Homeಸಿನಿಮಾಕ್ರೀಡೆಪಾಕ್ ಆಟಗಾರನನ್ನು ಸೋಲಿಸಿ ನಿಮ್ಮ ಮಗ ಚಿನ್ನ ಗೆದ್ದಿದ್ದಕ್ಕೆ ಏನನ್ನಿಸುತ್ತದೆ? ಎಂದು ಪ್ರಶ್ನಿಸಿದ ಪತ್ರಕರ್ತನಿಗೆ ತಕ್ಕ...

ಪಾಕ್ ಆಟಗಾರನನ್ನು ಸೋಲಿಸಿ ನಿಮ್ಮ ಮಗ ಚಿನ್ನ ಗೆದ್ದಿದ್ದಕ್ಕೆ ಏನನ್ನಿಸುತ್ತದೆ? ಎಂದು ಪ್ರಶ್ನಿಸಿದ ಪತ್ರಕರ್ತನಿಗೆ ತಕ್ಕ ಉತ್ತರ ನೀಡಿದ ನೀರಜ್ ಚೋಪ್ರಾ ತಾಯಿ

- Advertisement -
- Advertisement -

ಭಾನುವಾರ ಬುಡಾಪೆಸ್ಟ್‌ನಲ್ಲಿ ನಡೆದ 2023ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯನಾಗಿರುವ ನೀರಜ್ ಚೋಪ್ರಾ ಐತಿಹಾಸಿಕ ಸಾಧನೆ ಮಾಡಿದ್ದಾರೆ. 25 ವರ್ಷ ವಯಸ್ಸಿನ ಚೋಪ್ರಾ ಫೈನಲ್ ಸುತ್ತಿನಲ್ಲಿ 88.17 ಮೀಟರ್‌ಗಳಷ್ಟು ದೂರ ಜಾವೆಲಿನ್ ಎಸೆದು ಅಸಾಧಾರಣ ಸಾಧನೆಯೊಂದಿಗೆ ವಿಶ್ವ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಪಡೆದರು. ಈವೆಂಟ್‌ನಲ್ಲಿ ಪಾಕಿಸ್ತಾನದ ಅರ್ಷದ್ ನದೀಮ್ ಎರಡನೇ ಸ್ಥಾನ ಗಳಿಸಿದ್ದಾರೆ.

ಪಾಕಿಸ್ತಾನದ ಪ್ರತಿಸ್ಪರ್ಧಿ ವಿರುದ್ಧ ಭಾರತೀಯ ಅಥ್ಲೆಟ್‌ವೊಬ್ಬನ ಗೆಲುವನ್ನು ಕೆಲವರು ಪಾಕ್ ವಿರುದ್ಧದ ಯುದ್ಧದ ಗೆಲುವು ಎಂಬಂತೆ ಬಿಂಬಿಸಿದ್ದರು. ಆದರೆ, ಚೋಪ್ರಾ ಅವರ ತಾಯಿ ಸರೋಜ್ ದೇವಿ ಅವರು, ”ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ತನ್ನ ಮಗ ಪಾಕಿಸ್ತಾನಿ ಎದುರಾಳಿಯ ವಿರುದ್ಧ ಗೆದ್ದ ಬಗ್ಗೆ ವರದಿಗಾರ ಕೇಳಿದ ಪ್ರಶ್ನೆಗೆ ನೀಡಿರುವ ಉತ್ತರ ಎಲ್ಲರ ಹೃದಯವನ್ನು ತಟ್ಟಿದೆ.

ನೀರಜ್ ಚೋಪ್ರಾ ಅವರ ತಾಯಿ ತನ್ನ ಮಗನ ಗಮನಾರ್ಹ ಸಾಧನೆಯ ನಂತರ ಮಾಧ್ಯಮಗಳಿಗೆ ನೀಡಿರುವ ಸಂದರ್ಶನದ ವೀಡಿಯೊ ಇದೀಗ ಭಾರೀ ವೈರಲ್ ಆಗಿದೆ.

”ಪಾಕಿಸ್ತಾನದ ಅಥ್ಲೇಟ್ ಅರ್ಷದ್ ವಿರುದ್ಧ ತಮ್ಮ ಮಗನ ವಿಜಯದ ಬಗ್ಗೆ ತಾವೆಷ್ಟು ಭಾವುಕರಾಗಿದ್ದೀರಿ?” ಎಂದು ವರದಿಗಾರ ಕೇಳಿದಾಗ, ”ನೋಡಿ, ಎಲ್ಲರೂ ಮೈದಾನದಲ್ಲಿ ಆಡಲು ಬಂದಿದ್ದಾರೆ. ಒಬ್ಬರು ಅಥವಾ ಇನ್ನೊಬ್ಬರು ಖಂಡಿತವಾಗಿಯೂ ಗೆಲ್ಲುತ್ತಾರೆ. ಹಾಗಾಗಿ ಇಲ್ಲಿ ಪಾಕಿಸ್ತಾನ ಅಥವಾ ಹರ್ಯಾಣದವರು ಎಂಬ ಪ್ರಶ್ನೆಯೇ ಇಲ್ಲ. ಇದು ಬಹಳ ಸಂತೋಷದ ವಿಷಯವಾಗಿದೆ. ಆ ಪಾಕಿಸ್ಥಾನಿ ಗೆದ್ದಿದ್ದರೂ ಬಹಳ ಸಂತೋಷವಾಗುತ್ತಿತ್ತು” ಎಂದು ಸರೋಜ್ ದೇವಿ ಹೇಳಿದ್ದಾರೆ.

”ನೀರಜ್ ಒಬ್ಬ ಪಾಕಿಸ್ತಾನಿ ಅಥ್ಲೇಟ್‌ನನ್ನು ಸೋಲಿಸಿ ಚಿನ್ನ ಗೆದ್ದಿದ್ದಕ್ಕೆ ಏನನ್ನಿಸುತ್ತದೆ?” ಎಂದು ವರದಿಗಾರರು ನೀರಜ್ ಚೋಪ್ರಾ ಅವರ ತಾಯಿ ಬಳಿ ಕೇಳಿದರು. ಅದಕ್ಕೆ ಅವರು,”ಒಬ್ಬ ಆಟಗಾರನು ಆಟಗಾರ ಅಷ್ಟೇ. ಅವನು ಎಲ್ಲಿಂದ ಬಂದಿದ್ದಾನೆ ಎಂಬುದು ಮುಖ್ಯವಲ್ಲ, ಪಾಕಿಸ್ತಾನಿ ಆಟಗಾರ(ನದೀಮ್) ಗೆಲುವು ಸಾಧಿಸಿದ್ದರೂ ನನಗೆ ಸಂತೋಷವಾಗುತ್ತಿತ್ತು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Its the real sportsmanship. We r really proud of Niraj for his great achievement and extremely proud of his mother’s statement of true sportsmanship attitude. Because of this attitude Niraji is world beater today. Hats off to both of u.Mother India is really grateful to u both .

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...