Homeಮುಖಪುಟಪಕ್ಷ ಬಿಟ್ಟವರ ವಿರುದ್ಧ ಪವಾರ್‌ ಗೆರಿಲ್ಲಾ ಯುದ್ಧತಂತ್ರ ಅನುಸರಿಸುತ್ತಿದ್ದಾರೆ: ಸಂಜಯ್ ರಾವುತ್

ಪಕ್ಷ ಬಿಟ್ಟವರ ವಿರುದ್ಧ ಪವಾರ್‌ ಗೆರಿಲ್ಲಾ ಯುದ್ಧತಂತ್ರ ಅನುಸರಿಸುತ್ತಿದ್ದಾರೆ: ಸಂಜಯ್ ರಾವುತ್

- Advertisement -
- Advertisement -

ಪಕ್ಷ ಬಿಟ್ಟವರ ವಿರುದ್ಧ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ ಅವರು ಗೆರಿಲ್ಲಾ ಯುದ್ಧತಂತ್ರವನ್ನು ಅನುಸರಿಸುತ್ತಿದ್ದಾರೆ ಎಂದು ಶಿವಸೇನಾದ (ಯುಟಿಬಿ) ವಕ್ತಾರ ಸಂಜಯ್ ರಾವುತ್ ಹೇಳಿದ್ದಾರೆ.

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಮ್ಮ ಪಕ್ಷವೂ ರಣರಂಗದಲ್ಲಿ ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಿದೆ” ಎಂದಿದ್ದಾರೆ.

”ಪಕ್ಷ ಬಿಟ್ಟವರ ವಿರುದ್ಧ ಶರದ್ ಪವಾರ್ ಹಾಗೂ ಅವರ ಸಂಗಡಿಗರು ಗೆರಿಲ್ಲಾ ಯುದ್ಧತಂತ್ರವನ್ನು ಅನುಸರಿಸುತ್ತಿದ್ದಾರೆ. ಶರದ್ ಪವಾರ್ ಯಾವತ್ತೂ ಬಿಜೆಪಿ ಜತೆ ಕೈ ಜೋಡಿಸುವುದಿಲ್ಲ. ಅವರು ಮಹಾ ವಿಕಾಸ್‌ ಅಘಾಡಿ ಹಾಗೂ INDIA ಮೈತ್ರಿಕೂಟದ ಪುಮುಖ ನಾಯಕರು, ಅವರು ಎರಡು ಕಲ್ಲಿನ ಮೇಲೆ ಕಾಲಿಟ್ಟಿಲ್ಲ. ಶರದ್ ಪವಾರ್ ಬಗ್ಗೆ ಯಾರಿಗೂ ಅನುಮಾನ ಇಲ್ಲ” ಎಂದು ರಾವುತ್ ಹೇಳಿದ್ದಾರೆ.

ಶಿವಸೇನೆ ಹಾಗೂ ಎನ್‌ಸಿಪಿ ಎರಡೂ ಪಕ್ಷಗಳು ಒಡೆದುಹೋಗಿದ್ದರಿಂದ ನಷ್ಟವಾಗಿದೆ ಎನ್ನುವ ವಾದವನ್ನು ಸಂಜಯ್ ರಾವುತ್ ಅವರು ತಳ್ಳಿಹಾಕಿದ್ದಾರೆ.

ನಮ್ಮ ಪಕ್ಷ ವಿಭಜನೆಯಾಗಿಲ್ಲ: ಶರದ್ ಪವಾರ್

ಮತ್ತೊಂದೆಡೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಕೂಡ ತಮ್ಮ ಪಕ್ಷ ವಿಭಜನೆಯಾಗಿದೆ ಎನ್ನುವುದನ್ನು ನಿರಾಕರಿಸಿದ್ದಾರೆ. ”ಕೆಲವು ಶಾಸಕರು ಬಿಟ್ಟು ಹೋಗಿದ್ದು ನಿಜವಷ್ಟೇ, ಶಾಸಕರೆಂದರೆ ಇಡೀ ರಾಜಕೀಯ ಪಕ್ಷ ಅಲ್ಲ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜಯಂತ್ ಪಾಟೀಲ್ ಅವರೇ ರಾಜ್ಯ ಘಟಕವನ್ನೂ ಮುನ್ನಡೆಸುತ್ತಿದ್ದಾರೆ. ಎನ್‌ಸಿಪಿಯಲ್ಲಿ ವಿಭಜನೆ ಉಂಟಾಗಿಲ್ಲ. ಕೆಲವು ಶಾಸಕರು ಪಕ್ಷ ಬಿಟ್ಟಿದ್ದಾರೆ ಎನ್ನುವುದು ನಿಜವಷ್ಟೇ.. ಆದರೆ ಶಾಸಕರೆಂದರೆ ಇಡೀ ರಾಜಕೀಯ ಪಕ್ಷ ಅಲ್ಲ, ಬಂಡಾಯಗಾರರ ಹೆಸರು ಹೇಳಿ ಅವರಿಗೆ ಯಾಕೆ ಪ್ರಾಮುಖ್ಯತೆ ಕೊಡಬೇಕು?” ಎಂದು ಪವಾರ್ ಅವರು ಪ್ರಶ್ನೆ ಮಾಡಿದ್ದಾರೆ.

ಶಿಂದೆ ನೇತೃತ್ವದ ಸರ್ಕಾರಕ್ಕೆ ಸೇರುವ ಬಗ್ಗೆ ಕೆಲವು ಶಾಸಕರು ಪತ್ರ ಬರೆದಿದ್ದಾರೆ. ಆದರೆ ಈ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನಾವು ಫ್ಯಾಸಿಸ್ಟ್‌ ಪ್ರವೃತ್ತಿಗಳನ್ನು ವಿರೋಧಿಸುತ್ತೇವೆ. ಕೇಂದ್ರ ತನಿಖಾ ತಂಡಗಳ ದುರ್ಬಳಕೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಅಜಿತ್ ಪವಾರ್ ಹಾಗೂ 8 ಶಾಸಕರು ಜುಲೈ 2ರಂದು ಏಕನಾಥ ಶಿಂದನೇತೃತ್ವದ ಸರ್ಕಾರವನ್ನು ಬೆಂಬಲಿಸಿದ್ದರು. ಅಜಿತ್ ಉಪ ಮುಖ್ಯಮಂತ್ರಿಯಾಗಿಯೂ ಕೆಲ ಶಾಸಕರು ಸಚಿವರಾಗಿಯೂ ಪ್ರಮಾಣವಚನ ಸ್ವೀಕಾರ ಮಾಡಿದ್ದರು.

ಇದನ್ನೂ ಓದಿ: ಪಂಜಾಬ್‌ನಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುತ್ತೇವೆ ಎನ್ನುವ ರಾಜ್ಯಪಾಲರು, ಮಣಿಪುರ-ಹರಿಯಾಣ ವಿಚಾರದಲ್ಲಿ ಮೌನ ಯಾಕೆ?: ಭಗವಂತ್ ಮಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...