Homeಕರ್ನಾಟಕಕರ್ನಾಟಕದ ಸತ್ಯ-ಪರಿಶೀಲನಾ ಘಟಕವು ಮುಕ್ತವಾಗಿರಬೇಕು: ಸರ್ಕಾರಕ್ಕೆ ಎಡಿಟರ್ಸ್ ಗಿಲ್ಡ್ ಮನವಿ

ಕರ್ನಾಟಕದ ಸತ್ಯ-ಪರಿಶೀಲನಾ ಘಟಕವು ಮುಕ್ತವಾಗಿರಬೇಕು: ಸರ್ಕಾರಕ್ಕೆ ಎಡಿಟರ್ಸ್ ಗಿಲ್ಡ್ ಮನವಿ

- Advertisement -
- Advertisement -

ಕರ್ನಾಟಕ ಸರ್ಕಾರ ರಚನೆ ಮಾಡಿರುವ ಸತ್ಯ-ಪರಿಶೀಲನಾ ಘಟಕದ ವ್ಯಾಪ್ತಿ ಮತ್ತು ಅಧಿಕಾರವನ್ನು ವ್ಯಾಖ್ಯಾನಿಸಬೇಕು ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಭಾನುವಾರ ಕೇಳಿಕೊಂಡಿದೆ. ಈ ಘಟಕವು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು. ಭಿನ್ನಾಭಿಪ್ರಾಯದ ಧ್ವನಿಗಳನ್ನು ಹತ್ತಿಕ್ಕುವ ಸಾಧನವಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಕಳೆದ ವಾರ ನಕಲಿ ಸುದ್ದಿಗಳು, ವೈಯಕ್ತಿಕ ಮಾಹಿತಿ ಕದಿಯುವ ಇಮೇಲ್‌ಗಳು (ಫಿಶಿಂಗ್ ಇಮೇಲ್‌ಗಳು) ಮತ್ತು ಸೈಬರ್ ಅಪರಾಧಗಳ ವಿರುದ್ಧ ಕ್ರಮ ಕೈಗೊಳ್ಳಲು ಸತ್ಯ ತಪಾಸಣೆ ಘಟಕವನ್ನು ಸ್ಥಾಪಿಸಲು ಅನುಮೋದನೆ ನೀಡಿತ್ತು. ಸುಳ್ಳು ಸುದ್ದಿ ಪ್ರಚಾರದ ವಿರುದ್ಧ ಕಾನೂನು ಜಾರಿಗೊಳಿಸುವುದಾಗಿ ರಾಜ್ಯ ಸರ್ಕಾರ ಹೇಳಿದೆ.

”ಈ ಘಟಕವು ನಕಲಿ ಸುದ್ದಿಗಳನ್ನು ಹರಡುವ ತಂಡಗಳನ್ನು ಪತ್ತೆಹಚ್ಚಲು ಕೆಲಸ ಮಾಡುತ್ತದೆ. ಅಂತಹ ಸುದ್ದಿಗಳ ಪ್ರಸಾರವನ್ನು ತಡೆಯುತ್ತದೆ ಮತ್ತು ಅದರ ಹಿಂದೆ ಇರುವವರಿಗೆ ಶಿಕ್ಷೆಯಾಗುವಂತೆ ಮಾಡುತ್ತದೆ” ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಘಟಕವು ಮೇಲ್ವಿಚಾರಣಾ ಸಮಿತಿ, ಸತ್ಯಶೋಧನಾ ತಂಡಗಳು ಮತ್ತು ಇತರ ವಿಭಾಗಗಳನ್ನು ಹೊರತುಪಡಿಸಿ ವಿಶ್ಲೇಷಣಾ ತಂಡಗಳನ್ನು ಒಳಗೊಂಡಿರುತ್ತದೆ.

