Homeಮುಖಪುಟಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುತ್ತೇವೆ ಎನ್ನುವ ರಾಜ್ಯಪಾಲರು, ಮಣಿಪುರ-ಹರಿಯಾಣ ವಿಚಾರದಲ್ಲಿ ಮೌನ ಯಾಕೆ?: ಭಗವಂತ್ ಮಾನ್

ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುತ್ತೇವೆ ಎನ್ನುವ ರಾಜ್ಯಪಾಲರು, ಮಣಿಪುರ-ಹರಿಯಾಣ ವಿಚಾರದಲ್ಲಿ ಮೌನ ಯಾಕೆ?: ಭಗವಂತ್ ಮಾನ್

- Advertisement -
- Advertisement -

ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಬೆದರಿಕೆ ಹಾಕುತ್ತಿದ್ದಾರೆ. ಆದರೆ ಮಣಿಪುರ ಮತ್ತು ಹರಿಯಾಣದಲ್ಲಿ ಅವರ ಸಹವರ್ತಿಗಳು ಅಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಮೌನ ವಹಿಸುತ್ತಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶನಿವಾರ ಹೇಳಿದ್ದಾರೆ.

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡುವುದಾಗಿ ಮತ್ತು ತಮ್ಮ ಪತ್ರಗಳಿಗೆ ಉತ್ತರಿಸದಿದ್ದರೆ ಕ್ರಿಮಿನಲ್ ಮೊಕದ್ದಮೆ ಹೂಡಬೇಕಾಗುತ್ತದೆ ಎಂದು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಶುಕ್ರವಾರ ಭಗವಂತ್ ಮಾನ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು.

ಪುರೋಹಿತ್ ತಮ್ಮ ಅಧಿಕಾರದ ವ್ಯಾಪ್ತಿಯ ಹೊರತಾದ ಏಳು ಪತ್ರಗಳಿಗೆ ನಾನು ಪ್ರತಿಕ್ರಿಯಿಸಲಿಲ್ಲ, ಇನ್ನುಳಿದ ಎಲ್ಲದಕ್ಕೂ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ ಎಂದು ಮಾನ್ ಹೇಳಿದ್ದಾರೆ.

“ರಾಜ್ಯಪಾಲರು ಪಂಜಾಬ್‌ನ ಶಾಂತಿಪ್ರಿಯ ಜನರ ಮೇಲೆ ರಾಷ್ಟ್ರಪತಿ ಆಳ್ವಿಕೆ ಹೇರುತ್ತೇನೆ ಎನ್ನುವುದನ್ನು ನಾನು ಬೆದರಿಕೆ” ಎಂದು ಕರೆಯುತ್ತೇನೆ.

”ಅವರು 356ನೇ ವಿಧಿಯನ್ನು ಶಿಫಾರಸು ಮಾಡುತ್ತೇನೆ ಮತ್ತು ರಾಜ್ಯಪಾಲರ ಆಳ್ವಿಕೆಯನ್ನು ಶಿಫಾರಸು ಮಾಡುತ್ತೇನೆ ಎಂದು ಹೇಳಿದ್ದಾರೆ” ಎಂದು ಮಾನ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿ ಒತ್ತಾಯಿಸಿರುವುದು ‘ದ್ವೇಷದ ಸಂಸ್ಕೃತಿ’: ಪ್ರತಿಪಕ್ಷಗಳಿಂದ ವಾಗ್ದಾಳಿ

”ರಾಜ್ಯಪಾಲರು ನಮಗೆ 16 ಪತ್ರಗಳನ್ನು ಬರೆದಿದ್ದಾರೆ. ಅವುಗಳಲ್ಲಿ ಒಂಬತ್ತು ಪತ್ರಗಳಿಗೆ ಪ್ರತಿಕ್ರಿಯಿಸಲಾಗಿದೆ ಮತ್ತು ಉಳಿದವುಗಳಿಗೂ ವಿವರವಾದ ಉತ್ತರ ನೀಡುತ್ತೇವೆ. ರಾಜ್ಯಪಾಲರು ಆತುರದಿಂದ ಪತ್ರ ಬರೆದು ತಕ್ಷಣ ಉತ್ತರ ನಿರೀಕ್ಷಿಸುವುದು ಬೇಡ” ಎಂದರು.

