Homeಮುಖಪುಟಮುಜಾಫರ್‌ನಗರ ಪ್ರಕರಣ: ಮುಸ್ಲಿಂ ಬಾಲಕನ ಗುರುತು ಬಹಿರಂಗಪಡಿಸಿದ ಆರೋಪದ ಮೇಲೆ ಪತ್ರಕರ್ತ ಜುಬೇರ್ ವಿರುದ್ಧ FIR

ಮುಜಾಫರ್‌ನಗರ ಪ್ರಕರಣ: ಮುಸ್ಲಿಂ ಬಾಲಕನ ಗುರುತು ಬಹಿರಂಗಪಡಿಸಿದ ಆರೋಪದ ಮೇಲೆ ಪತ್ರಕರ್ತ ಜುಬೇರ್ ವಿರುದ್ಧ FIR

- Advertisement -
- Advertisement -

ಉತ್ತರ ಪ್ರದೇಶದ ಮುಜಫರ್ ನಗರದ ಶಿಕ್ಷಕಿಯೊಬ್ಬರು ಏಳು ವರ್ಷದ ಮುಸ್ಲಿ ವಿದ್ಯಾರ್ಥಿಗೆ ಆತನ ಸಹಪಾಠಿಗಳಿಂದ ಕಪಾಳಮೋಕ್ಷ ಮಾಡಿದ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ಈ ಪ್ರಕರಣದ ಸಂತ್ರಸ್ತ ಬಾಲಕನ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಮುಜಫರ್ ನಗರ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ.

ವಿಷ್ಣುದತ್ ಎಂಬ ವ್ಯಕ್ತಿ ನೀಡಿದ ದೂರಿನ ಮೇರೆಗೆ ಜುಬೈರ್ ವಿರುದ್ಧ ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 74 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆ ಮಗುವಿನ ಗುರುತನ್ನು ಬಹಿರಂಗಪಡಿಸುವುದು ಕಾನೂನು ಶಿಕ್ಷಾರ್ಹಗೊಳಿಸುತ್ತದೆ. ತಪ್ಪಿತಸ್ಥರಿಗೆ ಆರು ತಿಂಗಳ ಜೈಲು ಶಿಕ್ಷೆ ಅಥವಾ ರೂ 2 ಲಕ್ಷದವರೆಗೆ ದಂಡವನ್ನು ಪಾವತಿಸಲು ಹೇಳಬಹುದು.

ಆಗಸ್ಟ್ 24ರಂದು ಮುಸ್ಲಿಂ ಬಾಲಕನಿಗೆ ಶಿಕ್ಷಕಿಯ ಆದೇಶದ ಮೇರೆಗೆ ಸಹಪಾಠಿಗಳು ಕಪಾಳಮೋಕ್ಷ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮುಜಾಫರ್‌ನಗರದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದ್ದು, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಶಿಕ್ಷಕಿ ಬಾಲಕನ ಸಹಪಾಠಿಗಳಿಗೆ ಹೊಡೆಯುವಂತೆ ಹೇಳುತ್ತಾರೆ.

ಒಬ್ಬ ವಿದ್ಯಾರ್ಥಿ ಆತನ ಕಪಾಳಕ್ಕೆ ಹೊಡೆದ ನಂತರ, ಶಿಕ್ಷಕಿಯು ಇನ್ನೊಬ್ಬ ವಿದ್ಯಾರ್ಥಿಯನ್ನು ಕರೆದು, ”ನಾನು ಹೇಳುತ್ತಿದ್ದೇನೆ, ಈ ಮುಸ್ಲಿಂ ವಿದ್ಯಾರ್ಥಿಯ ಬೆನ್ನಿನ ಮೇಲೆ ಹೊಡೆಯಬೇಕು… ಮತ್ತೆ ಬೇರೆ ವಿಧ್ಯಾರ್ಥಿಗಳನ್ನು ಕರೆದು, ಅವನ ಸೊಂಟದ ಮೇಲೆ ಹೊಡೆಯಲು ಪ್ರಾರಂಭಿಸಿ… ಅವನ ಮುಖವು ಕೆಂಪಾಗುತ್ತಿದೆ, ಅವನ ಸೊಂಟದ ಮೇಲೆ ಎಲ್ಲರೂ ಹೊಡೆಯಿರಿ” ಎಂದು ಆದೇಶಿಸಿದ್ದಾರೆ.

ಶಿಕ್ಷಕಿ ತ್ರಿಪ್ತಾ ತ್ಯಾಗಿ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ್ದಕ್ಕಾಗಿ ಶಿಕ್ಷೆ) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ಆಕೆಯ ವಿರುದ್ಧ ನಾನ್ ಕಾಗ್ನೈಸಬಲ್ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಅಂದರೆ ವಾರಂಟ್ ಇಲ್ಲದೆ ಪೊಲೀಸರು ಆಕೆಯನ್ನು ಬಂಧಿಸುವಂತಿಲ್ಲ. ತನಿಖೆ ಆರಂಭಿಸಲು ಪೊಲೀಸರಿಗೆ ನ್ಯಾಯಾಲಯದ ಅನುಮತಿಯೂ ಬೇಕು.

ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಪತ್ರಕರ್ತ ಮೊಹಮ್ಮದ್ ಜುಬೈರ್ ಅವರು ಬಾಲಕನ ಗುರುತನ್ನು ಬಹಿರಂಗಪಡಿಸಿದ್ದಾರೆ ಎಂದು ಎಫ್‌ಐಆರ್ ದಾಖಲಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಜುಬೈರ್, ”ಇದರಲ್ಲಿ ತನ್ನನ್ನು ಗುರಿಯಾಗಿಸಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗದ ಮುಖ್ಯಸ್ಥ ಪ್ರಿಯಾಂಕ್ ಕನೂಂಗೊ ಅವರು ಕ್ಲಿಪ್ಪಿಂಗ್‌ನ್ನು ಹಂಚಿಕೊಳ್ಳದಂತೆ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೇಳಿಕೊಂಡ ನಂತರ ವೀಡಿಯೊವನ್ನು ಡಿಲೀಟ್ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

”ಮಾಧ್ಯಮಗಳು ಸೇರಿದಂತೆ ಅನೇಕರು ವೀಡಿಯೊವನ್ನು ಪೋಸ್ಟ್ ಮಾಡಿದರೂ ಸಹ ಎಫ್‌ಐಆರ್‌ನಲ್ಲಿ ನನ್ನ ಹೆಸರು ಮಾತ್ರ ಇದೆ. ವಾಸ್ತವವಾಗಿ ಮಗುವಿನ ಗುರುತನ್ನು ಬಹಿರಂಗಪಡಿಸುವ ಇತರ ವೀಡಿಯೊಗಳಿವೆ.. ಘಟನೆಯ ವಿವಾದದ ಬಳಿಕ ಆ ಮಗು ತನ್ನ ಸಹಪಾಠಿಗಳನ್ನು ತಬ್ಬಿಕೊಳ್ಳುತ್ತಿರುವ ವೀಡಿಯೊ ಕೂಡ ಸಾಕಷ್ಟು ಹಂಚಿಕೊಳ್ಳಲಾಗಿದೆ” ಎಂದು ಜುಬೈರ್ ಹೇಳಿದ್ದಾರೆ.

ಈ ಬಗ್ಗೆ ಪೊಲೀಸರು ಇನ್ನೂ ತನ್ನನ್ನು ಸಂಪರ್ಕಿಸಿಲ್ಲ ಎಂದು ಜುಬೇರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...