯಾಗಿದೆ ಎಂದು ಸಾಬೀತುಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಮುಜಾಫರ್‌ನಗರದ ವೈರಲ್ ವೀಡಿಯೊದಲ್ಲಿ, ಶಿಕ್ಷಕಿಯೊಬ್ಬರು ಅಲ್ಪಸಂಖ್ಯಾತ ಸಮುದಾಯದ ಮಗುವಿಗೆ ಇತರ ಮಕ್ಕಳಿಗೆ ಥಳಿಸಲು ಹೇಳುವುದು ನೋಡಿದೆ.  ಇದರಲ್ಲಿ ಶಿಕ್ಷಕಿ ಎರಡು ವಿಚಾರದಲ್ಲಿ ಅಪರಾಧಿ, ಆಕೆ ಬಾಲಕನಿಗೆ ಥಳಿಸಿದ್ದಾಳೆ ಮತ್ತು ಇತರ ಮಕ್ಕಳನ್ನು ಕೆರಳುವಂತೆ ಮಾಡಿದ್ದಾಳೆ. ಬಿಜೆಪಿ ಸರ್ಕಾರ ಈ ವೀಡಿಯೊವನ್ನು ತೋರಿಸಿ G20 ಸಭೆಯಲ್ಲಿ ತಮ್ಮ ದ್ವೇಷದ ಅಜೆಂಡಾ ಹೇಗೆ ಸರಿ ಎಂಬುದನ್ನು ಸಾಬೀತುಪಡಿಸಬೇಕು. ಅಂತಹ ಶಿಕ್ಷಕಿ ಸಮಾಜಕ್ಕೆ ಕಳಂಕ, ಇಡೀ ದೇಶದ ಶಿಕ್ಷಕರು ಆ ಶಿಕ್ಷಕಿಯ ವಿರುದ್ಧ  ಧ್ವನಿ ಎತ್ತಬೇಕು ಎಂದು ಅಖಿಲೇಶ್ ಯಾದವ್ ಆಗ್ರಹಿಸಿದ್ದಾರೆ.

ಮುಜಾಫರ್‌ನಗರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಶಿಕ್ಷಕಿಯೊಬ್ಬರು  ಮುಸ್ಲಿಂ  ವಿದ್ಯಾರ್ಥಿಗೆ ಹೊಡೆಯುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಸೂಚಿಸಿದ್ದು, ವಿದ್ಯಾರ್ಥಿಗಳು ಒಬ್ಬೊಬ್ಬರಾಗಿ ಮಗುವಿನ ಬಳಿ ಬಂದು ಮುಖಕ್ಕೆ ಮತ್ತು ಬೆನ್ನಿಗೆ ಹೊಡೆಯುತ್ತಾರೆ. ಇಡೀ ಘಟನೆಯನ್ನು ಕ್ಯಾಮರಾದಲ್ಲಿ ಚಿತ್ರೀಕರಿಸಲಾಗಿದೆ. ಇದೀಗ ವಿಡಿಯೋ ಭಾರಿ ವೈರಲ್ ಆಗಿದ್ದು ವ್ಯಾಪಕವಾದ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನು ಓದಿ: ದಲಿತ ಬಾಲಕ  ಶಾಲಾ ಕೊಠಡಿಯಲ್ಲಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆ; ಕೊಲೆ ಆರೋಪಿಸಿದ ಕುಟುಂಬ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...