Homeಸಿನಿಮಾಕ್ರೀಡೆಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

ಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

- Advertisement -
- Advertisement -

ಭಾನುವಾರ ರಾತ್ರಿ ಬುಡಾಪೆಸ್ಟ್‌ನಲ್ಲಿ ನಡೆದ 2023ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ನೀರಜ್ ಚೋಪ್ರಾ ಮತ್ತು ಪಾಕಿಸ್ತಾನದ ಅರ್ಷದ್ ನದೀಮ್ ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಪಡೆದಿದ್ದಾರೆ. ನೀರಜ್ 88.17 ಮೀಟರ್‌ಗಳ ಬೃಹತ್ ಎಸೆತದೊಂದಿಗೆ ಚಾಂಪಿಯನ್ ಆದರು ಮತ್ತು ಅರ್ಷದ್ ತಮ್ಮ ಋತುವಿನ ಅತ್ಯುತ್ತಮ ದೂರವಾದ 87.82 ಮೀಟರ್‌ಗಳನ್ನು ಸಾಧಿಸುವ ಮೂಲಕ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಇದನ್ನು ಭಾರತ ಹಾಗೂ ಪಾಕಿಸ್ತಾನದ ನಡುವಿನ ಯುದ್ಧದಂತೆ ಪರಿಭಾವಿಸಿ ಚರ್ಚೆ ನಡೆಸಲಾಗುತ್ತಿದೆ. ಈ ಹಿಂದೆ ಕ್ರಿಕೆಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಸ್ಪರ್ಧೆಗಿಳಿದರೆ, ಅದನ್ನು ಸಾಕಷ್ಟು ಜನರು ಯುದ್ಧದಂತೆ ಭಾವಿಸುತ್ತಿದ್ದರು, ಮತ್ತೆ ಆ ಪಂದ್ಯವು ಅತಿಹೆಚ್ಚು ಸಂಖ್ಯೆಯ ಜನರನ್ನು ಸೆಳೆಯುತ್ತದೆ. ಕ್ರಿಕೆಟ್‌ನಲ್ಲಿ ಭಾರತ-ಪಾಕಿಸ್ತಾನದ ಪೈಪೋಟಿ, ಪ್ರೇಕ್ಷಕರನ್ನು ಅವರ ಆಸನಗಳ ತುದಿಯಲ್ಲಿ ಇರಿಸುತ್ತದೆ ಮತ್ತು ಇದನ್ನು ಸಾಮಾನ್ಯವಾಗಿ “ವಿಶ್ವ ಕ್ರೀಡೆಗಳಲ್ಲಿ ಅತಿದೊಡ್ಡ ಸ್ಪರ್ಧೆ” ಎಂದು ಪ್ರಶಂಸಿಸಲಾಗುತ್ತದೆ. ಅದರಂತೆ ಹಾಕಿ ಮತ್ತು ಕಬಡ್ಡಿಯಲ್ಲೂ ಕಂಡುಬರುತ್ತದೆ. ಇದೀಗ ನೀರಜ್ ಮತ್ತು ಅರ್ಷದ್ ಅವರ ಜಾವೆಲಿನ್ ಥ್ರೋ ನೋಡಿದ ಬಳಿಕ ಈ ಕ್ರೀಡೆಯೂ ಭಾರತ ಮತ್ತು ಪಾಕಿಸ್ತಾನ ನಡುವಿನ ಹೊಸ ಯುದ್ಧಭೂಮಿ ಎಂಬಂತೆ ಬಿಂಬಿಸಲಾಗುತ್ತಿದೆ.

ಭಾರತ-ಪಾಕಿಸ್ತಾನ ಬೆಳೆಯುತ್ತಿರುವುದು ನಮಗೆ ಸಂತೋ‍ಷ ತಂದಿದೆ: ನೀರಜ್ ಚೋಪ್ರಾ

ನೀರಜ್ ಚೋಪ್ರಾ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ”ಕಾರ್ಯಕ್ರಮದ ನಂತರ ನಾನು ಅರ್ಷದ್ ನದೀಮ್ ಅವರೊಂದಿಗೆ ಮಾತನಾಡಿದೆ ಮತ್ತು ನಾವು ಪರಸ್ಪರ ಸಂತೋಷವಾಗಿದ್ದೇವೆ. ಎರಡೂ ದೇಶಗಳು ಬೆಳೆಯುತ್ತಿರುವುದನ್ನು ನೋಡಿ ನಮಗೆ ಸಂತೋಷವಾಯಿತು. ಯುರೋಪಿಯನ್ ಕ್ರೀಡಾಪಟುಗಳ ಮುಂದೆ ನಾವು ಯಶಸ್ವಿಯಾಗಿದ್ದೇವೆ. ಭಾರತ ಮತ್ತು ಪಾಕಿಸ್ತಾನದ ಪೈಪೋಟಿ ಯಾವಾಗಲೂ ಇರುತ್ತದೆ” ಎಂದು ಹೇಳಿದ್ದಾರೆ.

