HomeಮುಖಪುಟINDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಕೇಜ್ರಿವಾಲ್: ಎಎಪಿ ವಕ್ತಾರೆ ಪ್ರಿಯಾಂಕ ಕಕ್ಕರ್

INDIA ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಕೇಜ್ರಿವಾಲ್: ಎಎಪಿ ವಕ್ತಾರೆ ಪ್ರಿಯಾಂಕ ಕಕ್ಕರ್

- Advertisement -
- Advertisement -

ದೆಹಲಿ ಮುಖ್ಯಮಂತ್ರಿಯಾಗಿ ಅರವೀಂದ್ ಕೇಜ್ರಿವಾಲ್ ಅವರು ನಿರಂತರವಾಗಿ ಜನರ ಸಮಸ್ಯೆಗಳನ್ನು ಪ್ರಸ್ತಾಪಿಸಿದ್ದಾರೆ ಮತ್ತು ಹಣದುಬ್ಬರವು ಕಡಿಮೆ ಇರುವ ಮಾದರಿಯನ್ನು ನೀಡಿದ್ದಾರೆ ಹಾಗಾಗಿ ‘INDIA’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿಯನ್ನಾಗಿ ಅವರ ಹೆಸರು ಪರಿಗಣಿಸುವುದು ಸೂಕ್ತ ಎಂದು ಎಎಪಿ ರಾಷ್ಟ್ರೀಯ ವಕ್ತಾರೆ ಪ್ರಿಯಾಂಕ ಕಕ್ಕರ್ ಹೇಳಿದ್ದಾರೆ.

ಮುಂಬೈನಲ್ಲಿ ಗುರುವಾರದಿಂದ ಆರಂಭವಾಗಲಿರುವ ‘INDIA’ ಮೈತ್ರಿಕೂಟದ ಮೂರನೇ ಸಭೆಗೂ ಮುನ್ನ ಪಿಟಿಐ ಸುದ್ದಿಸಂಸ್ಥೆ INDIAದ ನಾಯಕ ಯಾರು ಎಂದು ಕೇಳಿದಾಗ, ”ಕೇಜ್ರಿವಾಲ್ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಪಕ್ಷದಿಂದ ಪುಸ್ತಾಪಿಸಲಾಗಿದೆ. ಅವರು ನಿರಂತರವಾಗಿ ಜನರ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ್ದಾರೆ” ಎಂದು ಪ್ರಿಯಾಂಕ ಕಕ್ಕರ್ ಪ್ರತಿಕ್ರಿಯಿಸಿದ್ದಾರೆ.

”ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆಯನ್ನು ಸಾರ್ವಜನಿಕರಿಗೆ ಖರ್ಚು ಮಾಡಿದ ಮಾದರಿ ಮತ್ತು ಈ ಎಲ್ಲಾ ಕಲ್ಯಾಣ ಯೋಜನೆಗಳ ಹೊರತಾಗಿಯೂ ಅವರು ಲಾಭದಾಯಕ ಬಜೆಟ್ ಮಂಡಿಸಿದ್ದಾರೆ. ಆದರೆ ಈ ನಿರ್ಧಾರ (ಭಾರತದ ನಾಯಕನನ್ನು ಆಯ್ಕೆ ಮಾಡುವುದು) ನನ್ನದಲ್ಲ ಎಂದು ಅವರು ಹೇಳಿದರು.

”ಕೇಜ್ರಿವಾಲ್ ಅವರು ನೀಡಿರುವ ಮಾದರಿ ಆಡಳಿತದಿಂದಾಗಿ ದೆಹಲಿಯಲ್ಲಿ ಹಣದುಬ್ಬರ ಕಡಿಮೆಯಾಗಿದೆ. ಅವರು ಜನರಿಗೆ ಲಾಭವಾಗುವಂತಹ ಮಾದರಿಗಳನ್ನು ನೀಡಿದ್ದಾರೆ. ಅವರು ಪ್ರಧಾನಿ ಅಭ್ಯರ್ಥಿಯಾಗಬೇಕೆಂದು ನನ್ನ ಆಸೆ. ಆದರೆ ಅದು ನನ್ನ ಕೈಯಲ್ಲಿ ಇಲ್ಲ ಎಂದು ಅವರು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅಡುಗೆಯ ಬೆಲೆಯನ್ನು 200 ರೂ. ಕಡಿತಗೊಳಿಸುವ ನಿರ್ಧಾರದ ಬಗ್ಗೆ ಕಕ್ಕರ್ ವಾಗ್ದಾಳಿ ನಡೆಸಿದರು. ಪ್ರತಿಪಕ್ಷಗಳ ‘INDIA’ ಮೈತ್ರಿಕೂಟದ ಮೂರನೇ ಸಭೆಯ ನಂತರ ಇಂಧನ ಬೆಲೆಗಳು ಸಹ ಕಡಿಮೆಯಾಗುತ್ತವೆ ಎಂದು ಹೇಳಿದರು.

”ಪಾಟ್ನಾ ಮತ್ತು ಬೆಂಗಳೂರು ಸಭೆಗಳ ನಂತರ ( ‘INDIA’ ಮೈತ್ರಿಕೂಟ) ಎಲ್‌ಪಿಜಿ ದರವನ್ನು 200ರೂ. ಕಡಿಮೆ ಮಾಡಲಾಗಿದೆ. ಮುಂಬೈ ಸಭೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುತ್ತವೆ ಎಂದು ನನಗೆ ಖಾತ್ರಿಯಿದೆ” ಎಂದು ಅವರು ಹೇಳಿದರು.

ಪ್ರಿಯಾಂಕ ಕಕ್ಕರ್ ಅವರು ಕೇಜಿವಾಲ್‌ ಹೆಸರು ಪ್ರಸ್ತಾಪಿಸಿದ ಕೆಲವೇ ಗಂಟೆಗಳಲ್ಲಿ ದೆಹಲಿ ಸಂಪುಟ ಸಚಿವೆ ಅತಿಶಿ ಸಿಂಗ್ ಅವರು, ಕೇಜ್ರಿವಾಲ್ ಅವರು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ. ಅವರು ಪ್ರಧಾನಿ ಅಭ್ಯರ್ಥಿ ಸ್ಥಾನದ ಸ್ಪರ್ಧೆಯಲ್ಲಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟವನ್ನು ಎದುರಿಸಲು ಮತ್ತು ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ವಿರೋಧ ಪಕ್ಷದ ನಾಯಕರು ಜಂಟಿ ಪ್ರಚಾರ ತಂತ್ರವನ್ನು ರೂಪಿಸುತ್ತಾರೆ. ಕಾರ್ಯಕ್ರಮವನ್ನು ರೂಪಿಸಲು, ದೇಶಾದ್ಯಂತ ಆಂದೋಲನಗಳನ್ನು ನಡೆಸಲು ಮತ್ತು ಸೀಟು ಹಂಚಿಕೆಗಾಗಿ ಜಂಟಿ ಯೋಜನೆಗಳನ್ನು ರೂಪಿಸಲು ನಾಯಕರು ಕೆಲವು ಫಲಕಗಳನ್ನು ಘೋಷಿಸುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...