Homeಮುಖಪುಟಜಮ್ಮು-ಕಾಶ್ಮೀರ: ಉಪನ್ಯಾಸಕರಿಗೆ ಏಕೆ ಅಮಾನತು ಮಾಡಲಾಗಿದೆ? ಪ್ರತಿಕಾರವೇ? ಸುಪ್ರೀಂಕೋರ್ಟ್ ಪ್ರಶ್ನೆ

ಜಮ್ಮು-ಕಾಶ್ಮೀರ: ಉಪನ್ಯಾಸಕರಿಗೆ ಏಕೆ ಅಮಾನತು ಮಾಡಲಾಗಿದೆ? ಪ್ರತಿಕಾರವೇ? ಸುಪ್ರೀಂಕೋರ್ಟ್ ಪ್ರಶ್ನೆ

- Advertisement -
- Advertisement -

370ನೇ ವಿಧಿ ರದ್ದತಿಯ ವಿರುದ್ಧ ವಾದ ಮಂಡಿಸಲು ನ್ಯಾಯಾಲಯಕ್ಕೆ ಹಾಜರಾದ ಎರಡೇ  ದಿನಗಳಲ್ಲಿ  ಜಮ್ಮು-ಕಾಶ್ಮೀರದ  ಶಿಕ್ಷಣ ಇಲಾಖೆ ಉಪನ್ಯಾಸಕರನ್ನು ಏಕೆ ಅಮಾನತುಗೊಳಿಸಿದೆ ಎಂಬುವುದನ್ನು  ಜಮ್ಮು &  ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡುವಂತೆ ಕೇಂದ್ರದ ಉನ್ನತ ಕಾನೂನು ಅಧಿಕಾರಿ(ಎಜಿ)ಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

ನ್ಯಾಯಾಲಯದ ಮುಂದೆ ಉಪನ್ಯಾಸಕರ ಹಾಜರಾಗಿದ್ಗಕ್ಕೆ ಅಮಾನತು ಮಾಡಲಾಗಿದೆಯಾ? ಇದು ಪ್ರತಿಕಾರದಂತೆ ಕಾಣುತ್ತದೆ  ಎಂದು ನ್ಯಾಯಾಲಯ ಹೇಳಿದೆ.

ಕಾನೂನು ಪದವಿ ಹೊಂದಿರುವ ಹಿರಿಯ ರಾಜ್ಯಶಾಸ್ತ್ರ ಉಪನ್ಯಾಸಕ ಜಹೂರ್ ಅಹ್ಮದ್ ಭಟ್  ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠದ ಮುಂದೆ ಹಾಜರಾಗಿ  370ನೇ ವಿಧಿ ರದ್ಧತಿ ಬಗ್ಗೆ ವಾದ ಮಂಡಿಸಿದ್ದರು.

