Homeಮುಖಪುಟವಿಶ್ವ ಕುಸ್ತಿ ಸಂಸ್ಥೆಯಿಂದ ಭಾರತೀಯ ಕುಸ್ತಿ ಫೆಡರೇಶನ್‌ ಅಮಾನತು: ಕಳವಳ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

ವಿಶ್ವ ಕುಸ್ತಿ ಸಂಸ್ಥೆಯಿಂದ ಭಾರತೀಯ ಕುಸ್ತಿ ಫೆಡರೇಶನ್‌ ಅಮಾನತು: ಕಳವಳ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ

- Advertisement -
- Advertisement -

ವಿಶ್ವ ಕುಸ್ತಿ ಸಂಸ್ಥೆ (ಯುಡಬ್ಲ್ಯುಡಬ್ಲ್ಯು)]ಯು ಗುರುವಾರ (ಆಗಸ್ಟ್ 24) ಯು ಭಾರತೀಯ ಕುಸ್ತಿ ಫೆಡರೇಶನ್‌ (ಡಬ್ಲ್ಯುಎಫ್‌ಐ)ನ ಸದಸ್ಯತ್ವವನ್ನು ಅಮಾನತುಗೊಳಿಸಿದೆ. ಈ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ.

”ಕೇಂದ್ರ ಸರ್ಕಾರವು ರಾಷ್ಟ್ರೀಯ ಕುಸ್ತಿಪಟುಗಳನ್ನು ಕಡೆಗಣಿಸಿದೆ. ರಾಷ್ಟ್ರೀಯ ಹಿತಾಸಕ್ತಿಗಿಂತ ರಾಜಕೀಯವನ್ನು ಇರಿಸುತ್ತಿದೆಯೇ ”ಎಂಬ ಅನುಮಾನವನ್ನು ಹುಟ್ಟುಹಾಕಿದೆ ” ಎಂದು ಹೇಳಿದ್ದಾರೆ.

ಡಬ್ಲ್ಯುಎಫ್‌ಐ ಸಂಸ್ಥೆಯಲ್ಲಿ ಚುನಾವಣೆ ಸರಿಯಾದ ಸಮಯಕ್ಕೆ ನಡೆಯದ ಕಾರಣ ಸದಸ್ಯತ್ವವನ್ನು ಅಮಾನತುಗೊಳಿಸಲಾಗಿದೆ. ಜೂನ್ 2023 ರಲ್ಲಿ ಚುನಾವಣೆಗಳು ನಡೆಯಬೇಕಿತ್ತು, ಆದರೆ ಅವುಗಳನ್ನು ಮುಂದೂಡಲಾಯಿತು ಹಾಗಾಗಿ ಯುಡಬ್ಲ್ಯೂಡಬ್ಲ್ಯೂ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾವನ್ನು ಅಮಾನತುಗೊಳಿಸಿದೆ.

ಈ ಬೆಳವಣಿಗೆಯು, ಮುಂಬರುವ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಧ್ವಜದ ಅಡಿಯಲ್ಲಿ ಭಾರತೀಯ ಕುಸ್ತಿಪಟುಗಳು ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಮತ್ತು ಬದಲಿಗೆ ‘ತಟಸ್ಥ ಕ್ರೀಡಾಪಟುಗಳು’ ಎಂದು ಭಾಗವಹಿಸಬೇಕಾಗುತ್ತದೆ. ಅಲ್ಲದೆ, ಭಾರತೀಯ ಅಥ್ಲೀಟ್ ವಿಜೇತರ ವೇದಿಕೆಗೆ ಬಂದರೆ, ರಾಷ್ಟ್ರಗೀತೆಯನ್ನು ನುಡಿಸಲಾಗುವುದಿಲ್ಲ.

ಇದನ್ನೂ ಓದಿ: ಬ್ರಿಜ್‌ಭೂಷಣ್ ವಿರುದ್ಧ ಸಾಕಷ್ಟು ಪುರಾವೆಗಳಿವೆ: ನ್ಯಾಯಾಲಯಕ್ಕೆ ದೆಹಲಿ ಪೊಲೀಸರ ಹೇಳಿಕೆ

ಈ ಬಗ್ಗೆ ಎಕ್ಸಾನಲ್ಲಿ ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ, ”ಯುಡಬ್ಲ್ಯೂಡಬ್ಲ್ಯೂ, ಕುಸ್ತಿ ಫೆಡರೇಶನ್ ಆಫ್ ಇಂಡಿಯಾವನ್ನು ಅಮಾನತುಗೊಳಿಸಿದೆ.ಎಂದು ತಿಳಿದು ನಾನು ಆಘಾತಕ್ಕೊಳಗಾಗಿದ್ದೇನೆ” ಎಂದು ಹೇಳಿದ್ದಾರೆ.