”ಡೀಪ್ ಫೇಕ್” ತಂತ್ರಜ್ಞಾನದ ಬೆಳವಣಿಗೆಯು ತಪ್ಪು ಮಾಹಿತಿಯನ್ನು ಪ್ರಚಾರ ಮಾಡುವ ಸಂಭಾವ್ಯ ಸಾಧನವಾಗಿದೆ ಮತ್ತು ಅದನ್ನು ಪರಿಣಾಮಕಾರಿಯಾಗಿ ಎದುರಿಸಲು ವಿಶೇಷ ಪರಿಣತಿಯ ಅಗತ್ಯವಿದೆ ಎಂದು ಕರ್ನಾಟಕದ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸತ್ಯ ತಪಾಸಣೆ ಘಟಕವು ನಕಲಿ ಎಂದು ಟ್ಯಾಗ್ ಮಾಡುವ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಮತ್ತು ಸುದ್ದಿ ವರದಿಗಳನ್ನು ತೆಗೆದುಹಾಕಲಾಗುವುದು. ಸುಳ್ಳು ಸುದ್ದಿಗಳನ್ನು ಶೇರ್ ಮಾಡುವವರ ವಿರುದ್ಧ ಶಿಕ್ಷಾರ್ಹ ಕ್ರಮಗಳನ್ನು ಕೈಗೊಳ್ಳುವ ಅಧಿಕಾರ ಸರ್ಕಾರಕ್ಕೆ ಇರುತ್ತದೆ ಎಂದು ಖರ್ಗೆ ಅವರ ಸಚಿವಾಲಯ ತಿಳಿಸಿದೆ.

ಭಾನುವಾರ, ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಈ ಕ್ರಮದ ಬಗ್ಗೆ ತನ್ನ ಕಳವಳವನ್ನು ವ್ಯಕ್ತಪಡಿಸಿದೆ. ನಕಲಿ ವಿಷಯವನ್ನು ಪರಿಶೀಲಿಸುವ ಪ್ರಯತ್ನಗಳನ್ನು ಸರ್ಕಾರದ ವ್ಯಾಪ್ತಿಯಲ್ಲಿಲ್ಲದ ಸ್ವತಂತ್ರ ಸಂಸ್ಥೆಗಳು ಮಾಡಬೇಕು ಎಂದು ಹೇಳಿದ್ದಾರೆ.

”ಯಾವುದೇ ಮೇಲ್ವಿಚಾರಣಾ ಚೌಕಟ್ಟುಗಳು ಪೂರ್ವ ಸೂಚನೆ ನೀಡುವುದು, ಮೇಲ್ಮನವಿ ಸಲ್ಲಿಸುವ ಹಕ್ಕು ಮತ್ತು ನ್ಯಾಯಾಂಗ ಮೇಲ್ವಿಚಾರಣೆ ಸೇರಿದಂತೆ ನೈಸರ್ಗಿಕ ನ್ಯಾಯದ ತತ್ವಗಳನ್ನು ಅನುಸರಿಸಬೇಕು” ಎಂದು ಪತ್ರಿಕಾ ಸಂಸ್ಥೆ ಹೇಳಿದೆ.

”ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳು ಸೇರಿದಂತೆ ಎಲ್ಲಾ ಮಧ್ಯಸ್ಥಗಾರರ ಸೂಕ್ತ ಸಮಾಲೋಚನೆ ಮತ್ತು ಒಳಗೊಳ್ಳುವಿಕೆಯೊಂದಿಗೆ ಅಂತಹ ಘಟಕಗಳನ್ನು ಸ್ಥಾಪಿಸಬೇಕು” ಎಂದು ಹೇಳಿದೆ.

ಕೇಂದ್ರ ಸರ್ಕಾರದ ಐಟಿ ನಿಯಮಗಳು, 2023ರ ಸತ್ಯ ಪರಿಶೀಲನಾ ಘಟಕವನ್ನು ಸ್ಥಾಪಿಸಲು ಅನುಮತಿಸುವ ತಿದ್ದುಪಡಿಗಳ ವಿರುದ್ಧ ಈಗಾಗಲೇ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ ಎಂದು ಗಿಲ್ಡ್ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...