Homeಕರ್ನಾಟಕಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು LPG ಸಿಲಿಂಡರ್ ಬೆಲೆ ಇಳಿಸಿದ ಪ್ರಧಾನಿ ಮೋದಿಗೆ ಧನ್ಯವಾದ: ಸಿಎಂ...

ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು LPG ಸಿಲಿಂಡರ್ ಬೆಲೆ ಇಳಿಸಿದ ಪ್ರಧಾನಿ ಮೋದಿಗೆ ಧನ್ಯವಾದ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

”ನಮ್ಮ ಗ್ಯಾರಂಟಿ ಯೋಜನೆಗಳಿಂದ ಪ್ರೇರಣೆ ಪಡೆದು ಕೊನೆಗೂ ಎಲ್.ಪಿ.ಜಿ ಸಿಲಿಂಡರ್ ಬೆಲೆಯನ್ನು ರೂ.200 ಕಡಿಮೆ ಮಾಡಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಸಮಸ್ತ ಜನತೆಯ ಪರವಾಗಿ ಧನ್ಯವಾದಗಳು” ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ”ಚುನಾವಣಾ ಪೂರ್ವದಲ್ಲಿ ನಮ್ಮ ಪಕ್ಷ ನೀಡಿದ ಭರವಸೆಗಳಲ್ಲಿ ಪ್ರಮುಖವಾದವು ಐದು ಗ್ಯಾರಂಟಿ ಯೋಜನೆಗಳು. ಆ ಐದರಲ್ಲಿ ನಾಲ್ಕನ್ನು ನೂರು ದಿನಗಳೊಳಗೆ ನಮ್ಮ ಸರ್ಕಾರ ಅನುಷ್ಠಾನಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ನುಡಿದಂತೆ ನಡೆಯುವ ನಮ್ಮ ಬದ್ದತೆ ನಿಮಗೂ ಪ್ರೇರಣೆಯಾಗಲಿ, ಅದರಿಂದ ಜನರಿಗೆ ಒಳ್ಳೆಯದಾಗಲಿ ಎಂದು ಮನ:ಪೂರ್ವಕವಾಗಿ ಹಾರೈಸುತ್ತೇನೆ” ಎಂದು ತಿಳಿಸಿದ್ದಾರೆ.

”2013ರ ವಿಧಾನಸಭಾ ಚುನಾವಣೆಯ ಕಾಲದಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದ ಜನತಗೆ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಹಿಂದಿನ ನಮ್ಮ ಸರ್ಕಾರ ಈಡೇರಿಸಿದ್ದು, ಅದರ ಬಗೆಗಿನ ವಿವರವಾದ ಅಧಿಕೃತ ಮಾಹಿತಿಯನ್ನು ರಾಜ್ಯದ ಜನರ ಮುಂದಿಟ್ಟಿದ್ದೇವೆ. ಈ ನಮ್ಮ ಬದ್ದತೆ ಕೂಡಾ ನಿಮಗೆ ಪ್ರೇರಣೆ ನೀಡಲಿ ಎಂದು ಹಾರೈಸುತ್ತೇನೆʼʼ ಎಂದು ಹೇಳಿದ್ಧಾರೆ.

”2014 ಮತ್ತು 2018ರ ಲೋಕಸಭಾ ಚುನಾವಣಾ ಪೂರ್ವದಲ್ಲಿ ಭಾರತೀಯ ಜನತಾ ಪಕ್ಷ ಬಿಡುಗಡೆಗೊಳಿಸಿರುವ ಎರಡು ಪ್ರಣಾಳಿಕೆಗಳು ನನ್ನ ಮುಂದಿದೆ. ಮೂರನೇ ಬಾರಿ ಪ್ರಧಾನ ಮಂತ್ರಿಯಾಗಲು ಹೊರಟಿರುವ ನರೇಂದ್ರ ಮೋದಿಯವರೇ, ದಯವಿಟ್ಟು ಈ ಎರಡು ಪ್ರಣಾಳಿಕೆಗಳಲ್ಲಿನ ಎಷ್ಟು ಭರವಸೆಗಳನ್ನು ಈಡೇರಿಸಲಾಗಿದೆ ಎನ್ನುವ ಲೆಕ್ಕವನ್ನು ನಮಗಲ್ಲವಾದರೂ ದೇಶದ ಜನತೆಗೆ ಕೊಡಿ” ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಜನರನ್ನು ಮೆಚ್ಚಿಸುವಲ್ಲಿ ನಿಪುಣರು: LPG ಸಿಲಿಂಡರ್ ಬೆಲೆ ಇಳಿಕೆ ಕುರಿತು ಪ್ರಧಾನಿ ಮೋದಿ ವಿರುದ್ಧ ಅಧೀರ್ ಚೌಧರಿ ವಾಗ್ದಾಳಿ

”ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮ ನೇತೃತ್ವದ ಕೆಂದ್ರ ಸರ್ಕಾರವು ಬಹಳಷ್ಟು ಮೀನಮೇಷ ಎಣಿಸಿದ ನಂತರ ಅಂತಿಮವಾಗಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ರೂ.200 ಕಡಿಮೆ ಮಾಡಿ ಘೋಷಣೆ ಮಾಡಿದೆ. ಆದರೆ, ಮೇಲುನೋಟಕ್ಕೆ ಇದರಲ್ಲಿ ಕೇಂದ್ರದ ಪಾಲು ಏನೂ ಇಲ್ಲ ಎನ್ನುವುದು ನಿಚ್ಚಳಗೊಂಡಿದೆ. ‘ಕಾರ್ಪೊರೆಟ್‌ ಹೊಣೆಗಾರಿಕೆ’ಯ ರೀತಿ ತೈಲ ಕಂಪೆನಿಗಳೇ ಈ ವೆಚ್ಚವನ್ನು ಭರಿಸಲಿವೆ ಎಂದು ನಿಮ್ಮದೇ ಮಂತ್ರಿಮಂಡಲದ ಸಚಿವರು ಹೇಳುವ ಮೂಲಕ ಅದನ್ನು ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

”ಅಂತಾರಾಷ್ಟ್ರೀಯ ಮಾರುಕಟ್ಟೆಯ ‘ಸೌದಿ ಸಿಪಿ’ ದರ ಪ್ರತಿ ಟನ್‌ಗೆ ಈ ಆರ್ಥಿಕ ವರ್ಷಾರಂಭದಲ್ಲಿ 732 ಡಾಲರ್‌ ಇದ್ದದ್ದು, ಈಗ 385 ಡಾಲರ್‌ಗೆ ಕುಸಿದಿದೆ. ಅಂದರೆ ಶೇ.48ರಷ್ಟು ಇಳಿಕೆಯಾಗಿದೆ. ಸಿಲಿಂಡರ್ ದರವೂ ಹೆಚ್ಚು ಕಡಿಮೆ ಅರ್ಧದಷ್ಟು ಇಳಿಕೆ ಮಾಡಬೇಕಿತ್ತಲ್ಲವೇ? ಆದರೆ, ಕೇಂದ್ರ ಸರ್ಕಾರ ಇಳಿಕೆ ಮಾಡಿರುವುದು ಪ್ರತಿ ಸಿಲಿಂಡರ್‌ಗೆ ರೂ. 200 ಮಾತ್ರ, ಯಾಕೆ?” ಎಂದು ಪ್ರಶ್ನೆ ಮಾಡಿದ್ದಾರೆ.

”ಜನರ ಮೇಲಿನ ಬೆಲೆ ಏರಿಕೆಯ ಹೊರೆ ಇಳಿಸುವ ಪ್ರಾಮಾಣಿಕ ಉದ್ದೇಶ ಕೇಂದ್ರ ಸರ್ಕಾರ ಹೊಂದಿದ್ದರೆ ಪ್ರತಿ ಅನಿಲ ಸಿಲಿಂಡರ್‌ನ ಬೆಲೆಯನ್ನು ಕನಿಷ್ಠ ರೂ.500-600ರಷ್ಟು ಇಳಿಸಬೇಕಾಗಿದೆ. ಇದೇ ರೀತಿ ಡೀಸೆಲ್-ಪೆಟ್ರೋಲ್ ಬೆಲೆಯನ್ನು ರೂ.60-70ಕ್ಕೆ ಇಳಿಸಬೇಕಾಗುತ್ತದೆ. ಇದನ್ನು ಮಾಡದೆ ಇದ್ದರೆ ಇದೊಂದು ಕಣ್ಣೊರೆಸುವ ತಂತ್ರ, ಚುನಾವಣಾ ಗಿಮಿಕ್, ಬಾಯಿ ಬಡಾಯಿ ಎಂದು ಹೇಳಬೇಕಾಗುತ್ತದೆ” ಎಂದು ಅವರು ಟೀಕಿಸಿದ್ದಾರೆ.

”ಜನತೆಯನ್ನು ಬೆಲೆ ಏರಿಕೆಯಿಂದ ರಕ್ಷಿಸುವ, ಸ್ವಾವಲಂಬಿಗಳಾಗಿಸಿರುವ ನಮ್ಮ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಅವರ ಪಕ್ಷದಲ್ಲಿ ಅವುಗಳಿಂದ ಭಯಭೀತರಾಗಿ ತೋರಿಕೆಗೆ ಮಾತ್ರ ಇಂತಹ ಕ್ರಮಕ್ಕೆ ಮುಂದಾಗಿರುವುದು ಸ್ಪಷ್ಟ. ಆದರೆ, ದೇಶದ ಜನತೆ “ಕೆಲಸ ಮಾಡದೆ ಪುಕ್ಕಟೆ ಪ್ರಚಾರ ಪಡೆದುಕೊಳ್ಳುವ, ಬಣ್ಣದ ಮಾತುಗಳಿಂದಲೇ ಜನರ ಹೊಟ್ಟೆ ತುಂಬಿಸುವ” ಬಿಜೆಪಿಯ ಪೊಳ್ಳು ಆಡಳಿತವನ್ನು ಅರಿತಿದ್ದಾರೆ. ಇಂತಹ ಕಣ್ಕಟ್ಟಿನ ತಂತ್ರಗಳನ್ನು ಇನ್ನು ಮುಂದುವರಿಸಲಾಗದು” ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...