Homeಕರ್ನಾಟಕಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು LPG ಸಿಲಿಂಡರ್ ಬೆಲೆ ಇಳಿಸಿದ ಪ್ರಧಾನಿ ಮೋದಿಗೆ ಧನ್ಯವಾದ: ಸಿಎಂ...

ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು LPG ಸಿಲಿಂಡರ್ ಬೆಲೆ ಇಳಿಸಿದ ಪ್ರಧಾನಿ ಮೋದಿಗೆ ಧನ್ಯವಾದ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

”ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಕೊನೆಗೂ ಎಲ್.ಪಿ.ಜಿ ಸಿಲಿಂಡರ್ ಬೆಲೆಯನ್ನು ರೂ.200 ಕಡಿಮೆ ಮಾಡಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಸಮಸ್ತ ಜನತೆಯ ಪರವಾಗಿ ಧನ್ಯವಾದಗಳು” ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ”ಚುನಾವಣಾ ಪೂರ್ವದಲ್ಲಿ ನಮ್ಮ ಪಕ್ಷ ನೀಡಿದ ಭರವಸೆಗಳಲ್ಲಿ ಪ್ರಮುಖವಾದವು ಐದು ಗ್ಯಾರಂಟಿ ಯೋಜನೆಗಳು. ಆ ಐದರಲ್ಲಿ ನಾಲ್ಕನ್ನು ನೂರು ದಿನಗಳೊಳಗೆ ನಮ್ಮ ಸರ್ಕಾರ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ನುಡಿದಂತೆ ನಡೆಯುವ ನಮ್ಮ ಬದ್ದತೆ ನಿಮಗೂ ಪ್ರೇರಣೆಯಾಗಲಿ, ಅದರಿಂದ ಜನರಿಗೆ ಒಳ್ಳೆಯದಾಗಲಿ ಎಂದು ಮನ:ಪೂರ್ವಕವಾಗಿ ಹಾರೈಸುತ್ತೇನೆ” ಎಂದು ತಿಳಿಸಿದ್ದಾರೆ.

”2013ರ ವಿಧಾನಸಭಾ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಜನತಗೆ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಹಿಂದಿನ ನಮ್ಮ ಸರ್ಕಾರ ಈಡೇರಿಸಿದ್ದು, ಅದರ ಬಗೆಗಿನ ವಿವರವಾದ ಅಧಿಕೃತ ಮಾಹಿತಿಯನ್ನು ರಾಜ್ಯದ ಜನರ ಮುಂದಿಟ್ಟಿದ್ದೇವೆ. ಈ ನಮ್ಮ ಬದ್ದತೆ ಕೂಡಾ ನಿಮಗೆ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆʼʼ ಎಂದು ಹೇಳಿದ್ಧಾರೆ.

”2014 ಮತ್ತು 2018ರ ಲೋಕಸಭಾ ಚುನಾವಣಾ ಪೂರ್ವದಲ್ಲಿ ಭಾರತೀಯ ಜನತಾ ಪಕ್ಷ ಬಿಡುಗಡೆಗೊಳಿಸಿರುವ ಎರಡು ಪ್ರಣಾಳಿಕೆಗಳು ನನ್ನ ಮುಂದಿದೆ. ಮೂರನೇ ಬಾರಿ ಪ್ರಧಾನ ಮಂತ್ರಿಯಾಗಲು ಹೊರಟಿರುವ ನರೇಂದ್ರ ಮೋದಿಯವರೇ, ದಯವಿಟ್ಟು ಈ ಎರಡು ಪ್ರಣಾಳಿಕೆಗಳಲ್ಲಿನ ಎಷ್ಟು ಭರವಸೆಗಳನ್ನು ಈಡೇರಿಸಲಾಗಿದೆ ಎನ್ನುವ ಲೆಕ್ಕವನ್ನು ನಮಗಲ್ಲವಾದರೂ ದೇಶದ ಜನತೆಗೆ ಕೊಡಿ” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಜನರನ್ನು ಮೆಚ್ಚಿಸುವಲ್ಲಿ ನಿಪುಣರು: LPG ಸಿಲಿಂಡರ್ ಬೆಲೆ ಇಳಿಕೆ ಕುರಿತು ಪ್ರಧಾನಿ ಮೋದಿ ವಿರುದ್ಧ ಅಧೀರ್ ಚೌಧರಿ ವಾಗ್ದಾಳಿ

”ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮ ನೇತೃತ್ವದ ಕೆಂದ್ರ ಸರ್ಕಾರವು ಬಹಳಷ್ಟು ಮೀನಮೇಷ ಎಣಿಸಿದ ನಂತರ ಅಂತಿಮವಾಗಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ರೂ.200 ಕಡಿಮೆ ಮಾಡಿ ಘೋಷಣೆ ಮಾಡಿದೆ. ಆದರೆ, ಮೇಲುನೋಟಕ್ಕೆ ಇದರಲ್ಲಿ ಕೇಂದ್ರದ ಪಾಲು ಏನೂ ಇಲ್ಲ ಎನ್ನುವುದು ನಿಚ್ಚಳಗೊಂಡಿದೆ. ‘ಕಾರ್ಪೊರೆಟ್‌ ಹೊಣೆಗಾರಿಕೆ’ಯ ರೀತಿ ತೈಲ ಕಂಪೆನಿಗಳೇ ಈ ವೆಚ್ಚವನ್ನು ಭರಿಸಲಿವೆ ಎಂದು ನಿಮ್ಮದೇ ಮಂತ್ರಿಮಂಡಲದ ಸಚಿವರು ಹೇಳುವ ಮೂಲಕ ಅದನ್ನು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

”ಅಂತಾರಾಷ್ಟ್ರೀಯ ಮಾರುಕಟ್ಟೆಯ ‘ಸೌದಿ ಸಿಪಿ’ ದರ ಪ್ರತಿ ಟನ್‌ಗೆ ಈ ಆರ್ಥಿಕ ವರ್ಷಾರಂಭದಲ್ಲಿ 732 ಡಾಲರ್‌ ಇದ್ದದ್ದು, ಈಗ 385 ಡಾಲರ್‌ಗೆ ಕುಸಿದಿದೆ. ಅಂದರೆ ಶೇ.48ರಷ್ಟು ಇಳಿಕೆಯಾಗಿದೆ. ಸಿಲಿಂಡರ್ ದರವೂ ಹೆಚ್ಚು ಕಡಿಮೆ ಅರ್ಧದಷ್ಟು ಇಳಿಕೆ ಮಾಡಬೇಕಿತ್ತಲ್ಲವೇ? ಆದರೆ, ಕೇಂದ್ರ ಸರ್ಕಾರ ಇಳಿಕೆ ಮಾಡಿರುವುದು ಪ್ರತಿ ಸಿಲಿಂಡರ್‌ಗೆ ರೂ. 200 ಮಾತ್ರ, ಯಾಕೆ?” ಎಂದು ಪ್ರಶ್ನೆ ಮಾಡಿದ್ದಾರೆ.

”ಜನರ ಮೇಲಿನ ಬೆಲೆ ಏರಿಕೆಯ ಹೊರೆ ಇಳಿಸುವ ಪ್ರಾಮಾಣಿಕ ಉದ್ದೇಶ ಕೇಂದ್ರ ಸರ್ಕಾರ ಹೊಂದಿದ್ದರೆ ಪ್ರತಿ ಅನಿಲ ಸಿಲಿಂಡರ್‌ನ ಬೆಲೆಯನ್ನು ಕನಿಷ್ಠ ರೂ.500-600ರಷ್ಟು ಇಳಿಸಬೇಕಾಗಿದೆ. ಇದೇ ರೀತಿ ಡೀಸೆಲ್-ಪೆಟ್ರೋಲ್ ಬೆಲೆಯನ್ನು ರೂ.60-70ಕ್ಕೆ ಇಳಿಸಬೇಕಾಗುತ್ತದೆ. ಇದನ್ನು ಮಾಡದೆ ಇದ್ದರೆ ಇದೊಂದು ಕಣ್ಣೊರೆಸುವ ತಂತ್ರ, ಚುನಾವಣಾ ಗಿಮಿಕ್, ಬಾಯಿ ಬಡಾಯಿ ಎಂದು ಹೇಳಬೇಕಾಗುತ್ತದೆ” ಎಂದು ಅವರು ಟೀಕಿಸಿದ್ದಾರೆ.

”ಜನತೆಯನ್ನು ಬೆಲೆ ಏರಿಕೆಯಿಂದ ರಕ್ಷಿಸುವ, ಸ್ವಾವಲಂಬಿಗಳಾಗಿಸಿರುವ ನಮ್ಮ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಅವರ ಪಕ್ಷದಲ್ಲಿ ಅವುಗಳಿಂದ ಭಯಭೀತರಾಗಿ ತೋರಿಕೆಗೆ ಮಾತ್ರ ಇಂತಹ ಕ್ರಮಕ್ಕೆ ಮುಂದಾಗಿರುವುದು ಸ್ಪಷ್ಟ. ಆದರೆ, ದೇಶದ ಜನತೆ “ಕೆಲಸ ಮಾಡದೆ ಪುಕ್ಕಟೆ ಪ್ರಚಾರ ಪಡೆದುಕೊಳ್ಳುವ, ಬಣ್ಣದ ಮಾತುಗಳಿಂದಲೇ ಜನರ ಹೊಟ್ಟೆ ತುಂಬಿಸುವ” ಬಿಜೆಪಿಯ ಪೊಳ್ಳು ಆಡಳಿತವನ್ನು ಅರಿತಿದ್ದಾರೆ. ಇಂತಹ ಕಣ್ಕಟ್ಟಿನ ತಂತ್ರಗಳನ್ನು ಇನ್ನು ಮುಂದುವರಿಸಲಾಗದು” ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...