ಇದು ಇಡೀ ರಾಷ್ಟ್ರಕ್ಕೆ ತೀವ್ರ ಮುಜುಗರ ತಂದಿದೆ ಎಂದು ಹೇಳಿರುವ ಅವರು, ”ಕೇಂದ್ರ ಸರಕಾರವು ನಮ್ಮ ಕುಸ್ತಿಪಟುಗಳನ್ನು ನಾಚಿಕೆಗೇಡಿನ ದುರಹಂಕಾರದಿಂದ ನಡೆಸಿಕೊಳ್ಳುತ್ತಿದೆ. ನಮ್ಮ ಕುಸ್ತಿಪಟು ಸಹೋದರಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದರೂ ಅದನ್ನು ಧಿಕ್ಕರಿಸುವ ಮೂಲಕ ನಮ್ಮ ಕುಸ್ತಿಪಟುಗಳನ್ನು ನಿರಾಸೆಗೊಳಿಸಿದೆ” ಎಂದು ಬರೆದಿದ್ದಾರೆ.

”ಕೇಂದ್ರ ಮತ್ತು ಬಿಜೆಪಿ ನಮ್ಮ ಅದಮ್ಯ ಸಹೋದರಿಯರಿಗೆ ಲೈಂಗಿಕ ದೌರ್ಜನ್ಯ ಹಾಗೂ ಕೋಮುವಾದದಿಂದ ಕಿರುಕುಳ ನೀಡುತ್ತಲೇ ಇವೆ” ಎಂದು ಅವರು ಹೇಳಿದ್ದಾರೆ.

”ಭಾರತದ ಹೆಣ್ಣುಮಕ್ಕಳ ಘನತೆಗಾಗಿ ನಿಲ್ಲಲು ಸಾಧ್ಯವಾಗದವರ ವಿರುದ್ಧ ನಿಲ್ಲಬೇಕು ಮತ್ತು ಅವರನ್ನು ಶಿಕ್ಷಿಸಬೇಕು. ಲೆಕ್ಕಚುಕ್ತಾ ಮಾಡುವ ದಿನವು ತುಂಬಾ ದೂರವಿಲ್ಲ” ಎಂದು ಬ್ಯಾನರ್ಜಿ ಕಿಡಿಕಾರಿದ್ದಾರೆ.

ಈ ಅಮಾನತ್ತಿಗೆ ಕಾರಣ ಬಿಜೆಪಿ ಒಬ್ಬ ಸಂಸದ ಮತ್ತು ಅವರನ್ನು ಕೇಸರಿ ಪಕ್ಷದ ವರಿಷ್ಠರು ಬೆಂಬಲಿಸಿದ್ದಾರೆ ಎಂದು ಟಿಎಂಸಿ ರಾಜ್ಯಸಭಾ ಪಕ್ಷದ ನಾಯಕ ಡೆರೆಕ್ ಒ’ಬ್ರಿಯಾನ್ ಹೇಳಿದ್ದಾರೆ.

”ಒಂದೆಡೆ, ತುಂಬಾ ಸಂತೋಷವಿದೆ; ನಮ್ಮ ಹೃದಯವು ಸಂತೋಷದಿಂದ ತುಂಬಿದೆ. ನಮ್ಮ ಚಾಂಪಿಯನ್‌ಗಳಾದ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳು. ಮತ್ತೊಂದೆಡೆ, ಬಿಜೆಪಿಯ ಸಂಸದರಿಂದ ನಮಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಅಪಮಾನವಾಗಿದೆ. ವಿಶ್ವ ಕುಸ್ತಿ ಸಂಸ್ಥೆಯು ಭಾರತೀಯ ಒಕ್ಕೂಟವನ್ನು ಹೊರಹಾಕಿದೆ. ಇದು ಎಂತಹ ನಾಚಿಕೆಗೇಡಿನ ಸಂಗತಿ! ನಮಗೆ ಅಸಹ್ಯವಾಗಿದೆ” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...