Homeಮುಖಪುಟಜಮ್ಮು-ಕಾಶ್ಮೀರ: ಉಪನ್ಯಾಸಕರಿಗೆ ಏಕೆ ಅಮಾನತು ಮಾಡಲಾಗಿದೆ? ಪ್ರತಿಕಾರವೇ? ಸುಪ್ರೀಂಕೋರ್ಟ್ ಪ್ರಶ್ನೆ

ಜಮ್ಮು-ಕಾಶ್ಮೀರ: ಉಪನ್ಯಾಸಕರಿಗೆ ಏಕೆ ಅಮಾನತು ಮಾಡಲಾಗಿದೆ? ಪ್ರತಿಕಾರವೇ? ಸುಪ್ರೀಂಕೋರ್ಟ್ ಪ್ರಶ್ನೆ

- Advertisement -
- Advertisement -

370ನೇ ವಿಧಿ ರದ್ದತಿಯ ವಿರುದ್ಧ ವಾದ ಮಂಡಿಸಲು ನ್ಯಾಯಾಲಯಕ್ಕೆ ಹಾಜರಾದ ಎರಡೇ  ದಿನಗಳಲ್ಲಿ  ಜಮ್ಮು-ಕಾಶ್ಮೀರದ  ಶಿಕ್ಷಣ ಇಲಾಖೆ ಉಪನ್ಯಾಸಕರನ್ನು ಏಕೆ ಅಮಾನತುಗೊಳಿಸಿದೆ ಎಂಬುವುದನ್ನು  ಜಮ್ಮು &  ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ಮಾತನಾಡುವಂತೆ ಕೇಂದ್ರದ ಉನ್ನತ ಕಾನೂನು ಅಧಿಕಾರಿ(ಎಜಿ)ಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

ನ್ಯಾಯಾಲಯದ ಮುಂದೆ ಉಪನ್ಯಾಸಕರ ಹಾಜರಾಗಿದ್ಗಕ್ಕೆ ಅಮಾನತು ಮಾಡಲಾಗಿದೆಯಾ? ಇದು ಪ್ರತಿಕಾರದಂತೆ ಕಾಣುತ್ತದೆ  ಎಂದು ನ್ಯಾಯಾಲಯ ಹೇಳಿದೆ.

ಕಾನೂನು ಪದವಿ ಹೊಂದಿರುವ ಹಿರಿಯ ರಾಜ್ಯಶಾಸ್ತ್ರ ಉಪನ್ಯಾಸಕ ಜಹೂರ್ ಅಹ್ಮದ್ ಭಟ್  ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠದ ಮುಂದೆ ಹಾಜರಾಗಿ  370ನೇ ವಿಧಿ ರದ್ಧತಿ ಬಗ್ಗೆ ವಾದ ಮಂಡಿಸಿದ್ದರು.

ಇದಾದ ಕೆಲವೇ ದಿನಗಳಲ್ಲಿ ಶುಕ್ರವಾರ, ಜಮ್ಮು ಮತ್ತು ಕಾಶ್ಮೀರ ನಾಗರಿಕ ಸೇವಾ ನಿಯಮಗಳು, ಜಮ್ಮು ಮತ್ತು ಕಾಶ್ಮೀರ ಸರ್ಕಾರಿ ನೌಕರರ ನಡವಳಿಕೆ ನಿಯಮಗಳು ಮತ್ತು ಜಮ್ಮು ಮತ್ತು ಕಾಶ್ಮೀರ ರಜೆ ನಿಯಮಗಳ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ತಕ್ಷಣವೇ ಜಾರಿಗೆ ಬರುವಂತೆ ಜಹೂರ್ ಅಹ್ಮದ್ ಭಟ್ ಅವರನ್ನು ಅಮಾನತುಗೊಳಿಸಿ ಜಮ್ಮು ಮತ್ತು ಕಾಶ್ಮೀರದ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಅಮಾನತು ವಿಚಾರವನ್ನು ನ್ಯಾಯಾಲಯದ ಗಮನಕ್ಕೆ ತಂದಿರುವ ಹಿರಿಯ ವಕೀಲ ಕಪಿಲ್ ಸಿಬಲ್, ಇಲ್ಲಿಗೆ ಬಂದು 5 ನಿಮಿಷಗಳ ಕಾಲ ವಾದ ಮಂಡಿಸಿದ ಉಪನ್ಯಾಸಕ ಅಮಾನತುಗೊಂಡಿದ್ದಾರೆ. ಅವರು ಎರಡು ದಿನ ರಜೆ ತೆಗೆದುಕೊಂಡಿದ್ದರು. ವಾಪಾಸ್ಸು ಹೋಗುವಾಗ ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ  ಮುಖ್ಯ ನ್ಯಾಯಮೂರ್ತಿ ಅವರು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರಿಗೆ ಸಮಸ್ಯೆ ಬಗ್ಗೆ ಪರಿಶೀಲಿಸುವಂತೆ  ಹೇಳಿದ್ದಾರೆ.  AG ಏನಾಯಿತು ಎಂದು ನೋಡಿ. ಈ ನ್ಯಾಯಾಲಯಕ್ಕೆ ಹಾಜರಾಗಿದ್ದ ಓರ್ವರು ಈಗ ಅಮಾನತುಗೊಂಡಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಜೊತೆ ಮಾತನಾಡಿ ಎಂದು ಹೇಳಿದ್ದಾರೆ.

