Homeಕರ್ನಾಟಕ'ಟೋಬಿ' ಚಿತ್ರ ಚೆನ್ನಾಗಿಲ್ಲ ಎಂದ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನ

‘ಟೋಬಿ’ ಚಿತ್ರ ಚೆನ್ನಾಗಿಲ್ಲ ಎಂದ ಮಹಿಳೆಗೆ ಅವಾಚ್ಯ ಪದಗಳಿಂದ ನಿಂದಿಸಿ, ಹಲ್ಲೆಗೆ ಯತ್ನ

- Advertisement -
- Advertisement -

ಮೈಸೂರಿನ ಸಂಗಮ್ ಚಿತ್ರಮಂದಿರದಲ್ಲಿ ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಚಿತ್ರ ವೀಕ್ಷಿಸಿ ಚಿತ್ರಮಂದಿರದಿಂದ ಮಹಿಳೆಯೊಬ್ಬರು ಯುಟ್ಯೂಬ್ ಚಾನೆಲ್ ಒಂದಕ್ಕೆ ಪ್ರತಿಕ್ರಿಸುವಾಗ ‘ಚಿತ್ರ ಚೆನ್ನಾಗಿಲ್ಲ’ ಎಂದು ಹೇಳಿದ್ದಾರೆ. ಅದನ್ನು ಕೇಳಿಸಿಕೊಂಡ ವ್ಯಕ್ತಿಯೋರ್ವ ಕನ್ನಡ ಸಿನಿಮಾ ಚೆನ್ನಾಗಿಲ್ಲ ಅಂತೀಯಲ್ಲ ಎಂದು ಅವಾಚ್ಯ ಪದಗಳಿಂದ ನಿಂದಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದೆ.

ಯಾವುದೇ ಚಿತ್ರ ಬಿಡುಗಡೆಯಾದ ದಿನ ಚಿತ್ರಮಂದಿರದ ಮುಂದೆ ಮಾಧ್ಯಮ ಪ್ರತಿನಿಧಿಗಳು ಬಂದು ಚಿತ್ರ ಹೇಗಿದೆ ಎಂದು ಪ್ರೇಕ್ಷಕರ ಅಭಿಪ್ರಾಯಗಳನ್ನು ಕೇಳುವುದು ಸಹಜವಾಗಿದೆ. ಅದೇ ರೀತಿ ಟೋಬಿ ಚಿತ್ರಕ್ಕೂ ಸಹ ಚಿತ್ರ ಹೇಗಿದೆ ಹೇಳಿ ಎಂದು ಯುಟ್ಯೂಬ್ ಚಾನೆಲ್ ಪ್ರತಿನಿಧಿಯೊಬ್ಬರು ಚಿತ್ರ ವೀಕ್ಷಿಸಿ ಹೊರಬಂದ ಮಹಿಳೆಯನ್ನು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಅವರು ಚೆನ್ನಾಗಿಲ್ಲ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆದರೆ ಅಲ್ಲಿದ್ದ ವ್ಯಕ್ತಿಯೊಬ್ಬ ಆ ಮಹಿಳೆಯನ್ನು ನಿಂದಿಸಿ, ಹಲ್ಲೆಗೆ ಮುಂದಾಗಿದ್ದಾನೆ.

ಮೈಸೂರಿನ ಸಂಗಮ್ ಚಿತ್ರಮಂದಿರದಲ್ಲಿ ಮೊದಲ ಪ್ರದರ್ಶನ ಮುಗಿದ ಬಳಿಕ ಮಾತನಾಡಿದ್ದ ಈ ಮಹಿಳೆ ಚಿತ್ರ ಚೆನ್ನಾಗಿಲ್ಲ ಎಂದು ನೇರವಾಗಿ ಕ್ಯಾಮೆರಾ ಮುಂದೆ ನಿಂತು ಹೇಳಿದ್ದಾರೆ. ಇಷ್ಟಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಕನ್ನಡ ಸಿನಿಮಾ ಚೆನ್ನಾಗಿಲ್ಲ ಅಂತೀಯಲ್ಲ ಅವಾಚ್ಯ ಪದಗಳನ್ನು ಬಳಸಿ ಆಕೆಯನ್ನು ನೂರಾರು ಜನರ ಮುಂದೆ ನಿಂದಿಸಿದ್ದಾನೆ.

