Homeಮುಖಪುಟಚೀನಾ ಮ್ಯಾಪ್‌ ''ತುಂಬಾ ಗಂಭೀರ'' ವಿಚಾರ, ಪ್ರಧಾನಿ ಮಾತನಾಡಲೇಬೇಕು: ರಾಹುಲ್

ಚೀನಾ ಮ್ಯಾಪ್‌ ”ತುಂಬಾ ಗಂಭೀರ” ವಿಚಾರ, ಪ್ರಧಾನಿ ಮಾತನಾಡಲೇಬೇಕು: ರಾಹುಲ್

- Advertisement -
- Advertisement -

ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಮೇಲೆ ಹಕ್ಕು ಸಾಧಿಸುವ ಚೀನಾ “ಸ್ಟ್ಯಾಂಡರ್ಡ್ ಮ್ಯಾಪ್” ಬಿಡುಗಡೆ ಮಾಡಿರುವುದು ”ತುಂಬಾ ಗಂಭೀರ”ವಾದ ವಿಚಾರವಾಗಿದೆ. ನೆರೆಯ ದೇಶವು ಈಗಾಗಲೇ ಲಡಾಖ್‌ನಲ್ಲಿ ಭಾರತದ ಭೂಮಿಯನ್ನು ವಶಪಡಿಸಿಕೊಂಡಿದೆ. ಈ ಸಮಸ್ಯೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಸೋಮವಾರ, ಚೀನಾ,  ”ಸ್ಟಾಂಡರ್ಡ್ ಮ್ಯಾಪ್ ಆಫ್ ಚೀನಾ” 2023ರ ಆವೃತ್ತಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್‌ನ್ನು ತನ್ನ ಗಡಿಯೊಳಗಿನ ಪ್ರದೇಶಗಳೆಂದು ಹೇಳಿಕೊಂಡಿದೆ.

”ಲಡಾಕ್‌ನಲ್ಲಿ ಒಂದು ಇಂಚು ಭೂಮಿಯನ್ನು ಚೀನಾ ವಶಪಡಿಸಿಕೊಂಡಿಲ್ಲ ಎಂದು ಪ್ರಧಾನಿ ಸುಳ್ಳು ಹೇಳುತ್ತಿದ್ದಾರೆ. ನಾನು  ಈಗಷ್ಟೇ ಲಡಾಕ್‌ನಿಂದ ಹಿಂತಿರುಗಿದ್ದೇನೆ, ಚೀನಾ ನಮ್ಮ ಭೂಮಿಯನ್ನು ಆಕ್ರಮಿಸಿಕೊಂಡಿದೆ ಎಂದು ಇಡೀ ಲಡಾಖ್‌ಗೆ ತಿಳಿದಿದೆ. ಈ ನಕ್ಷೆಯ ವಿಷಯವು ತುಂಬಾ ಗಂಭೀರವಾಗಿದೆ ಆದರೆ ಅವರು ಈಗಾಗಲೇ ನಮ್ಮ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ಅದರ ಬಗ್ಗೆಯೂ ಏನಾದರೂ ಹೇಳಬೇಕು” ಎಂದು ರಾಹುಲ್ ಹೇಳಿದ್ದಾರೆ.

ಕಳೆದ ವಾರ ಕಾರ್ಗಿಲ್‌ನಲ್ಲಿ ಭಾರತ-ಚೀನಾ ಗಡಿ ಸಮಸ್ಯೆಯನ್ನು ಪ್ರಸ್ತಾಪಿಸಿದ ರಾಹುಲ್, ಲಡಾಖ್‌ನಲ್ಲಿರುವ ಪ್ರತಿಯೊಬ್ಬರಿಗೂ ಚೀನಾ “ನಮ್ಮ ಭೂಮಿಯನ್ನು ಕಿತ್ತುಕೊಂಡಿದೆ” ಎಂದು ತಿಳಿದಿದೆ. ಒಂದು ಇಂಚು ಭೂಮಿಯನ್ನು ಆಕ್ರಮಿಸಿಕೊಂಡಿಲ್ಲ ಎಂಬ ಪ್ರಧಾನಿಯ ಪ್ರತಿಪಾದನೆ “ಸಂಪೂರ್ಣ ಸುಳ್ಳು” ಎಂದು ಪ್ರತಿಪಾದಿಸಿದ್ದರು.

ಈ ಭೂಪಟದ ಬಗ್ಗೆ ಭಾರತ ಚೀನಾಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಅರುಣಾಚಲ ಪ್ರದೇಶ ಸೇರಿಸಿ ಚೀನಾ ಮ್ಯಾಪ್ ರಿಲೀಸ್: ಮೋದಿ ಪ್ರತಿಕ್ರಿಯಿಸುವಂತೆ ರಾಹುಲ್ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...