Homeಮುಖಪುಟಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಈ ಪೊಲೀಸ್ ಮಾಡಿದ ಯಡವಟ್ಟಿನಿಂದ ಕೆಲಸವನ್ನೇ ಕಳೆದುಕೊಳ್ಳಬೇಕಾಗಿದೆ..

ಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಈ ಪೊಲೀಸ್ ಮಾಡಿದ ಯಡವಟ್ಟಿನಿಂದ ಕೆಲಸವನ್ನೇ ಕಳೆದುಕೊಳ್ಳಬೇಕಾಗಿದೆ..

- Advertisement -
- Advertisement -

ಈಗ ಮದುವೆಗಳಲ್ಲಿ ವಿವಾಹ ಪೂರ್ವ ವಿಡಿಯೋ ಚಿತ್ರೀಕರಣ (ಪ್ರಿ ವೆಡ್ಡಿಂಗ್ ಶೂಟ್) ಮಾಡಿಸುವುದು ಸಾಮಾನ್ಯ ಸಂಗತಿಯಾಗಿದೆ. 5 ರಿಂದ 10 ನಿಮಿಷ ಇರುವ ವಿಡಿಯೊಗಾಗಿಯೇ ಲಕ್ಷ ಲಕ್ಷ ಹಣ ಖರ್ಚು ಮಾಡುತ್ತಾರೆ. ಜನಪ್ರಿಯ ಸಿನಿಮಾ ಹಾಡೋಂದನ್ನು ಹಿನ್ನೆಲೆಯಾಗಿ ಬಳಸಿ ಚೆಂದ ಚೆಂದ ಬಟ್ಟೆ ಧರಿಸಿ ಸಿನಿಮಾ ಹಾಡಿನಂತೆಯೇ ವಿಡಿಯೋ ಮಾಡಿ, ನೋಡಿ ಜನ ಖುಷಿ ಪಡುತ್ತಾರೆ..

ಇದೇ ರೀತಿ ರಾಜಸ್ಥಾನದ ಪೊಲೀಸ್ ಒಬ್ಬ ತನ್ನ ಮದುವೆಯಲ್ಲಿ ತಮಾಷೆ ಮಾಡಲು ಹೋಗಿ ತನ್ನ ಕೆಲಸವನ್ನೇ ಕಳೆದುಕೊಳ್ಳುವ ಹಂತಕ್ಕೆ ಬಂದು ನಿಂತಿದ್ದಾನೆ. ಅಷ್ಟಕ್ಕೂ ಈತ ಮಾಡಿ ತಪ್ಪು ಏನು ಗೊತ್ತೆ? ಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಮಾಡಿದ ತಪ್ಪು ಇಲ್ಲಿದೆ ನೋಡಿ.

ಪ್ರಿ ವೆಡ್ಡಿಂಗ್ ಶೂಟ್ ನಲ್ಲಿ ಮದುಮಗ ಪೊಲೀಸ್ ಸಮವಸ್ತ್ರದಲ್ಲಿ ನಿಂತಿರುತ್ತಾನೆ. ಮದುಮಗಳು ಹೆಲ್ಮೆಟ್ ಧರಿಸದೇ ಸ್ಕೂಟರ್ ನಲ್ಲಿ ಬರುತ್ತಾಳೆ. ಅವನು ಕೂಡಲೇ ಅವಳನ್ನು ನಿಲ್ಲಿಸಿ ಹೆಲ್ಮೆಟ್ ಇಲ್ಲದೆ ಸವಾರಿ ಮಾಡಿದ್ದಕ್ಕಾಗಿ ದಂಡ ವಿಧಿಸುತ್ತಾನೆ.

ಆಗ ಆಕೆ ಲಂಚವನ್ನು ಕೈಗೆ ಕೊಡದೇ ಆತನ ಜೇಬಿಗೆ ಹಾಕುತ್ತಾಳೆ ಮತ್ತು ಆತನ ಇಡೀ ಕೈಚೀಲವನ್ನು (ಪರ್ಸ್) ತೆಗೆದುಕೊಂಡು ಹೋಗುತ್ತಾಳೆ. ಆಗ ಆತ ಅವಳತ್ತ ಓಡಿ ತನ್ನ ಕೈಚೀಲ ಪಡೆದುಕೊಳ್ಳಲು ಪ್ರಯತ್ನಿಸುತ್ತಾನೆ, ಅವಳು ನಿರಾಕರಿಸುತ್ತಾಳೆ ಈಗೆ ಅವರು ಪ್ರೀತಿಯಲ್ಲಿ ಬೀಳುತ್ತಾರೆ..