ಚಿತ್ರ ಚೆನ್ನಾಗಿಲ್ಲ ಅನ್ನೋಕೆ ನೀನ್ಯಾರು, ಚಿತ್ರ ಚೆನ್ನಾಗಿದೆ, ಚಿತ್ರ ನೋಡಿ ಹೇಗಿದೆ ಎಂದು ಹೇಳಲು ನಿನಗೆ ಯಾರು ಹೇಳಿದ್ರು? ಎಂದೆಲ್ಲಾ ಜೋರು ದನಿಯಲ್ಲಿ ಮಾತನಾಡಿದ್ದಾನೆ. ಕನ್ನಡ ಚಿತ್ರವೊಂದನ್ನು ನೋಡಲು ಬಂದ ಮಹಿಳೆಗೆ ವ್ಯಕ್ತಿಯೊಬ್ಬ ಅತಿ ಕೆಟ್ಟ ಪದ ಬಳಕೆ ಮಾಡುತ್ತಿದ್ದರೂ ಅಲ್ಲಿ ನೆರೆದಿದ್ದ ಪ್ರತಿಯೊಬ್ಬರೂ ಸಹ ಆಕೆಯದ್ದೆ ತಪ್ಪು, ಚಿತ್ರ ಚೆನ್ನಾಗಿಲ್ಲ ಎಂದಿದ್ದೇ ತಪ್ಪು ಎಂದಿದ್ದಾರೆ.

ಮಹಿಳೆಯನ್ನು ನಿಂದಿಸಿ, ಆಕೆಯ ಮೇಲೆ ಹಲ್ಲೆಗೆ ಮುಂದಾದ ವ್ಯಕ್ತಿ ಚಿತ್ರ ತಂಡಕ್ಕೆ ಸಂಬಂಧಿಸಿದವರೋ ಅಲ್ಲವೋ ಎನ್ನುವ ಬಗ್ಗೆ ತಿಳಿದುಬಂದಿಲ್ಲ.

ಈ ಘಟನೆ ನಡೆಯುತ್ತಿದ್ದಾಗ ಮಧ್ಯ ಪ್ರವೇಶಿಸಿದ ಚಿತ್ರಮಂದಿರದ ಮ್ಯಾನೇಜರ್, ಆ ಮಹಿಳೆಯನ್ನು ಅಲ್ಲಿಂದ ಕಳುಹಿಸಿದ್ದಾರೆ. ಆನಂತರ ಮಾಧ್ಯಮದ ಎದುರು ಮಾತನಾಡಿದ ಅವರು, ”ಆಕೆ ಡ್ರಗ್ ಅಡಿಕ್ಟ್ ಅನಿಸುತ್ತೆ, ಯಾರೋ ಚಿತ್ರ ಚೆನ್ನಾಗಿಲ್ಲ ಅಂತ ಹೇಳಿ ಕಳುಹಿಸಿದ್ದಾರೆ ಅನಿಸುತ್ತದೆ. ನಾನು ಚಿತ್ರ ನೋಡಿದೆ, ಆಕೆ ಹೇಳುವ ಹಾಗಿಲ್ಲ” ಎಂದು ಮಹಿಳೆಯ ವಿರುದ್ಧವೇ ಮಾತನಾಡಿದ್ದಾರೆ.

ಚಿತ್ರಮಂದಿರದ ಅಂಗಳದಲ್ಲಿ ತನ್ನ ಪರ ಯಾರೊಬ್ಬರೂ ಮಾತನಾಡದೇ ಇದ್ದಾಗ ಆ ಮಹಿಳೆ ಅಲ್ಲಿಂದ ನೋವಿನಿಂದಲೇ ಹೊರನಡೆದಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ಅನೇಕರು ಚಿತ್ರ ಚೆನ್ನಾಗಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು, ಚಿತ್ರಮಂದಿರಕ್ಕೆ ಚಿತ್ರಗಳನ್ನು ವೀಕ್ಷಿಸುವ ಪ್ರೇಕ್ಷಕರು ಚಿತ್ರ ಸೂಪರ್ ಎಂದು ಹೇಳಲೇಬೇಕಾ? ಎಂಬ ಪ್ರಶ್ನೆ ಮಾಡಿದ್ದಾರೆ.

”ನಮ್ಮ ಸ್ವಂತ ಹಣದಿಂದ ಟಿಕೆಟ್ ಖರೀದಿಸಿ ಚಿತ್ರ ನೋಡಿರುತ್ತೇವೆ. ಚಿತ್ರ ಹೇಗಿದೆ ಎಂದು ಹೇಳುವ ಎಲ್ಲಾ ರೀತಿಯ ಹಕ್ಕು ನಮಗೆ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಯಾರಿಗೂ ಇಲ್ಲ” ಎಂದು ಆಕ್ರೋಶದ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಟೋಬಿ ಚಿತ್ರ ಬೃಹತ್ ನಿರೀಕ್ಷೆಯೊಂದಿಗೆ ಚಿತ್ರಮಂದಿರಗಳ ಅಂಗಳಕ್ಕೆ ಬಂದಿದೆ. ಆದರೆ ಮೊದಲ ದಿನ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಕೆಲವರು ಚಿತ್ರ ಮಾಸ್ಟರ್‌ಪೀಸ್ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರೆ, ಇನ್ನೂ ಕೆಲವರು ಚಿತ್ರ ನಿರೀಕ್ಷಿಸಿದ ರೇಂಜ್‌ಗೇನೂ ಇಲ್ಲ, ಒಮ್ಮೆ ನೋಡಬಹುದು ಎಂಬ ಟ್ವೀಟ್‌ಗಳನ್ನು ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...