Homeಮುಖಪುಟಚುನಾವಣೆಗೂ ಮುನ್ನ ಟಿಎಂಸಿ ನಾಯಕ ಅಭಿಷೇಕ್ ಬಂಧನಕ್ಕೆ ಕೇಂದ್ರದ ಯತ್ನ: ಮಮತಾ ಬ್ಯಾನರ್ಜಿ

ಚುನಾವಣೆಗೂ ಮುನ್ನ ಟಿಎಂಸಿ ನಾಯಕ ಅಭಿಷೇಕ್ ಬಂಧನಕ್ಕೆ ಕೇಂದ್ರದ ಯತ್ನ: ಮಮತಾ ಬ್ಯಾನರ್ಜಿ

- Advertisement -
- Advertisement -

2024ರ ಲೋಕಸಭೆ ಚುನಾವಣೆಗೂ ಮುನ್ನ ತೃಣಮೂಲ ಕಾಂಗ್ರೆಸ್‌ನ ನಾಯಕ ಅಭಿಷೇಕ್ ಬ್ಯಾನರ್ಜಿ ಅವರನ್ನು ಬಂಧಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದಾರೆ.

ಕೋಲ್ಕತ್ತದಲ್ಲಿ ಟಿಎಂಸಿ ಯುವ ಘಟಕದ ರಾಲಿಯಲ್ಲಿ ಮಾತನಾಡಿದ ಅವರು, ”ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಸೇಡಿನ ರಾಜಕಾರಣ ಮಾಡುತ್ತಿದೆ. ನಾನು ಕೇಂದ್ರದಲ್ಲಿ ಇಂತಹ ಸೇಡಿನ ಸರ್ಕಾರವನ್ನು ಇದುವರೆಗೆ ನೋಡಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.

ಇ.ಡಿ ದಾಳಿಗೆ ಸಂಬಂಧಿಸಿ ಲೋಕಸಭೆ ಚುನಾವಣೆಗೂ ಮುನ್ನ ಅಭಿಷೇಕ್ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ವ್ಯಕ್ತಿಯೊಬ್ಬರು ನನಗೆ ಸಂದೇಶ ರವಾನಿಸಿದ್ದಾರೆ ಎಂದು ಮಮತಾ ಹೇಳಿದ್ದಾರೆ.

ಬಿಜೆಪಿಯು ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆಯನ್ನು ನಡೆಸಬಹುದು. ಚುನಾವಣೆಯಲ್ಲಿ ಪ್ರಚಾರ ಮಾಡಲು ಬಿಜೆಪಿ ಈಗಾಗಲೇ ಎಲ್ಲಾ ಚಾಪರ್‌ಗಳನ್ನು ಕಾಯ್ದಿರಿಸಿದೆ. ಯಾವುದೇ ರಾಜಕೀಯ ಪಕ್ಷಗಳು ಪ್ರಚಾರಕ್ಕಾಗಿ ಅವುಗಳನ್ನು ಬಳಸಬಾರದು ಎಂಬ ಉದ್ದೇಶ ಅವರಲ್ಲಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

ಭಾರತದಲ್ಲಿ ಬಿಜೆಪಿಗೆ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ದೇಶವು ಸರ್ವಾಧಿಕಾರಿ ಆಡಳಿತವನ್ನು ಎದುರಿಸಲಿದೆ ಎಂದು ಅವರು ಎಚ್ಚರಿಸಿದ್ದಾರೆ.

”ಸತತ ಮೂರನೇ ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ, ದೇಶವು ನಿರಂಕುಶ ಆಡಳಿತವನ್ನು ಎದುರಿಸಬೇಕಾಗುತ್ತದೆ. ಅವರು (ಬಿಜೆಪಿ) ಡಿಸೆಂಬರ್ 2023 ರಲ್ಲಿ ಲೋಕಸಭೆ ಚುನಾವಣೆಯನ್ನು ನಡೆಸಬಹುದು ಎಂಬ ಆತಂಕ ನನ್ನಲ್ಲಿದೆ” ಎಂದು ಹೇಳಿದ್ದಾರೆ.

”ಕೇಸರಿ ಪಕ್ಷವು ಈಗಾಗಲೇ ನಮ್ಮ ದೇಶದಲ್ಲಿ ಸಮೂಹಗಳ ನಡುವೆ ಒಡುಕು ಉಂಟು ಮಾಡಿದೆ. ವೈರತ್ವದ ರಾಷ್ಟ್ರವನ್ನಾಗಿ ಪರಿವರ್ತಿಸಿದೆ. ಅವರು ಮತ್ತೆ ಅಧಿಕಾರಕ್ಕೆ ಬಂದರೆ, ನಮ್ಮ ದೇಶವನ್ನು ದ್ವೇಷದ ರಾಷ್ಟ್ರವನ್ನಾಗಿ ಮಾಡಲಿದ್ದಾರೆ” ಎಂದು ಅವರು ತಿಳಿಸಿದ್ದಾರೆ.

”ಬಂಗಾಳದಲ್ಲಿ ಮೂರು ದಶಕ ಆಡಳಿತ ನಡೆಸಿದ ಸಿಪಿಎಂ ಅನ್ನು ಟಿಎಂಸಿ ಮಣಿಸಿದೆ. ಈಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುತ್ತದೆ ಎಂದು ಮಮತಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾತಿಗಣತಿಗೆ ಕೇಂದ್ರ ಸರಕಾರಕ್ಕೆ ಮಾತ್ರ ಅಧಿಕಾರವಿದೆ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...