ಈ ಹಿಂದೆ ಅರ್ಷದ್ ನದೀಮ್ ಅವರಿಗೆ ಸಾಮಾಜಿಕ ಮಾಧ್ಯಮಗಳಿಗೆ ಹೀಯಾಳಿಸಿದಾಗ ಪ್ರತಿಕ್ರಿಯಿಸಿದ್ದ ನೀರಜ್ ಚೋಪ್ರಾ ಅವರು, ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ ಎಂದು ಹೇಳಿದ್ದರು.

ಈ ವಿಚಾರವಾಗಿ ನೀರಜ್ ಚೋಪ್ರಾ  ಅವರು ಟ್ವಿಟರ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದರು. ಆ ವಿಡಿಯೋದಲ್ಲಿ ”ಎಲ್ಲರಿಗೂ ನಮಸ್ಕಾರ ಮೊದಲಿಗೆ ನನ್ನನ್ನು ಬೆಂಬಲಿಸಿದ, ಪ್ರೀತಿ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನೀವೆಲ್ಲರೂ ಪ್ರೋತ್ಸಾಹಿಸಿದ ರೀತಿಗೆ ಖುಷಿಯಾಗುತ್ತಿದೆ. ಅದೇ ರೀತಿ ಈಗ ಒಂದು ವಿವಾದ ಅದೇ ರೀತಿ ನಾನು ಟೋಕಿಯೋ ಒಲಿಂಪಿಕ್ಸ್‌ ಜಾವಲಿನ್ ಥ್ರೋ ಫೈನಲ್‌ನಲ್ಲಿ ಪಾಕಿಸ್ತಾನದ ಆರ್ಶದ್ ನದೀಮ್ ಅವರ ಬಳಿಯಿದ್ದ ಜಾವೆಲಿನ್‌ ಪಡೆದು ಎಸೆದೆ. ಇದನ್ನು ದೊಡ್ಡ ವಿವಾದ ಮಾಡುತ್ತಿದ್ದಾರೆ. ಇದೊಂದು ಅತ್ಯಂತ ಸರಳ ಹಾಗೂ ಸಹಜ ಪ್ರಕ್ರಿಯೆ. ಜಾವಲಿನ್‌ ಪಟು ತಮ್ಮದೇ ಆದ ಜಾವಲಿನ್‌ ಹೊಂದಿರುತ್ತಾರೆ. ಅದನ್ನು ಬೇರೆಯವರು ಸಹ ಬಳಸುತ್ತಾರೆ. ಅದೇ ರೀತಿ ನನ್ನ ಜಾವೆಲಿನ್ ಹಿಡಿದುಕೊಂಡು ಆರ್ಶದ್ ನದೀಂ ಅಭ್ಯಾಸ ನಡೆಸುತ್ತಿದ್ದರು. ಅದರಲ್ಲಿ ಯಾವುದೇ ತಪ್ಪು ಇಲ್ಲ. ಈಗ ನನ್ನ ಸ್ಪರ್ಧೆಯಿದೆ ಎಂದು ಅವರ ಬಳಿಯಿದ್ದ ನನ್ನ ಜಾವೆಲಿನ್ ಪಡೆದುಕೊಂಡು ನನ್ನ ಸ್ಪರ್ಧೆ ಪೂರ್ತಿಗೊಳಿಸಿದೆ. ಇದು ಅಂತಹ ದೊಡ್ಡ ವಿಷಯ ಕೂಡ ಅಲ್ಲ. ನನಗೆ ದುಖಃವಿದೆ. ನನ್ನ ಮನವಿ ಏನೆಂದರೆ, ಈ ರೀತಿ ಮಾಡಬೇಡಿ. ಕ್ರೀಡೆ ಎಲ್ಲರನ್ನೂ ಒಟ್ಟಾಗಿ ಸಾಗುವುದನ್ನು ಕಲಿಸುತ್ತದೆ. ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...