ಇದಾದ ಕೆಲವೇ ದಿನಗಳಲ್ಲಿ ಶುಕ್ರವಾರ, ಜಮ್ಮು ಮತ್ತು ಕಾಶ್ಮೀರ ನಾಗರಿಕ ಸೇವಾ ನಿಯಮಗಳು, ಜಮ್ಮು ಮತ್ತು ಕಾಶ್ಮೀರ ಸರ್ಕಾರಿ ನೌಕರರ ನಡವಳಿಕೆ ನಿಯಮಗಳು ಮತ್ತು ಜಮ್ಮು ಮತ್ತು ಕಾಶ್ಮೀರ ರಜೆ ನಿಯಮಗಳ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ತಕ್ಷಣವೇ ಜಾರಿಗೆ ಬರುವಂತೆ ಜಹೂರ್ ಅಹ್ಮದ್ ಭಟ್ ಅವರನ್ನು ಅಮಾನತುಗೊಳಿಸಿ ಜಮ್ಮು ಮತ್ತು ಕಾಶ್ಮೀರದ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಅಮಾನತು ವಿಚಾರವನ್ನು ನ್ಯಾಯಾಲಯದ ಗಮನಕ್ಕೆ ತಂದಿರುವ ಹಿರಿಯ ವಕೀಲ ಕಪಿಲ್ ಸಿಬಲ್, ಇಲ್ಲಿಗೆ ಬಂದು 5 ನಿಮಿಷಗಳ ಕಾಲ ವಾದ ಮಂಡಿಸಿದ ಉಪನ್ಯಾಸಕ ಅಮಾನತುಗೊಂಡಿದ್ದಾರೆ. ಅವರು ಎರಡು ದಿನ ರಜೆ ತೆಗೆದುಕೊಂಡಿದ್ದರು. ವಾಪಾಸ್ಸು ಹೋಗುವಾಗ ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ  ಮುಖ್ಯ ನ್ಯಾಯಮೂರ್ತಿ ಅವರು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರಿಗೆ ಸಮಸ್ಯೆ ಬಗ್ಗೆ ಪರಿಶೀಲಿಸುವಂತೆ  ಹೇಳಿದ್ದಾರೆ.  AG ಏನಾಯಿತು ಎಂದು ನೋಡಿ. ಈ ನ್ಯಾಯಾಲಯಕ್ಕೆ ಹಾಜರಾಗಿದ್ದ ಓರ್ವರು ಈಗ ಅಮಾನತುಗೊಂಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಜೊತೆ ಮಾತನಾಡಿ ಎಂದು ಹೇಳಿದ್ದಾರೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅಮಾನತು ಬೇರೆ ವಿಷಯಗಳಿಗೆ ಸಂಬಂಧಿಸಿದೆ ಎಂದು ಹೇಳಿದ್ದಾರೆ. ಆಗಿದ್ದರೆ ಅಮಾನತು ಮೊದಲೇ ಆಗಬೇಕಿತ್ತು ಎಂದು ಕಪಿಲ್ ಸಿಬಲ್ ಕೋರ್ಟ್ ಗೆ ಹೇಳಿದ್ದಾರೆ.

ಈ ಬಗ್ಗೆ ಕ್ರಮವು ಪ್ರತೀಕಾರವಾಗಿರಬಹುದು ಎಂದ ನ್ಯಾಯಮೂರ್ತಿ ಬಿಆರ್ ಗವಾಯಿ, ಇಲ್ಲಿ ಕಾಣಿಸಿಕೊಂಡ ಕಾರಣ ಅದು ಸಂಭವಿಸಿದರೆ ಅದು ನಿಜವಾಗಿಯೂ ಪ್ರತೀಕಾರ ಎಂದು ಅವರು ಹೇಳಿದರು.

ಭಟ್ ಅವರು ಕೋರ್ಟ್ ಮುಂದೆ 5 ನಿಮಿಷಗಳ ಕಾಲ ಹಾಜರಾಗಿ, 2019ರಲ್ಲಿ 370 ವಿಧಿ ರದ್ಧತಿ ಬಳಿಕ ಜಮ್ಮು ಮತ್ತು ಕಾಶ್ಮೀರದ ಮಕ್ಕಳಿಗೆ  ರಾಜಕೀಯ ಶಾಸ್ತ್ರ ವಿಷಯ ಬೋಧಿಸುವುದು ಕಷ್ಟವಾಗಿದೆ. ಮಕ್ಕಳು ಈಗ ಇಲ್ಲಿ ಪ್ರಜಾಪ್ರಭತ್ವ ಇದೆಯಾ ಎಂದು ಪಶ್ನಿಸುತ್ತಿದ್ದಾರೆ. ಭಟ್ ಅವರು ವಾದಿಸುತ್ತಾ 370ನೇ ವಿಧಿ ರದ್ಧತಿ ಸಂವಿಧಾನದ ತತ್ವಕ್ಕೆ ವಿರುದ್ಧವಾಗಿದೆ ಎಂದು ಕೋರ್ಟ್ ಮುಂದೆ ವಾದಿಸಿದ್ದರು.

ಇದನ್ನು ಓದಿ: ಚಂದ್ರನನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿ: ವಿಚಿತ್ರ ಆಗ್ರಹ ಮುಂದಿಟ್ಟ ಹಿಂದೂ ಮಹಾ ಸಭಾ ರಾಷ್ಟ್ರೀಯ ಅಧ್ಯಕ್ಷ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...