Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿಸಿದ ಶಿಕ್ಷಕಿಯ ಕ್ರಮ ಖಂಡಿಸಿದ ಟ್ವೀಟ್‌ಗಳಿಗೆ ನಿರ್ಬಂಧ

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿಸಿದ ಶಿಕ್ಷಕಿಯ ಕ್ರಮ ಖಂಡಿಸಿದ ಟ್ವೀಟ್‌ಗಳಿಗೆ ನಿರ್ಬಂಧ

- Advertisement -
- Advertisement -

ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿಯೊಬ್ಬರು ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದೆ. ಈ ಘಟನೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದು, ಹಲವಾರು ಜನರು ಘಟನೆ ವಿರೋಧಿಸಿ ಎಕ್ಸಾನಲ್ಲಿ ಮಾಡಲಾದ ಟ್ವೀಟ್‌ಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ ಎಂದು ಹಲವು ದೂರಿದ್ದಾರೆ.

ಈ ಘಟನೆ ಗುರುವಾರ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ನಡೆದಿದೆ ಆದರೆ ಘಟನೆಯ ವಿಡಿಯೋ ಶುಕ್ರವಾರ ವೈರಲ್ ಆಗಿದೆ. ವಿಡಿಯೋದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಬಲವಾಗಿ ಹೊಡೆಯುವಂತೆ ಒತ್ತಾಯಿಸುವುದನ್ನು ಕಾಣಬಹುದು.

ಘಟನೆಯ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಟೀಕೆ ವ್ಯಕ್ತವಾಯಿತು. ಅನೇಕ ಜನರು ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನೂ ಕೆಲವರು ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನಲ್ಲಿರುವ ಅನೇಕ ಬಳಕೆದಾರರು ತಮ್ಮ ಟ್ವೀಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನು ಹಂಚಿಕೊಂಡಿದ್ದಾರೆ. ಅದು ಸೈಟ್‌ನಲ್ಲಿ ಇನ್ನು ಮುಂದೆ ಗೋಚರಿಸುವುದಿಲ್ಲ. ಭಾರತದಲ್ಲಿ ಈ ಪೋಸ್ಟ್‌ಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳಲಾಗಿದೆ.

ಶಾದಾಬ್ ಖಾನ್ ಅವರು ಮೊದಲು ಘಟನೆಯ ಬಗ್ಗೆ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಆದರೆ ಅವರ ಪೋಸ್ಟ್‌ಗಳನ್ನು ತಡೆಹಿಡಿಯಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಅನೇಕರ ಸಾಮಾಜಿಕ ಮಾಧ್ಯಮ ಬಳಕೆದಾರರ ಪೋಸ್ಕಗಳಿಗೂ ನಿರ್ಬಂಧ ಹೇರಲಾಗಿದೆ. ನಟಿ ಊರ್ಮಿಳಾ ಮಾತೋಂಡ್ಕರ್ ಮತ್ತು ಪತ್ರಕರ್ತರಾದ ರೋಹಿಣಿ ಸಿಂಗ್ ಮತ್ತು ಗಾರ್ಗಿ ರಾವತ್ ಸೇರಿದಂತೆ ಅನೇಕರು ತಮ್ಮ ಪೋಸ್ಟ್‌ನಲ್ಲಿ ಅವಹೇಳನಕಾರಿ ಭಾಷೆಯನ್ನು ಬಳಸದಿದ್ದರೂ ಅಥವಾ ತಪ್ಪು ಮಾಹಿತಿಯನ್ನು ಹರಡದಿದ್ದರೂ ಅವರ ಪೋಸ್ಟ್‌ಗಳನ್ನು ನಿರ್ಬಂಧಿಸಲಾಗಿದೆ ಹಾಗಾಗಿ ಅವರೂ ಕೂಡ ಏಕೆ ನಿರ್ಬಂಧಿಸಲಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರಿನಾಟೆ ಅವರು, ”ಮಗುವಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋವನ್ನು ನಿರ್ಬಂಧಿಸುವಂತೆ ಕೇಂದ್ರ ಸರ್ಕಾರ ಶುಕ್ರವಾರ ಟ್ವಿಟರ್‌ಗೆ ತುರ್ತು ಆದೇಶ ಹೊರಡಿಸಿದೆ. ಶನಿವಾರ ಬೆಳಿಗ್ಗೆ, ಪ್ರಕರಣದ ಕುರಿತು ಲಿಂಕ್‌ಗಳು ಮತ್ತು ಹ್ಯಾಶ್‌ಟ್ಯಾಗ್‌ಗಳನ್ನು ನಿರ್ಬಂಧಿಸಲು ಸರ್ಕಾರ ಹೆಚ್ಚುವರಿ ಆದೇಶಗಳನ್ನು ಹೊರಡಿಸಿದೆ” ಎಂದು ಅವರು ಹೇಳಿದ್ದಾರೆ.

”ಜಾಲವನ್ನು ಮುಚ್ಚುವುದರಿಂದ ಪರಿಹಾರ ಸಿಕ್ಕಲ್ಲ” – ಒಬ್ಬ ಶಿಕ್ಷಕನು ಎಷ್ಟು ನೀಚ ಮತ್ತು ಧರ್ಮಾಂಧತೆಯಿಂದ ತುಂಬಿದ್ದಾನೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಡಿಕೊಳ್ಳಬೇಕು. ಆ ಶಿಕ್ಷಕಿಯು ಧರ್ಮದ ಕಾರಣಕ್ಕಾಗಿ ಆ ಹುಡುಗನನ್ನು ಪ್ರತ್ಯೇಕಿಸುತ್ತಾಳೆ ಮತ್ತು ಅವನ ಸಹಪಾಠಿಗಳಂದ ಅವನಿಗೆ ಕಪಾಳಮೋಕ್ಷ ಮಾಡುತ್ತಾಳೆ” ಎಂದು ಶ್ರೀನೇಟ್ ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ವಿದ್ಯಾರ್ಥಿಗಳಿಂದ ಕಪಾಳಮೋಕ್ಷ ಮಾಡಿಸಿದ ಯುಪಿ ಶಿಕ್ಷಕಿ ವಿರುದ್ಧ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Our humble request To National child Right commission to take up this issue very seriously and see that such things should not take place in a anywhere parts of our country. Really a great shame to the teaching community. Allready we r facing community disharmony in our country, these incidents may lead to some more disaster in the country.

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...