Homeಮುಖಪುಟಸಂಘಪರಿವಾರ ಮುಸ್ಲಿಮರು, ದಲಿತರನ್ನು ಪ್ರಾಣಿಗಳಿಗಿಂತ ಕೆಟ್ಟ ಸಾಮಾಜಿಕ ಸ್ಥಾನಮಾನಕ್ಕೆ ಇಳಿಸಲು ಪ್ರಯತ್ನಿಸುತ್ತಿದೆ: ಪಿಣರಾಯಿ ವಿಜಯನ್

ಸಂಘಪರಿವಾರ ಮುಸ್ಲಿಮರು, ದಲಿತರನ್ನು ಪ್ರಾಣಿಗಳಿಗಿಂತ ಕೆಟ್ಟ ಸಾಮಾಜಿಕ ಸ್ಥಾನಮಾನಕ್ಕೆ ಇಳಿಸಲು ಪ್ರಯತ್ನಿಸುತ್ತಿದೆ: ಪಿಣರಾಯಿ ವಿಜಯನ್

- Advertisement -
- Advertisement -

ಉತ್ತರಪ್ರದೇಶದಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ತಮ್ಮ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಗೆ ಹೊಡೆಯಲು ಸಹಪಾಠಿಗಳಿಗೆ ಸೂಚಿಸಿದ ಘಟನೆಯ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರತಿಕ್ರಿಯಿಸಿದ್ದು, ಇದು ಸಂಘಪರಿವಾರದ ಅಪಾಯಕಾರಿ ಕೋಮು ಪ್ರಚಾರದ ಅಪಾಯವನ್ನು ಎತ್ತಿತೋರಿಸುತ್ತದೆ. ಇದು ಅಲ್ಪಸಂಖ್ಯಾತರು ಮತ್ತು ದಲಿತರನ್ನು ಅಮಾನವೀಯವಾಗಿಸಲು ಮತ್ತು ಅವರನ್ನು ಪ್ರಾಣಿಗಳಿಗಿಂತ ಕೆಟ್ಟ ಸಾಮಾಜಿಕ ಸ್ಥಾನಮಾನಕ್ಕೆ ಇಳಿಸುವ ಪ್ರಯತ್ನವಾಗಿದೆ. ಈ ಕೋಮು ಪ್ರಚಾರ ವ್ಯಕ್ತಿಯನ್ನು ಎಷ್ಟು ರಾಕ್ಷಸರನ್ನಾಗಿ ಮಾಡುತ್ತದೆ ಎಂಬುದನ್ನು ಘಟನೆ ಒತ್ತಿಹೇಳುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ ಸಿಎಂ ಪಿಣರಾಯ್ ವಿಜಯನ್,  ಕೋಮುವಾದವು ಅತ್ಯಂತ ಕೆಟ್ಟ ಮನಸ್ಥಿತಿಯಾಗಿದೆ. ಅದು ಅವನನ್ನು ಕೀಳುಮಟ್ಟಕ್ಕೆ ತರಬಹುದು. ಸಂಘಪರಿವಾರದ ಸಿದ್ಧಾಂತದ ವಿರುದ್ಧ ನಾವು ಪ್ರಬಲವಾದ ಬೇಲಿ ಕಟ್ಟಬೇಕು . ಈ ವಿಚಾರದಲ್ಲಿ ಜಾತ್ಯಾತೀತತೆಯ ಜನರು ಜವಾಬ್ಧಾರಿ ಅರಿತು ಒಂದಾಗಬೇಕು ಎಂದು ಹೇಳಿದ್ದಾರೆ.

ಕೋಮುವಾದ ಮತ್ತು ಫ್ಯಾಸಿಸಂ ಮನುಷ್ಯನ ಕೊನೆಯ ಹನಿಯ ಪ್ರೀತಿಯನ್ನು ಕೂಡ ಹೀರಬಲ್ಲವು  ಎಂಬುದನ್ನು ಈ ಘಟನೆ ನಮಗೆ ನೆನಪಿಸುತ್ತದೆ ಎಂದು ಅವರು ಹೇಳಿದರು.

ಆ ಶಿಕ್ಷಕಿಗೆ ಎಷ್ಟು ಕೋಮು ವಿಷವು ಆವರಿಸಿರಬಹುದು? ಏಳು ವರ್ಷದ ಬಾಲಕನನ್ನು ಆತನ ಧರ್ಮದ ಕಾರಣಕ್ಕೆ ಮಾತ್ರ ಶಿಕ್ಷಿಸಿಲ್ಲ. ಅನ್ಯ ಧರ್ಮದ ವಿದ್ಯಾರ್ಥಿಗಳಿಗೆ ಆತನಿಗೆ  ಶಿಕ್ಷೆಯನ್ನು ಕೊಡುವಂತೆ ಕೇಳಲಾಗಿದೆ ಎಂದು ಅವರು ಹೇಳಿದರು.

ಮುಜಾಫರ್‌ನಗರದಲ್ಲಿ ನಡೆದ ಘಟನೆ ಮೊದಲಲ್ಲ, ಪ್ರಜಾಪ್ರಭುತ್ವದ ಶ್ರೇಷ್ಠ ಉದಾಹರಣೆಯಾಗಿರುವ ಭಾರತವನ್ನು ದ್ವೇಷದ ನೆಲವನ್ನಾಗಿ ಪರಿವರ್ತಿಸಲು ಹಿಂದುತ್ವ ಕೋಮುವಾದ ಪ್ರಯತ್ನಿಸುತ್ತಿದೆ. ಉತ್ತರ ಪ್ರದೇಶ, ಹರಿಯಾಣ ಮತ್ತು ಮಣಿಪುರದ ವರದಿಗಳು ಅದನ್ನು ಸಮರ್ಥಿಸುತ್ತವೆ ಎಂದು ಕೇರಳ ಸಿಎಂ ಪಿಣರಾಯ್ ವಿಜಯನ್ ಸಂಘಪರಿವಾರದ ವಿರುದ್ಧ ಟೀಕಿಸಿದ್ದಾರೆ.

ಇದನ್ನು ಓದಿ: ಗುರುಗ್ರಾಮ: ಮುಸ್ಲಿಮರಿಗೆ ಮನೆ ತೊರೆಯುವಂತೆ ಪೋಸ್ಟರ್ ಮೂಲಕ ಬೆದರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...