Homeಮುಖಪುಟಕಾಂಗ್ರೆಸ್ ಜೊತೆ ಪಕ್ಷ ವಿಲೀನಗೊಳಿಸಲು ಸೋನಿಯಾ ಗಾಂಧಿ-ರಾಹುಲ್ ಭೇಟಿಯಾದ ವೈ.ಎಸ್. ಶರ್ಮಿಳಾ

ಕಾಂಗ್ರೆಸ್ ಜೊತೆ ಪಕ್ಷ ವಿಲೀನಗೊಳಿಸಲು ಸೋನಿಯಾ ಗಾಂಧಿ-ರಾಹುಲ್ ಭೇಟಿಯಾದ ವೈ.ಎಸ್. ಶರ್ಮಿಳಾ

- Advertisement -
- Advertisement -

ತೆಲಂಗಾಣದ ವೈಎಸ್‌ಆರ್ ಪಕ್ಷದ ಸಂಸ್ಥಾಪಕಿ ವೈ.ಎಸ್. ಶರ್ಮಿಳಾ ಅವರು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ದೆಹಲಿ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾನು ಇಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಉಭಯ ನಾಯಕರೊಂದಿಗೆ ಸಕಾರಾತ್ಮಕ ಚರ್ಚೆ ನಡೆದಿದೆ” ಎಂದು ಹೇಳಿದ್ದಾರೆ.

”ತೆಲಂಗಾಣದಲ್ಲಿ ಚಂದ್ರಶೇಖರ್ ರಾವ್ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲು ಕ್ಷಣಗಣನೆ ಆರಂಭವಾಗಿದೆ” ಎಂದು ಶರ್ಮಿಳಾ ವಾಗ್ದಾಳಿ ನಡೆಸಿದರು.

ಶರ್ಮಿಳಾ ಅವರು ತಮ್ಮ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನಗೊಳಿಸಲು ಮತ್ತು ತೆಲಂಗಾಣದಲ್ಲಿ ರಾಜಕೀಯವಾಗಿ ನೆಲೆ ಕಂಡುಕೊಳ್ಳಲು ಮುಂದಾಗಿದ್ದಾರೆ. ಆದರೆ, ರಾಜ್ಯದ ಕಾಂಗ್ರೆಸ್ ಘಟಕವು ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಶರ್ಮಿಳಾ ನೇರವಾಗಿ ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತೆಲಂಗಾಣದಲ್ಲಿ ಶರ್ಮಿಳಾ ಹೊಂದಿರುವ ರಾಜಕೀಯ ಪ್ರಭಾವದ ಕುರಿತು ಕಾಂಗ್ರೆಸ್‌ನ ಹೈಕಮಾಂಡ್‌ಗೆ ಅನುಮಾನವಿರುವ ಕಾರಣ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಿಕೊಳ್ಳುವ ದಿಸೆಯಲ್ಲಿ ಯಾವುದೇ ನಿರ್ಧಾರಕ್ಕೆ ಬಂದಿಲ್ಲ ಎಂದು ತಿಳಿದುಬಂದಿದೆ.

ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್‌ ರೆಡ್ಡಿ ಸೇರಿ ಪಕ್ಷದ ಹಲವು ಮುಖಂಡರು ಶರ್ಮಿಳಾ ಅವರ ಸೇರ್ಪಡೆಯನ್ನು ವಿರೋಧಿಸಿದ್ದಾರೆ. ಶರ್ಮಿಳಾ ಆಂಧ್ರಪ್ರದೇಶದವರು. ಅವರ ತಂದೆ, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಅವರು ತೆಲಂಗಾಣ ರಾಜ್ಯ ರಚನೆಯನ್ನು ವಿರೋಧಿಸಿದ್ದರು ಎಂದು ನಾಯಕರು ಹೇಳಿದ್ದಾರೆ.

ಇತ್ತೀಚೆಗೆ ಶರ್ಮಿಳಾ ಅವರು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದರು. ಆನಂತರ ಶರ್ಮಿಳಾ ಅವರ ಪಕ್ಷವು ಕಾಂಗ್ರೆಸ್ ಜೊತೆ ವಿಲೀನವಾಗುವ ಕುರಿತ ಸುದ್ದಿಗಳು ಹರಿದಾಡುತ್ತಿವೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್‌ಮೋಹನ್ ರೆಡ್ಡಿ ಅವರ ತಂಗಿಯಾಗಿರುವ ಶರ್ಮಿಳಾ ಅವರು ಜಗನ್ ಮುಖ್ಯಸ್ಥರಾಗಿರುವ ವೈಎಸ್‌ಆರ್ ಕಾಂಗ್ರೆಸ್ ಪಕ್ಷದಿಂದ ಹೊರಬಂದು, 2021ರಲ್ಲಿ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಸ್ಥಾಪಿಸಿದರು. ಬಳಿಕ, ಶರ್ಮಿಳಾ ತಾಯಿ ವಿಜಯಮ್ಮ ಅವರೂ ಮಗಳ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: ಅಮೇಥಿಯಿಂದಲೇ ರಾಹುಲ್ ಗಾಂಧಿ ಸ್ಪರ್ಧೆ: ಯುಪಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರಾಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...