Homeಮುಖಪುಟನಮಾಝ್ ಮಾಡಲು ಬಸ್‌ ನಿಲ್ಲಿಸಿ ಅಮಾನತಾಗಿದ್ದ ಕಂಡೆಕ್ಟರ್ ಆತ್ಮಹತ್ಯೆ

ನಮಾಝ್ ಮಾಡಲು ಬಸ್‌ ನಿಲ್ಲಿಸಿ ಅಮಾನತಾಗಿದ್ದ ಕಂಡೆಕ್ಟರ್ ಆತ್ಮಹತ್ಯೆ

- Advertisement -
- Advertisement -

ಇಬ್ಬರು ಮುಸ್ಲಿಂ ಪ್ರಯಾಣಿಕರಿಗೆ ನಮಾಝ್ ಮಾಡಲು ಬಸ್‌ನ್ನು ನಿಲ್ಲಿಸಿ ಅಮಾನಾತಾಗಿದ್ದ ಬಸ್ ಕಂಡೆಕ್ಟರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಮೈನ್‌ಪುರಿ ಬಳಿ ತನ್ನ ನಿವಾಸದ ಪಕ್ಕದಲ್ಲಿ ರೈಲ್ವೇ ಟ್ರಾಕ್‌ನಲ್ಲಿ ಕಂಡೆಕ್ಟರ್ ಮೋಹಿತ್ ಯಾದವ್ ಅವರ ಮೃತದೇಹ ಪತ್ತೆಯಾಗಿದೆ. ಬಸ್ ಕಂಡಕ್ಟರ್ ಸಾವನ್ನು ಖಂಡಿಸಿ ಬರೇಲಿಯಲ್ಲಿ ಗುತ್ತಿಗೆ ಕಾರ್ಮಿಕರು ಪ್ರತಿಭಟನೆ ನಡೆಸಿದ್ದಾರೆ.

ಮೋಹಿತ್ ಯಾದವ್ (32) ಕೌಶಂಬಿಯಿಂದ ದೆಹಲಿಗೆ ತೆರಳುತ್ತಿದ್ದ UPSRTC ಬಸ್‌ನ ಕಂಡಕ್ಟರ್ ಆಗಿದ್ದರು. ದೆಹಲಿಯಿಂದ ಕೌಶಂಬಿಗೆ ತೆರಳುವಾಗ ರಾಂಪುರ ಬಳಿ ಕಂಡಕ್ಟರ್ ಮೋಹಿತ್ ಯಾದವ್ ಅವರು ಚಾಲಕ ಕೆಪಿ ಸಿಂಗ್ ಅವರಿಗೆ ಎರಡು ನಿಮಿಷಗಳ ಕಾಲ ಬಸ್ ನಿಲ್ಲಿಸುವಂತೆ ಹೇಳಿದ್ದಾರೆ ಮತ್ತು ಇಬ್ಬರು ಪ್ರಯಾಣಿಕರಿಗೆ ನಮಾಜ್ ಮಾಡಲು ಅವಕಾಶ ನೀಡಿದ್ದರು.

ಇದಕ್ಕೆ ಬಸ್ಸಿನ ಇತರ ಪ್ರಯಾಣಿಕರು ಕಂಡಕ್ಟರ್ ಮತ್ತು ಬಸ್ ಚಾಲಕನ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಘಟನೆಯು ಜೂನ್ 3, 2023ರಂದು ಸಂಭವಿಸಿದೆ. ಘಟನೆಯ ನಂತರ ಕಂಡಕ್ಟರ್ ಮತ್ತು ಬಸ್ ಚಾಲಕನನ್ನು ಅಮಾನತುಗೊಳಿಸಲಾಗಿತ್ತು.

ಇಬ್ಬರು ಮುಸ್ಲಿಂ ಪ್ರಯಾಣಿಕರಿಗೆ ನಮಾಜ್ ಮಾಡಲು ಅವಕಾಶ ನೀಡಿದ ಕಾರಣಕ್ಕಾಗಿ ಅಮಾನತುಗೊಂಡ ನಂತರ ಕಂಡಕ್ಟರ್ ಮೋಹಿತ್ ಯಾದವ್ ಒತ್ತಡಕ್ಕೆ ಒಳಗಾಗಿದ್ದರು. ಮೋಹಿತ್ ಭಾನುವಾರ (ಆಗಸ್ಟ್ 27) ರಾತ್ರಿ ನಾಪತ್ತೆಯಾಗಿದ್ದರು. ಅವರ ಮೃತದೇಹ ಆಗಸ್ಟ್ 28 ರಂದು ಅವರ ಮನೆ ಸಮೀಪದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ವೀಡಿಯೊ ಆಧಾರದ ಮೇಲೆ ಮೋಹಿತ್ ಯಾದವ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ವಿಚಾರಣೆ ನಡೆಸಿಲ್ಲ. ಅಲ್ಲದೆ ಮೋಹಿತ್ ಯಾದವ್ ಮತ್ತು ಚಾಲಕ ಕೆ ಪಿ ಸಿಂಗ್ ತಮ್ಮ ಅಮಾನತು ವಿರುದ್ಧ ಮೇಲ್ಮನವಿ ಸಲ್ಲಿಸಲಿಲ್ಲ.

ಮೋಹಿತ್ ಯಾದವ್ ಮತ್ತು ಕೆ ಪಿ ಸಿಂಗ್ ವಿರುದ್ಧ ಅಧಿಕಾರಿಗಳು ತೆಗೆದುಕೊಂಡ ಕ್ರಮ ಸಮರ್ಥನೀಯವಲ್ಲ ಎಂದು ಯುಪಿಎಸ್‌ಆರ್‌ಟಿಸಿ ನೌಕರರ ಸಂಘ ಹೇಳಿದೆ. ಈ ವಿಷಯದ ಬಗ್ಗೆ ಕುಟುಂಬದವರು ದೂರು ನೀಡಿದರೆ ಅವರನ್ನು ಬೆಂಬಲಿಸುವುದಾಗಿ ಅವರು ಭರವಸೆ ನೀಡಿದ್ದರು. ಮೋಹಿತ್ ಯಾದವ್ ಅವರನ್ನು ಅಮಾನತುಗೊಳಿಸಿದ ನಂತರ ಹಣಕಾಸಿನ ಸಮಸ್ಯೆಯಿಂದ ಒತ್ತಡಕ್ಕೆ ಒಳಗಾಗಿದ್ದರು ಎನ್ನಲಾಗಿದೆ.

ಇದನ್ನು ಓದಿ: ಜಾತಿಗಣತಿಗೆ ಕೇಂದ್ರ ಸರಕಾರಕ್ಕೆ ಮಾತ್ರ ಅಧಿಕಾರವಿದೆ: ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಕೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...