Homeಮುಖಪುಟಮುಜಫರ್‌ನಗರ ಶಾಲೆಯ ವಿಡಿಯೋ ತೆಗೆದುಹಾಕುವಂತೆ ಸರ್ಕಾರ ತುರ್ತು ಆದೇಶ ಹೊರಡಿಸಿದೆ; ಕಾಂಗ್ರೆಸ್ ಆರೋಪ

ಮುಜಫರ್‌ನಗರ ಶಾಲೆಯ ವಿಡಿಯೋ ತೆಗೆದುಹಾಕುವಂತೆ ಸರ್ಕಾರ ತುರ್ತು ಆದೇಶ ಹೊರಡಿಸಿದೆ; ಕಾಂಗ್ರೆಸ್ ಆರೋಪ

- Advertisement -
- Advertisement -

ಮುಜಫರ್‌ನಗರದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಕ್ಷಕಿಯೊಬ್ಬರು ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯುವಂತೆ ಸಹಪಾಠಿ ವಿದ್ಯಾರ್ಥಿಗಳಿಗೆ ಸೂಚಿಸುವ ವಿಡಿಯೋ ಭಾರೀ ವೈರಲ್ ಆಗಿತ್ತು. ಈ ವಿಡಿಯೋವನ್ನು ತಕ್ಷಣದಿಂದ ತೆಗೆದುಹಾಕುವಂತೆ ಎಕ್ಸ್ ( ಟ್ವಿಟರ್‌) ಗೆ ಸರಕಾರ ತುರ್ತು ಆದೇಶ ನೀಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದಲ್ಲದೆ  ಶಿಕ್ಷಕಿಯನ್ನು ಬಂಧಿಸಲು ಆಗ್ರಹಿಸಿದ  ಯುಆರ್‌ಎಲ್‌ಗಳು ಮತ್ತು ಹ್ಯಾಶ್‌ಟ್ಯಾಗ್‌ಗಳಿಗೆ ನಿರ್ಬಂಧಿಸಲು ಸರ್ಕಾರ ಹೆಚ್ಚುವರಿ ಆದೇಶಗಳನ್ನು ನೀಡಿದೆ ಎಂದು ಕಾಂಗ್ರೆಸ್ ನಾಯಕಿ ಸುಪ್ರಿಯಾ  ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ವೈರಲ್ ಆದ ನಂತರ ಘಟನೆಯು ಟ್ವಿಸ್ಟ್‌ನ್ನು ಪಡೆದುಕೊಂಡಿದೆ. ಶಿಕ್ಷಕಿಯ ನಡೆಯನ್ನು ಹಲವು ಪ್ರಬಲ ವ್ಯಕ್ತಿಗಳು ಖಂಡಿಸಿ ಕ್ರಮಕ್ಕೆ ಆಗ್ರಹಿಸಿದ್ದರು. ಶಿಕ್ಷಕಿ ತ್ರಿಪ್ತ ತ್ಯಾಗಿ ಮುಸ್ಲಿಂ ಮಗುವಿಗೆ ಥಳಿಸಲು ಇತರ ಮಕ್ಕಳನ್ನು ಪ್ರೇರೇಪಿಸಿದ್ದಾರೆ ಎನ್ನುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಶಿಕ್ಷಕಿ ತಾನು ಅಂಗವಿಕಲೆ ಎಂದು ಹೇಳಿಕೊಂಡಿದ್ದಾಳೆ ಮತ್ತು ಅದಕ್ಕಾಗಿಯೇ ಬಾಲಕನಿಗೆ ಇತರ ಮಕ್ಕಳಲ್ಲಿ ಹೊಡೆಯುವಂತೆ ಹೇಳಿದೆ ಎಂದು ಸಮಜಾಯಿಸಿ ನೀಡಿದ್ದಾರೆ.

ವೈರಲ್ ಮಾಡಿದ ವೀಡಿಯೊವನ್ನು ಎಡಿಟ್ ಮಾಡಿ ಕತ್ತರಿಸಲಾಗಿದೆ, ನನಗೆ ಅಂತಹ ಉದ್ದೇಶ ಇರಲಿಲ್ಲ. ನಮ್ಮಲ್ಲಿ ಹಿಂದೂಗಳು ಮತ್ತು ಮುಸ್ಲಿಮರು ಒಗ್ಗಟ್ಟಿನಿಂದ ಇರುತ್ತಾರೆ ಮತ್ತು ನಮ್ಮ ಶಾಲೆಯಲ್ಲಿ ಹೆಚ್ಚು ಮುಸ್ಲಿಂ ವಿದ್ಯಾರ್ಥಿಗಳಿದ್ದಾರೆ. ಮಗುವಿನ ಬಗ್ಗೆ ಕಟ್ಟು ನಿಟ್ಟಾಗಿರುವಂತೆ ಪೋಷಕರು ಹೇಳಿದ್ದರು. ಬಾಲಕ ಕಳೆದ 2 ತಿಂಗಳಿಂದ ಹೋಮ್‌ವರ್ಕ್ ಮಾಡುತ್ತಿರಲಿಲ್ಲ. ಹಾಗಾಗಿ ನಾನು 2-3 ವಿದ್ಯಾರ್ಥಿಗಳಿಗೆ ಅವನನ್ನು ಥಳಿಸಲು ಹೇಳಿದೆ ಎಂದು ಆರೋಪಿತ ಶಿಕ್ಷಕಿ ಹೇಳಿದ್ದಾರೆ.

ಇದನ್ನು ಓದಿ; ಮುಜಾಫರ್‌ನಗರ ಶಾಲಾ ವೀಡಿಯೊ ಜಿ 20 ಸಭೆಯಲ್ಲಿ ತೋರಿಸಿ: ಬಿಜೆಪಿಗೆ ಅಖಿಲೇಶ್ ಯಾದವ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...