Homeಕರ್ನಾಟಕಬಿಜೆಪಿಯ ಮಾಜಿ ಸಚಿವ 'ಕೈ' ಸೇರ್ಪಡೆ ವಿಚಾರ: 'ಸ್ವ-ಇಚ್ಛೆಯಿಂದ ಪಕ್ಷಬಿಟ್ಟು ಬಂದ್ರೆ ಅದು ಆಪರೇಷನ್ ಅಲ್ಲ'...

ಬಿಜೆಪಿಯ ಮಾಜಿ ಸಚಿವ ‘ಕೈ’ ಸೇರ್ಪಡೆ ವಿಚಾರ: ‘ಸ್ವ-ಇಚ್ಛೆಯಿಂದ ಪಕ್ಷಬಿಟ್ಟು ಬಂದ್ರೆ ಅದು ಆಪರೇಷನ್ ಅಲ್ಲ’ ಎಂದ ಶೆಟ್ಟರ್

- Advertisement -
- Advertisement -

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜ್ಯದಲ್ಲಿ ಆಪರೇಷನ್ ಹಸ್ತದ ಸುದ್ದಿ ಭಾರಿ ಸದ್ದು ಮಾಡುತ್ತಿದೆ. ಇದೀಗ ಮಾಜಿ ಸಚಿವ ಶಂಕರಪಾಟೀಲ್‌ ಮುನೇನಕೊಪ್ಪ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಮಾತುಗಳು ಕೇಳಿಬಂದಿವೆ. ಈ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.

ಆಪರೇಶನ್ ಹಸ್ತದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶೆಟ್ಟರ್, ”ಬಿಜೆಪಿಯಲ್ಲಿನ ವ್ಯವಸ್ಥೆಯಿಂದ ಬಹಳಷ್ಟು ಜನ ನೊಂದು ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದಾರೆ. ಸ್ವ ಇಚ್ಛೆಯಿಂದ ಪಕ್ಷದಿಂದ ಪಕ್ಷಕ್ಕೆ ಹೋದರೆ ಅದು ಆಪರೇಷನ್ ಅಲ್ಲಾ. ಆಪರೇಷನ್ ಹಸ್ತ ಎನ್ನುವ ಅವಶ್ಯಕತೆ ಇಲ್ಲಾ” ಎಂದು ಹೇಳಿದ್ದಾರೆ.

ಮಾಜಿ ಸಚಿವ ಶಂಕರಪಾಟೀಲ್‌ ಮುನೇನಕೊಪ್ಪ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಶೆಟ್ಟರ್, ”ಮುನೇನಕೊಪ್ಪ ಅವರು ಸುದ್ದಿ ಗೋಷ್ಠಿ ಕರೆದದ್ದು ನನಗೆ ಗೊತ್ತಿಲ್ಲ. ನಾನು ಈ ಬಗ್ಗೆ ಅವರೊಂದಿಗೆ ಮಾತನಾಡಿಲ್ಲ. ಈ ಬಗ್ಗೆ ನಾನು ಏನು ಹೇಳೋಕೆ ಬರಲ್ಲ” ಎಂದಿದ್ದಾರೆ.

”ಸುದ್ಧಿಗೋಷ್ಟಿ ಯಾಕೆ ಕರೆದಿದ್ದಾರೆ ಅಂತ ಅವರೇ ಹೇಳಬೇಕು. ಇನ್ನೂ ಹಲವಾರು ನಾಯಕರು ಬಿಜೆಪಿಯಿಂದ ನೊಂದು ಕಾಂಗ್ರೆಸ್‌ಗೆ ಬರುತ್ತಿದ್ದಾರೆ. ಬಿಜೆಪಿ ದಿನದಿಂದ ದಿನಕ್ಕೆ ಕುಗ್ಗುತ್ತಿದೆ ನಾಯಕನಿಲ್ಲದೆ ಸೊರಗುತ್ತಿದೆ. ರಾಜ್ಯದ ಅಧ್ಯಕ್ಷರ ಅವಧಿ ಮುಗಿದರೂ ಇದುವರೆಗೂ ನೇಮಕ ಮಾಡಲಾಗುತ್ತಿಲ್ಲ ಅವರಿಗೆ ಈ ರೀತಿ ಶೋಚನಿಯ ಪರಿಸ್ಥಿತಿ ಯಾವುದೇ ರಾಷ್ಟ್ರೀಯ ಪಕ್ಷಕ್ಕೆ ಬಂದಿರಲಿಲ್ಲ” ಎಂದು ಶೆಟ್ಟರ್ ಟೀಕೆ ಮಾಡಿದ್ದಾರೆ.

”ಹೊರಟ್ಟಿ ಅವರಿಗೆ ಚೀಟಿ ಎತ್ತಿ ತಾತ್ಕಾಲಿಕವಾಗಿಯಾದರೂ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಿ ಎಂದಿದ್ದೆ. ಕೇಂದ್ರ ಬಿಜೆಪಿಗೆ ರಾಜ್ಯದ ನಾಯಕರ ಮೇಲೆ ನಂಬಿಕೆ ಇಲ್ಲದಾಗಿದೆ. ಹಾಗಾಗಿಯೇ ಮೋದಿಯವರನ್ನು ಬರಮಾಡಿಕೊಳ್ಳಲು ಅವರಿಗೆ ಅವಕಾಶ ನೀಡಿರಲಿಲ್ಲ. ಬಿಜೆಪಿ ರಾಜ್ಯ ನಾಯಕರಿಗೆ ಬೀದಿಗೆ ಬೀಳುವಂತ ಪರಿಸ್ಥಿತಿ ಬಂದಿದೆ. ಈಗಿನ ಬಿಜೆಪಿ ಪಕ್ಷ ದಿನದಿಂದ ದಿನಕ್ಕೆ ಅದೋಗತಿಗೆ ಹೋಗುತ್ತಿದೆ” ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿನ  ಕೋವಿಡ್ ಅಕ್ರಮಗಳ ತನಿಖೆಗೆ ಆಯೋಗ ರಚಿಸಿದ ರಾಜ್ಯ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...