Homeಮುಖಪುಟಮುಜಾಫರ್‌ನಗರ ಪ್ರಕರಣ: ಮುಸ್ಲಿಂ ಬಾಲಕನ ಗುರುತು ಬಹಿರಂಗಪಡಿಸಿದ ಆರೋಪದ ಮೇಲೆ ಪತ್ರಕರ್ತ ಜುಬೇರ್ ವಿರುದ್ಧ FIR

ಮುಜಾಫರ್‌ನಗರ ಪ್ರಕರಣ: ಮುಸ್ಲಿಂ ಬಾಲಕನ ಗುರುತು ಬಹಿರಂಗಪಡಿಸಿದ ಆರೋಪದ ಮೇಲೆ ಪತ್ರಕರ್ತ ಜುಬೇರ್ ವಿರುದ್ಧ FIR

- Advertisement -
- Advertisement -

ಉತ್ತರ ಪ್ರದೇಶದ ಮುಜಫರ್ ನಗರದ ಶಿಕ್ಷಕಿಯೊಬ್ಬರು ಏಳು ವರ್ಷದ ಮುಸ್ಲಿ ವಿದ್ಯಾರ್ಥಿಗೆ ಆತನ ಸಹಪಾಠಿಗಳಿಂದ ಕಪಾಳಮೋಕ್ಷ ಮಾಡಿದ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. ಈ ಪ್ರಕರಣದ ಸಂತ್ರಸ್ತ ಬಾಲಕನ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಮುಜಫರ್ ನಗರ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿದ್ದಾರೆ.

ವಿಷ್ಣುದತ್ ಎಂಬ ವ್ಯಕ್ತಿ ನೀಡಿದ ದೂರಿನ ಮೇರೆಗೆ ಜುಬೈರ್ ವಿರುದ್ಧ ಬಾಲಾಪರಾಧಿ ಕಾಯ್ದೆಯ ಸೆಕ್ಷನ್ 74 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆ ಮಗುವಿನ ಗುರುತನ್ನು ಬಹಿರಂಗಪಡಿಸುವುದು ಕಾನೂನು ಶಿಕ್ಷಾರ್ಹಗೊಳಿಸುತ್ತದೆ. ತಪ್ಪಿತಸ್ಥರಿಗೆ ಆರು ತಿಂಗಳ ಜೈಲು ಶಿಕ್ಷೆ ಅಥವಾ ರೂ 2 ಲಕ್ಷದವರೆಗೆ ದಂಡವನ್ನು ಪಾವತಿಸಲು ಹೇಳಬಹುದು.

ಆಗಸ್ಟ್ 24ರಂದು ಮುಸ್ಲಿಂ ಬಾಲಕನಿಗೆ ಶಿಕ್ಷಕಿಯ ಆದೇಶದ ಮೇರೆಗೆ ಸಹಪಾಠಿಗಳು ಕಪಾಳಮೋಕ್ಷ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಮುಜಾಫರ್‌ನಗರದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದ್ದು, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಶಿಕ್ಷಕಿ ಬಾಲಕನ ಸಹಪಾಠಿಗಳಿಗೆ ಹೊಡೆಯುವಂತೆ ಹೇಳುತ್ತಾರೆ.

ಒಬ್ಬ ವಿದ್ಯಾರ್ಥಿ ಆತನ ಕಪಾಳಕ್ಕೆ ಹೊಡೆದ ನಂತರ, ಶಿಕ್ಷಕಿಯು ಇನ್ನೊಬ್ಬ ವಿದ್ಯಾರ್ಥಿಯನ್ನು ಕರೆದು, ”ನಾನು ಹೇಳುತ್ತಿದ್ದೇನೆ, ಈ ಮುಸ್ಲಿಂ ವಿದ್ಯಾರ್ಥಿಯ ಬೆನ್ನಿನ ಮೇಲೆ ಹೊಡೆಯಬೇಕು… ಮತ್ತೆ ಬೇರೆ ವಿಧ್ಯಾರ್ಥಿಗಳನ್ನು ಕರೆದು, ಅವನ ಸೊಂಟದ ಮೇಲೆ ಹೊಡೆಯಲು ಪ್ರಾರಂಭಿಸಿ… ಅವನ ಮುಖವು ಕೆಂಪಾಗುತ್ತಿದೆ, ಅವನ ಸೊಂಟದ ಮೇಲೆ ಎಲ್ಲರೂ ಹೊಡೆಯಿರಿ” ಎಂದು ಆದೇಶಿಸಿದ್ದಾರೆ.

