Homeಕರ್ನಾಟಕಬೆಂಗಳೂರು: ಚಲಿಸುತ್ತಿದ್ದ ರೈಲಿನ ಅಡಿ ಮಲಗಿ ಪ್ರಾಣ ಉಳಿಸಿಕೊಂಡ ಮಹಿಳೆ!

ಬೆಂಗಳೂರು: ಚಲಿಸುತ್ತಿದ್ದ ರೈಲಿನ ಅಡಿ ಮಲಗಿ ಪ್ರಾಣ ಉಳಿಸಿಕೊಂಡ ಮಹಿಳೆ!

- Advertisement -
- Advertisement -

ಚಲಿಸುತ್ತಿದ್ದ ರೈಲಿನ ಅಡಿಯಲ್ಲಿ ಅಂಗಾತ ಮಲಗಿ ಮಹಿಳೆಯೊಬ್ಬರು ಜೀವ ಉಳಿಸಿಕೊಂಡಿರುವ ಘಟನೆ ರಾಜಾನುಕುಂಟೆ ಬಳಿ ನಡೆದಿದೆ, ಸದ್ಯ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ರೈಲಿನಡಿ ನುಗ್ಗಿ ಹಳಿ ದಾಟುವ ಯತ್ನದಲ್ಲಿದ್ದಾಗ ದಿಢೀರನೇ ರೈಲು ಚಲಿಸಿದ ಹಿನ್ನೆಲೆಯಲ್ಲಿ ಮಹಿಳೆ ಹಳಿ ಮಧ್ಯೆ ಮಲಗಿ ಪ್ರಾಣ ಉಳಿಸಿಕೊಂಡಿದ್ದಾರೆ.

ಪಾರ್ವತಿಪುರ, ಅದ್ದಿಗಾನಹಳ್ಳಿ, ತರಹುಣಸೆ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರು, ಕಾರ್ಮಿಕರು, ವಿದ್ಯಾರ್ಥಿಗಳು ರಾಜಾನುಕುಂಟೆ ತಲುಪಲು ರೈಲು ಹಳಿ ದಾಟಿ ಸಾಗಬೇಕಿದೆ. ರೈಲ್ವೆ ಕ್ರಾಸಿಂಗ್‌ ಸಮಯದಲ್ಲಿ ಗೂಡ್ಸ್‌ ರೈಲುಗಳು ಇಲ್ಲಿ ನಿಂತಿರುತ್ತವೆ. ಕೆಲವರು ಗೂಡ್ಸ್‌ ರೈಲುಗಳನ್ನು ಹಾರಿ ಹೋದರೆ, ಇನ್ನು ಕೆಲವರು ರೈಲಿನಡಿ ನುಗ್ಗಿ ದಾಟುತ್ತಾರೆ. ಅದೇ ರೀತಿ ಅದ್ದಿಗಾನಹಳ್ಳಿ ನಿವಾಸಿ ಮಹಿಳೆಯೊಬ್ಬರು ರಾಜಾನುಕುಂಟೆಯತ್ತ ತೆರಳಲು ರೈಲಿನ ಅಡಿ ನುಗ್ಗಿದ್ದರು. ಅಷ್ಟರಲ್ಲೇ ರೈಲು ಚಲಿಸಲು ಆರಂಭಿಸಿದೆ. ಇನ್ನೊಂದು ಭಾಗಕ್ಕೆ ತೆರಳುವುದು ಅಪಾಯಕಾರಿ ಎಂದು ಅರಿತ ಮಹಿಳೆ ಹಳಿಯ ಮಧ್ಯೆಯೇ ಬೋರಲಾಗಿ ಮಲಗಿಕೊಂಡಿದ್ದಾರೆ. ರೈಲು ಹೋದ ನಂತರ ಎದ್ದು ಬಂದಿದ್ದಾರೆ. ಸಂಪೂರ್ಣ ದೃಶ್ಯಾವಳಿಯನ್ನು ಸ್ಥಳೀಯರು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಜಾಲತಾಣದಲ್ಲಿ ಬಿಟ್ಟಿದ್ದಾರೆ.

ಅಪಾಯ ತಪ್ಪಿಸಲು ಕೆಳಸೇತುವೆ ನಿರ್ಮಾಣಕ್ಕೆ ಸ್ಥಳೀಯ ನಿವಾಸಿಗಳ ಒತ್ತಾಯ

ಈ ಬಗ್ಗೆ ಸ್ಥಳೀಯ ನಿವಾಸಿಯೊಬ್ಬರು ಮಾತನಾಡಿದ್ದು, ”ಇದೇ ಪ್ರದೇಶದಲ್ಲಿ ಆರು ತಿಂಗಳ ಹಿಂದೆ ವ್ಯಕ್ತಿಯೊಬ್ಬರು ರೈಲು ಹತ್ತಿ ಇಳಿಯುವಾಗ ಕಾಲು ಮುರಿದುಕೊಂಡು ಆಸ್ಪತ್ರೆ ಸೇರಿದ್ದರು. ಎರಡು ವರ್ಷಗಳ ಹಿಂದೆ ಹಳಿ ಕೆಳಗೆ ನುಗ್ಗಲು ಹೋಗಿ ಆಂಧ್ರದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಪ್ರತಿದಿನ ಸಾವಿರಾರು ಜನರು ಅಪಾಯಕಾರಿಯಾಗಿ ರೈಲು ಹಳಿ ದಾಟುತ್ತಾರೆ. ಈ ಹಿನ್ನೆಲೆಯಲ್ಲಿ ಕೆಳಸೇತುವೆ ನಿರ್ಮಾಣ ಮಾಡಿ ಈ ಅವ್ಯವಸ್ಥೆಗೆ ಮುಕ್ತಿಕೊಡಿ” ಎಂದು ಸರಕಾರಕ್ಕೆ ಒತ್ತಾಯ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...