”ನಮ್ಮ ಸರ್ಕಾರವು ಡ್ರಗ್ಸ್ ಹಾವಳಿಯನ್ನು ನಿಭಾಯಿಸಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ, ಕಳ್ಳಸಾಗಣೆದಾರರ ಆಸ್ತಿಗಳನ್ನು ವಶಪಡಿಸಿಕೊಳ್ಳುವುದು, ದಾಳಿ ಮಾಡುವುದು ಮತ್ತು ದರೋಡೆಕೋರರ ವಿರುದ್ಧದ ಕಾರ್ಯಪಡೆಯ ರಚನೆಯೊಂದಿಗೆ ದರೋಡೆಕೋರರ ಹಿಂದೆ ಹೋಗುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿಲ್ಲ ಎಂದು ರಾಜ್ಯಪಾಲರು ಆರೋಪಿಸುವುದು ಸರಿಯಲ್ಲ” ಎಂದು ಮಾನ್ ಹೇಳಿದ್ದಾರೆ.

“ನಾನು ಗವರ್ನರ್ ಸಾಹಬ್ ಅವರನ್ನು ಕೇಳಲು ಬಯಸುತ್ತೇನೆ, ನುಹ್ ನಲ್ಲಿ ಏನಾಯಿತು? ಅಲ್ಲಿ ನಡೆದ ಕೋಮು ಘರ್ಷಣೆಗಳು, ಹಿಂಸಾಚಾರ ಮತ್ತು ಕರ್ಫ್ಯೂ ವಿಧಿಸಬೇಕಾದ ಬಗ್ಗೆ ಹರಿಯಾಣ ಮುಖ್ಯಮಂತ್ರಿ ಖಟ್ಟರ್ ಅವರಿಗೆ ಹರಿಯಾಣ ರಾಜ್ಯಪಾಲರು ನೋಟಿಸ್ ನೀಡಿದ್ದಾರೆಯೇ? ಹರಿಯಾಣ ರಾಜ್ಯಪಾಲರು ಖಟ್ಟರ್‌ಗೆ ಯಾವುದಾದರೂ ಪತ್ರ ಬರೆದಿದ್ದಾರೆಯೇ? ಇಲ್ಲ, ಏಕೆಂದರೆ ಕೇಂದ್ರದಲ್ಲಿ ಅವರದೇ ಸರ್ಕಾರ ಆಡಳಿತ ನಡೆಸುತ್ತಿದೆ” ಎಂದು ಅವರು ಹೇಳಿದರು.

”ನಮ್ಮ ರಾಜ್ಯಪಾಲರು ಪಂಜಾಬ್‌ನಲ್ಲಿನ ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಕಾಳಜಿವಹಿಸಿದ್ದಾರೆ, ಆದರೆ ಜನಾಂಗೀಯ ಹಿಂಸಾಚಾರದಿಂದ ಕೂಡಿದ ಮಣಿಪುರದ ಬಗ್ಗೆ ಎಂದಿಗೂ ಹೇಳಿಕೆ ನೀಡಲಿಲ್ಲ. ಮಣಿಪುರದಲ್ಲಿ ಸಂವಿಧಾನವು ಅನ್ವಯಿಸುವುದಿಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

”ಉತ್ತರ ಪ್ರದೇಶದಲ್ಲಿ ಪತ್ರಕರ್ತರ ಮುಂದೆಯೇ ಕೊಲೆ ನಡೆಯುತ್ತದೆ, ಅಲ್ಲಿಯ ರಾಜ್ಯಪಾಲರು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಪ್ರಶ್ನಿಸುವ ಯಾವುದೇ ಪತ್ರವನ್ನು ನೀಡಲು ಧೈರ್ಯ ಮಾಡುತ್ತಾರೆಯೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಪಂಜಾಬ್, ದೆಹಲಿ, ಕರ್ನಾಟಕ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ಹೊರತುಪಡಿಸಿ ಹೆಚ್ಚಿನ ಜನರಿಗೆ ಬೇರೆ ರಾಜ್ಯಪಾಲರ ಹೆಸರುಗಳು ತಿಳಿದಿರುವುದಿಲ್ಲ. ಆ ಆರು ರಾಜ್ಯದ ರಾಜ್ಯಪಾಲರ ಹೆಸರು ತಿಳಿದಿರಲು ಕಾರಣ ಅಲ್ಲಿ ಬಿಜೆಪಿಯೇತರ ಸರ್ಕಾರಗಳು ಅಧಿಕಾರದಲ್ಲಿರುತ್ತದೆ” ಎಂದು ಮಾನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...