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅಮಾನತು ಬೇರೆ ವಿಷಯಗಳಿಗೆ ಸಂಬಂಧಿಸಿದೆ ಎಂದು ಹೇಳಿದ್ದಾರೆ. ಆಗಿದ್ದರೆ ಅಮಾನತು ಮೊದಲೇ ಆಗಬೇಕಿತ್ತು ಎಂದು ಕಪಿಲ್ ಸಿಬಲ್ ಕೋರ್ಟ್ ಗೆ ಹೇಳಿದ್ದಾರೆ.

ಈ ಬಗ್ಗೆ ಕ್ರಮವು ಪ್ರತೀಕಾರವಾಗಿರಬಹುದು ಎಂದ ನ್ಯಾಯಮೂರ್ತಿ ಬಿಆರ್ ಗವಾಯಿ, ಇಲ್ಲಿ ಕಾಣಿಸಿಕೊಂಡ ಕಾರಣ ಅದು ಸಂಭವಿಸಿದರೆ ಅದು ನಿಜವಾಗಿಯೂ ಪ್ರತೀಕಾರ ಎಂದು ಅವರು ಹೇಳಿದರು.

ಭಟ್ ಅವರು ಕೋರ್ಟ್ ಮುಂದೆ 5 ನಿಮಿಷಗಳ ಕಾಲ ಹಾಜರಾಗಿ, 2019ರಲ್ಲಿ 370 ವಿಧಿ ರದ್ಧತಿ ಬಳಿಕ ಜಮ್ಮು ಮತ್ತು ಕಾಶ್ಮೀರದ ಮಕ್ಕಳಿಗೆ  ರಾಜಕೀಯ ಶಾಸ್ತ್ರ ವಿಷಯ ಬೋಧಿಸುವುದು ಕಷ್ಟವಾಗಿದೆ. ಮಕ್ಕಳು ಈಗ ಇಲ್ಲಿ ಪ್ರಜಾಪ್ರಭತ್ವ ಇದೆಯಾ ಎಂದು ಪಶ್ನಿಸುತ್ತಿದ್ದಾರೆ. ಭಟ್ ಅವರು ವಾದಿಸುತ್ತಾ 370ನೇ ವಿಧಿ ರದ್ಧತಿ ಸಂವಿಧಾನದ ತತ್ವಕ್ಕೆ ವಿರುದ್ಧವಾಗಿದೆ ಎಂದು ಕೋರ್ಟ್ ಮುಂದೆ ವಾದಿಸಿದ್ದರು.

ಇದನ್ನು ಓದಿ: ಚಂದ್ರನನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಿ: ವಿಚಿತ್ರ ಆಗ್ರಹ ಮುಂದಿಟ್ಟ ಹಿಂದೂ ಮಹಾ ಸಭಾ ರಾಷ್ಟ್ರೀಯ ಅಧ್ಯಕ್ಷ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...