Homeಸಿನಿಮಾಕ್ರೀಡೆಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

ಜಾವೆಲಿನ್ ಥ್ರೋ ಕ್ರೀಡೆಯನ್ನು ಯುದ್ಧಭೂಮಿಯಂತೆ ಬಿಂಬಿಸಿದ ನೆಟ್ಟಿಗರು: ಭಾರತ-ಪಾಕ್ ಬೆಳೆಯುತ್ತಿರುವುದು ಸಂತೋ‍ಷ ತಂದಿದೆ ಎಂದ ಚೋಪ್ರಾ

- Advertisement -
- Advertisement -

ಭಾನುವಾರ ರಾತ್ರಿ ಬುಡಾಪೆಸ್ಟ್‌ನಲ್ಲಿ ನಡೆದ 2023ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ನೀರಜ್ ಚೋಪ್ರಾ ಮತ್ತು ಪಾಕಿಸ್ತಾನದ ಅರ್ಷದ್ ನದೀಮ್ ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಪಡೆದಿದ್ದಾರೆ. ನೀರಜ್ 88.17 ಮೀಟರ್‌ಗಳ ಬೃಹತ್ ಎಸೆತದೊಂದಿಗೆ ಚಾಂಪಿಯನ್ ಆದರು ಮತ್ತು ಅರ್ಷದ್ ತಮ್ಮ ಋತುವಿನ ಅತ್ಯುತ್ತಮ ದೂರವಾದ 87.82 ಮೀಟರ್‌ಗಳನ್ನು ಸಾಧಿಸುವ ಮೂಲಕ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಇದನ್ನು ಭಾರತ ಹಾಗೂ ಪಾಕಿಸ್ತಾನದ ನಡುವಿನ ಯುದ್ಧದಂತೆ ಪರಿಭಾವಿಸಿ ಚರ್ಚೆ ನಡೆಸಲಾಗುತ್ತಿದೆ. ಈ ಹಿಂದೆ ಕ್ರಿಕೆಟ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಸ್ಪರ್ಧೆಗಿಳಿದರೆ, ಅದನ್ನು ಸಾಕಷ್ಟು ಜನರು ಯುದ್ಧದಂತೆ ಭಾವಿಸುತ್ತಿದ್ದರು, ಮತ್ತೆ ಆ ಪಂದ್ಯವು ಅತಿಹೆಚ್ಚು ಸಂಖ್ಯೆಯ ಜನರನ್ನು ಸೆಳೆಯುತ್ತದೆ. ಕ್ರಿಕೆಟ್‌ನಲ್ಲಿ ಭಾರತ-ಪಾಕಿಸ್ತಾನದ ಪೈಪೋಟಿ, ಪ್ರೇಕ್ಷಕರನ್ನು ಅವರ ಆಸನಗಳ ತುದಿಯಲ್ಲಿ ಇರಿಸುತ್ತದೆ ಮತ್ತು ಇದನ್ನು ಸಾಮಾನ್ಯವಾಗಿ “ವಿಶ್ವ ಕ್ರೀಡೆಗಳಲ್ಲಿ ಅತಿದೊಡ್ಡ ಸ್ಪರ್ಧೆ” ಎಂದು ಪ್ರಶಂಸಿಸಲಾಗುತ್ತದೆ. ಅದರಂತೆ ಹಾಕಿ ಮತ್ತು ಕಬಡ್ಡಿಯಲ್ಲೂ ಕಂಡುಬರುತ್ತದೆ. ಇದೀಗ ನೀರಜ್ ಮತ್ತು ಅರ್ಷದ್ ಅವರ ಜಾವೆಲಿನ್ ಥ್ರೋ ನೋಡಿದ ಬಳಿಕ ಈ ಕ್ರೀಡೆಯೂ ಭಾರತ ಮತ್ತು ಪಾಕಿಸ್ತಾನ ನಡುವಿನ ಹೊಸ ಯುದ್ಧಭೂಮಿ ಎಂಬಂತೆ ಬಿಂಬಿಸಲಾಗುತ್ತಿದೆ.

ಭಾರತ-ಪಾಕಿಸ್ತಾನ ಬೆಳೆಯುತ್ತಿರುವುದು ನಮಗೆ ಸಂತೋ‍ಷ ತಂದಿದೆ: ನೀರಜ್ ಚೋಪ್ರಾ

ನೀರಜ್ ಚೋಪ್ರಾ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ”ಕಾರ್ಯಕ್ರಮದ ನಂತರ ನಾನು ಅರ್ಷದ್ ನದೀಮ್ ಅವರೊಂದಿಗೆ ಮಾತನಾಡಿದೆ ಮತ್ತು ನಾವು ಪರಸ್ಪರ ಸಂತೋಷವಾಗಿದ್ದೇವೆ. ಎರಡೂ ದೇಶಗಳು ಬೆಳೆಯುತ್ತಿರುವುದನ್ನು ನೋಡಿ ನಮಗೆ ಸಂತೋಷವಾಯಿತು. ಯುರೋಪಿಯನ್ ಕ್ರೀಡಾಪಟುಗಳ ಮುಂದೆ ನಾವು ಯಶಸ್ವಿಯಾಗಿದ್ದೇವೆ. ಭಾರತ ಮತ್ತು ಪಾಕಿಸ್ತಾನದ ಪೈಪೋಟಿ ಯಾವಾಗಲೂ ಇರುತ್ತದೆ” ಎಂದು ಹೇಳಿದ್ದಾರೆ.