ಥೇಟ್ ಬಾಲಿವುಡ್ ಹಾಡಿನ ಶೈಲಿಯಲ್ಲಿ ಮಾಡಲಾದ ಈ ಮನಮೋಹಕ ಹಾಡನ್ನು ಮಧುಮಗ ಪೊಲೀಸ್ ಧನಪತ್ ಯೂಟ್ಯೂಬ್ ಗೆ ಅಪ್ ಲೋಡ್ ಮಾಡಿದ್ದಾನೆ. ಹಾಡು ಎಲ್ಲೆಡೆ ಹರಿದಾಡಿ ಕೊನೆಗೆ ಪೊಲೀಸ್ ಅಧಿಕಾರಿಗಳಿಗೂ ತಲುಪಿದೆ. ನೋಡಿದ ಕೂಡಲೇ ಕೆಂಡಾಮಂಡಲರಾದ ಅಧಿಕಾರಿಗಳು ಧನಪತ್ ಗೆ ಕರೆಕಳಿಸಿದ್ದಾರೆ.

ಉದಯಪುರ ಜಿಲ್ಲೆಯಲ್ಲಿ ಪೋಸ್ಟ್ ಮಾಡಲಾದ ಧನಪತ್ ಅವರ ಪೂರ್ವ ವಿವಾಹದ ಚಿತ್ರೀಕರಣವು ಅವರು ಪೊಲೀಸ್ ಸಮವಸ್ತ್ರವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಮತ್ತು ಲಂಚ ಪಡೆಯುತ್ತಿರುವುದು ಇಡೀ ಇಲಾಖೆಗೆ ಅಗೌರವ ಎಂದು ಭಾವಿಸಿ ಆತನ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯ ಐಜಿಯಾದ ಡಾ.ಹವಾ ಸಿಂಗ್ ಘೋಮರಿಯಾ ಅವರು ಎಲ್ಲಾ ಶ್ರೇಣಿಯ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್‌ಗಳಿಗೆ ನೀಡಿದ ನೋಟಿಸ್‌ನಲ್ಲಿ “ಪೊಲೀಸ್ ಸಮವಸ್ತ್ರವನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಅಪರಾಧ ಮಾಡುವ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದು ಹೇಳಿದ್ದಾರೆ.

ಲಂಚ ಪಡೆಯುತ್ತಿರುವುದನ್ನು ಸಾರ್ವತ್ರಿಕರಣಗೊಳಿಸಿರುವುದರಿಂದ ಇದು ಪೊಲೀಸ್ ಇಲಾಖೆಯ ಚಿತ್ರಣವನ್ನು ಹಾಳು ಮಾಡುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಘಟನೆಯು ದೊಡ್ಡ ಎಚ್ಚರಿಕೆಯಾಗಿದ್ದು ಎಲ್ಲರೂ ಜಾಗರೂಕರಾಗಿರಬೇಕೆಂಬ ಆದೇಶ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಾಲಿ ಎಕ್ಟಿಂಗ್ ಮಾಡಿದರೆ ಕೆಲಸ ಹೋಗುತ್ತದೆ.
    ನಿಜವಾಗಿಯೂ ಲಂಕ ಪಡೆಯುವ ಅದಿಕಾರಿಗಳು ಇನ್ನೂ ಹುದ್ದೆಯಲ್ಲಿ ಇರುತ್ತಾರೆ

  2. ಕಾಲಿ ಎಕ್ಟಿಂಗ್ ಮಾಡಿದರೆ ಕೆಲಸ ಹೋಗುತ್ತದೆ.
    ನಿಜವಾಗಿಯೂ ಲಂಚ ಪಡೆಯುವ ಅಧಿಕಾರಿಗಳು ಇನ್ನೂ ಹುದ್ದೆಯಲ್ಲಿ ಇರುತ್ತಾರೆ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...