Homeಕರ್ನಾಟಕ'ಫ್ಯಾಕ್ಟ್ ಚೆಕ್‌' ಘಟಕ ವಿಚಾರ: ನಮ್ಮದು ಯುಪಿ ಸರ್ಕಾರವಲ್ಲ, ಕಾನೂನಿಗೆ ವಿರುದ್ಧ ಏನನ್ನೂ ಮಾಡುವುದಿಲ್ಲ; ಎಡಿಟರ್ಸ್...

‘ಫ್ಯಾಕ್ಟ್ ಚೆಕ್‌’ ಘಟಕ ವಿಚಾರ: ನಮ್ಮದು ಯುಪಿ ಸರ್ಕಾರವಲ್ಲ, ಕಾನೂನಿಗೆ ವಿರುದ್ಧ ಏನನ್ನೂ ಮಾಡುವುದಿಲ್ಲ; ಎಡಿಟರ್ಸ್ ಗಿಲ್ಡ್‌ಗೆ ಖರ್ಗೆ ಉತ್ತರ

- Advertisement -
- Advertisement -

ಮಾಧ್ಯಮ ಸಂಸ್ಥೆಗಳ ವರದಿಗಳು ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುವ ‘ನಕಲಿ ಸುದ್ದಿ’ಗಳ ಮೇಲೆ ನಿಗಾ ಇಡಲು ರಾಜ್ಯದಲ್ಲಿ ‘ಫ್ಯಾಕ್ಟ್ ಚೆಕ್‌’ ಘಟಕ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸರ್ಕಾರದ ಈ ನಿಧಾರದಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಬೇಕು ಎಂದು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ)  ಈ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರು ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಮ್ಮದು ಉತ್ತರಪ್ರದೇಶ ಸರ್ಕಾರವಲ್ಲ. ನಮ್ಮ ಸರ್ಕಾರ ಕಾನೂನಿಗೆ ವಿರುದ್ಧವಾಗಿ ಏನನ್ನೂ ಮಾಡುವುದಿಲ್ಲ. ಸರ್ಕಾರದ ನಿರ್ಣಯ ಕುರಿತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ)ಗೆ ಪತ್ರ ಬರೆಯುತ್ತೇನೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರಿಯಾಂಕ್ ಖರ್ಗೆ ಟ್ವೀಟ್ ಕೂಡ ಮಾಡಿದ್ದು, ”ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಒಪ್ಪಿಕೊಂಡಂತೆ, ಆನ್‌ಲೈನ್ ಕ್ಷೇತ್ರವು ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳ ಸವಾಲನ್ನು ಎದುರಿಸುತ್ತಿದೆ. ಈ ಸಮಸ್ಯೆಯನ್ನು ಪರಿಹರಿಸಲು ಕ್ರಮಗಳ ಅನುಷ್ಠಾನದ ಅಗತ್ಯವಿದೆ” ಎಂದಿದ್ದಾರೆ.

”ನಮ್ಮ ಸತ್ಯ-ಪರಿಶೀಲನಾ ಘಟಕವು ಪಕ್ಷಪಾತ ರಹಿತವಾದ ಅರಾಜಕೀಯ ನಿಲುವನ್ನು ಎತ್ತಿಹಿಡಿಯುತ್ತದೆ ಮತ್ತು ಸಾರ್ವಜನಿಕರಿಗೆ ಬಳಸುವ ವಿಧಾನಗಳನ್ನು ಪಾರದರ್ಶಕವಾಗಿ ವಿವರಿಸುತ್ತದೆ ಎಂದು ಗೌರವಾನ್ವಿತ ಸಂಸ್ಥೆಗೆ ನಾನು ಭರವಸೆ ನೀಡಲು ಬಯಸುತ್ತೇನೆ” ಎಂದು ಹೇಳಿದ್ದಾರೆ.