ಈ ಹಿಂದೆ ಅರ್ಷದ್ ನದೀಮ್ ಅವರಿಗೆ ಸಾಮಾಜಿಕ ಮಾಧ್ಯಮಗಳಿಗೆ ಹೀಯಾಳಿಸಿದಾಗ ಪ್ರತಿಕ್ರಿಯಿಸಿದ್ದ ನೀರಜ್ ಚೋಪ್ರಾ ಅವರು, ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ ಎಂದು ಹೇಳಿದ್ದರು.

ಈ ವಿಚಾರವಾಗಿ ನೀರಜ್ ಚೋಪ್ರಾ  ಅವರು ಟ್ವಿಟರ್‌ನಲ್ಲಿ ವಿಡಿಯೋ ಶೇರ್‌ ಮಾಡಿದ್ದರು. ಆ ವಿಡಿಯೋದಲ್ಲಿ ”ಎಲ್ಲರಿಗೂ ನಮಸ್ಕಾರ ಮೊದಲಿಗೆ ನನ್ನನ್ನು ಬೆಂಬಲಿಸಿದ, ಪ್ರೀತಿ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ನೀವೆಲ್ಲರೂ ಪ್ರೋತ್ಸಾಹಿಸಿದ ರೀತಿಗೆ ಖುಷಿಯಾಗುತ್ತಿದೆ. ಅದೇ ರೀತಿ ಈಗ ಒಂದು ವಿವಾದ ಅದೇ ರೀತಿ ನಾನು ಟೋಕಿಯೋ ಒಲಿಂಪಿಕ್ಸ್‌ ಜಾವಲಿನ್ ಥ್ರೋ ಫೈನಲ್‌ನಲ್ಲಿ ಪಾಕಿಸ್ತಾನದ ಆರ್ಶದ್ ನದೀಮ್ ಅವರ ಬಳಿಯಿದ್ದ ಜಾವೆಲಿನ್‌ ಪಡೆದು ಎಸೆದೆ. ಇದನ್ನು ದೊಡ್ಡ ವಿವಾದ ಮಾಡುತ್ತಿದ್ದಾರೆ. ಇದೊಂದು ಅತ್ಯಂತ ಸರಳ ಹಾಗೂ ಸಹಜ ಪ್ರಕ್ರಿಯೆ. ಜಾವಲಿನ್‌ ಪಟು ತಮ್ಮದೇ ಆದ ಜಾವಲಿನ್‌ ಹೊಂದಿರುತ್ತಾರೆ. ಅದನ್ನು ಬೇರೆಯವರು ಸಹ ಬಳಸುತ್ತಾರೆ. ಅದೇ ರೀತಿ ನನ್ನ ಜಾವೆಲಿನ್ ಹಿಡಿದುಕೊಂಡು ಆರ್ಶದ್ ನದೀಂ ಅಭ್ಯಾಸ ನಡೆಸುತ್ತಿದ್ದರು. ಅದರಲ್ಲಿ ಯಾವುದೇ ತಪ್ಪು ಇಲ್ಲ. ಈಗ ನನ್ನ ಸ್ಪರ್ಧೆಯಿದೆ ಎಂದು ಅವರ ಬಳಿಯಿದ್ದ ನನ್ನ ಜಾವೆಲಿನ್ ಪಡೆದುಕೊಂಡು ನನ್ನ ಸ್ಪರ್ಧೆ ಪೂರ್ತಿಗೊಳಿಸಿದೆ. ಇದು ಅಂತಹ ದೊಡ್ಡ ವಿಷಯ ಕೂಡ ಅಲ್ಲ. ನನಗೆ ದುಖಃವಿದೆ. ನನ್ನ ಮನವಿ ಏನೆಂದರೆ, ಈ ರೀತಿ ಮಾಡಬೇಡಿ. ಕ್ರೀಡೆ ಎಲ್ಲರನ್ನೂ ಒಟ್ಟಾಗಿ ಸಾಗುವುದನ್ನು ಕಲಿಸುತ್ತದೆ. ನಾವೆಲ್ಲ ಜಾವೆಲಿನ್ ಥ್ರೋ ಪಟುಗಳು ಪ್ರೀತಿಯಿಂದ ಇರುತ್ತೇವೆ. ನಿಮ್ಮ ಮಾತುಗಳು ನಮಗೆ ಹಿಂಸೆಯಾಗದಿರಲಿ” ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...