ಶಿಕ್ಷಕಿ ತ್ರಿಪ್ತಾ ತ್ಯಾಗಿ ವಿರುದ್ಧ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ್ದಕ್ಕಾಗಿ ಶಿಕ್ಷೆ) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ಆಕೆಯ ವಿರುದ್ಧ ನಾನ್ ಕಾಗ್ನೈಸಬಲ್ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಅಂದರೆ ವಾರಂಟ್ ಇಲ್ಲದೆ ಪೊಲೀಸರು ಆಕೆಯನ್ನು ಬಂಧಿಸುವಂತಿಲ್ಲ. ತನಿಖೆ ಆರಂಭಿಸಲು ಪೊಲೀಸರಿಗೆ ನ್ಯಾಯಾಲಯದ ಅನುಮತಿಯೂ ಬೇಕು.

ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವ ಮೂಲಕ ಪತ್ರಕರ್ತ ಮೊಹಮ್ಮದ್ ಜುಬೈರ್ ಅವರು ಬಾಲಕನ ಗುರುತನ್ನು ಬಹಿರಂಗಪಡಿಸಿದ್ದಾರೆ ಎಂದು ಎಫ್‌ಐಆರ್ ದಾಖಲಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಜುಬೈರ್, ”ಇದರಲ್ಲಿ ತನ್ನನ್ನು ಗುರಿಯಾಗಿಸಿದ್ದಾರೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ರಾಷ್ಟ್ರೀಯ ಆಯೋಗದ ಮುಖ್ಯಸ್ಥ ಪ್ರಿಯಾಂಕ್ ಕನೂಂಗೊ ಅವರು ಕ್ಲಿಪ್ಪಿಂಗ್‌ನ್ನು ಹಂಚಿಕೊಳ್ಳದಂತೆ ಸಾಮಾಜಿಕ ಮಾಧ್ಯಮ ಬಳಕೆದಾರರನ್ನು ಕೇಳಿಕೊಂಡ ನಂತರ ವೀಡಿಯೊವನ್ನು ಡಿಲೀಟ್ ಮಾಡಿದ್ದೇನೆ” ಎಂದು ಅವರು ಹೇಳಿದ್ದಾರೆ.

”ಮಾಧ್ಯಮಗಳು ಸೇರಿದಂತೆ ಅನೇಕರು ವೀಡಿಯೊವನ್ನು ಪೋಸ್ಟ್ ಮಾಡಿದರೂ ಸಹ ಎಫ್‌ಐಆರ್‌ನಲ್ಲಿ ನನ್ನ ಹೆಸರು ಮಾತ್ರ ಇದೆ. ವಾಸ್ತವವಾಗಿ ಮಗುವಿನ ಗುರುತನ್ನು ಬಹಿರಂಗಪಡಿಸುವ ಇತರ ವೀಡಿಯೊಗಳಿವೆ.. ಘಟನೆಯ ವಿವಾದದ ಬಳಿಕ ಆ ಮಗು ತನ್ನ ಸಹಪಾಠಿಗಳನ್ನು ತಬ್ಬಿಕೊಳ್ಳುತ್ತಿರುವ ವೀಡಿಯೊ ಕೂಡ ಸಾಕಷ್ಟು ಹಂಚಿಕೊಳ್ಳಲಾಗಿದೆ” ಎಂದು ಜುಬೈರ್ ಹೇಳಿದ್ದಾರೆ.

ಈ ಬಗ್ಗೆ ಪೊಲೀಸರು ಇನ್ನೂ ತನ್ನನ್ನು ಸಂಪರ್ಕಿಸಿಲ್ಲ ಎಂದು ಜುಬೇರ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...