”ಇದಲ್ಲದೆ, ನಾವು ಸ್ವತಂತ್ರ ಸಂಸ್ಥೆಗಳನ್ನು ಸ್ಥಾಪಿಸುವ ಪ್ರಕ್ರಿಯೆಯಲ್ಲಿದ್ದೇವೆ, ಅದು ನಕಲಿ ಸುದ್ದಿ ಮತ್ತು ತಪ್ಪು ಮಾಹಿತಿಯ ವಿರುದ್ಧ ಹೋರಾಡಲು ನಮಗೆ ಸಹಾಯ ಮಾಡುತ್ತದೆ” ಎಂದು ಹೇಳಿದ್ದಾರೆ.

”ಕರ್ನಾಟಕ ಸರ್ಕಾರ ಬಸವಣ್ಣ ಮತ್ತು ಬಾಬಾಸಾಹೇಬರ ವಿಚಾರಧಾರೆಗಳಿಗೆ ಬದ್ಧವಾಗಿದೆ. ಖಚಿತವಾಗಿರಿ, ನಾವು ನೈಸರ್ಗಿಕ ನ್ಯಾಯದ ತತ್ವಗಳನ್ನು ಶ್ರದ್ಧೆಯಿಂದ ಅನುಸರಿಸುತ್ತೇವೆ. ಈ ಘಟಕದ ಸ್ಥಾಪನೆಯು ಯಾವುದೇ ರೀತಿಯಲ್ಲೂ ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಪ್ರಯತ್ನವಲ್ಲ” ಎಂದು ದ್ಪಷ್ಟಪಡಿಸಿದ್ದಾರೆ.

ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಹೇಳಿದ್ದೇನು?

‘ಫ್ಯಾಕ್ಟ್ ಚೆಕ್‌’ ಘಟಕ ಸ್ಥಾಪನೆ ವಿಚಾರವಾಗಿ ಸರ್ಕಾರಕ್ಕೆ ಪತ್ರ ಬರೆದಿದ್ದ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ (ಇಜಿಐ), ”ಆನ್ಲೈನ್‌ನಲ್ಲಿ ತಪ್ಪು ಮಾಹಿತಿ ಮತ್ತು ನಕಲಿ ಸುದ್ದಿಗಳ ಸಮಸ್ಯೆ ಇರುವುದು ನಿಜ. ಆದರೆ ಅಂತಹ ವಿಷಯವನ್ನು ಗುರುತಿಸುವ ಹಾಗೂ ತೆಗೆದುಹಾಕುವ ಪ್ರಯತ್ನಗಳನ್ನು ಸರ್ಕಾರದ ವ್ಯಾಪ್ತಿಯಲ್ಲಿಲ್ಲದ ಸ್ವತಂತ್ರ ಸಂಸ್ಥೆಗಳು ಮುನ್ನಡೆಸಬೇಕು. ಇಲ್ಲದಿದ್ದರೆ ಅದು ಭಿನ್ನಾಭಿಪ್ರಾಯದ ಧ್ವನಿಗಳನ್ನು ಹತ್ತಿಕ್ಕುವ ಸಾಧನಗಳಾಗುತ್ತವೆ. ಯಾವುದೇ ಮೇಲ್ವಿಚಾರಣಾ ಚೌಕಟ್ಟು ಪತ್ರಕರ್ತರು ಮತ್ತು ಮಾಧ್ಯಮ ಸಂಸ್ಥೆಗಳು ಸೇರಿದಂತೆ ನೈಸರ್ಗಿಕ ನ್ಯಾಯದ ತತ್ವಗಳನ್ನು ಅನುಸರಿಸಬೇಕು, ಇದು ಪತ್ರಿಕಾ ಸ್ವಾತಂತ್ರ್ಯವನ್ನು ಹಾಳು ಮಾಡಬಾರದು ಎಂದು ಹೇಳಿತ್ತು. ಅಲ್ಲದೆ, ಉದ್ದೇಶಿತ ಸತ್ಯ-ಪರಿಶೀಲನಾ ಘಟಕದ ವ್ಯಾಪ್ತಿ ಹಾಗೂ ಅಧಿಕಾರಗಳು ಮತ್ತು ಅದು ಕಾರ್ಯನಿರ್ವಹಿಸುವ ಆಡಳಿತ ಕಾರ್ಯವಿಧಾನವನ್ನು ಸ್ಪಷ್ಟವಾಗಿ ತಿಳಿಸಬೇಕು” ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...