Homeಮುಖಪುಟಉತ್ತರ ಪ್ರದೇಶ: ಕೇಂದ್ರ ಸಚಿವರ ಮನೆಯಲ್ಲಿ ಶವ ಪತ್ತೆ; ಸಚಿವರ ಮಗನ ಬಂದೂಕಿನಿಂದಲೇ ಗುಂಡಿನ ದಾಳಿ

ಉತ್ತರ ಪ್ರದೇಶ: ಕೇಂದ್ರ ಸಚಿವರ ಮನೆಯಲ್ಲಿ ಶವ ಪತ್ತೆ; ಸಚಿವರ ಮಗನ ಬಂದೂಕಿನಿಂದಲೇ ಗುಂಡಿನ ದಾಳಿ

- Advertisement -
- Advertisement -

ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ನಿವಾಸದಲ್ಲಿ ಶುಕ್ರವಾರ ಬೆಳಿಗ್ಗೆ 30 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ. ಗುಂಡೇಟಿನಿಂದ ಈ ವ್ಯಕ್ತಿ ಮೃತಪಟ್ಟಿದ್ದು, ಗುಂಡಿನ ದಾಳಿಗೆ ಬಳಸಿದ ಪಿಸ್ತೂಲ್ ಸಚಿವರ ಪುತ್ರ ವಿಕಾಸ್ ಕಿಶೋರ್ ಅವರದ್ದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಪಶ್ಚಿಮ ಲಕ್ನೋದ ಉಪ ಪೊಲೀಸ್ ಆಯುಕ್ತ ರಾಹುಲ್ ರಾಜ್, ”ಮೃತರನ್ನು ವಿನಯ್ ಶ್ರೀವಾಸ್ತವ ಎಂದು ಗುರುತಿಸಲಾಗಿದ್ದು, ಇವರು ಗುಂಡೇಟಿನಿಂದ ಮೃತಪಟ್ಟಿದ್ದಾರೆ. ಈ ಘಟನೆ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ” ಎಂದು ಅವರು ತಿಳಿಸಿದ್ದಾರೆ.

ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಡಿಸಿಪಿ, ”ವಿನಯ್ ಶ್ರೀವಾಸ್ತವ್ ಎಂಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ವಿಕಾಸ್ ಕಿಶೋರ್ ಅವರಿಗೆ ಸೇರಿದ ಪಿಸ್ತೂಲ್‌ನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

”ವಿಧಿವಿಜ್ಞಾನ ತಂಡ ಆಗಮಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ” ಎಂದು ತಿಳಿಸಿದರು.

ಮೃತರ ಸಹೋದರ ಮಾತನಾಡಿದ್ದು, ”ಇದು ಆತ್ಮಹತ್ಯೆಯಲ್ಲ ಕೊಲೆ ನಡೆದಿದೆ. ವಿನಯ್ ಅವರ ಶರ್ಟ್ ಹರಿದಿದ್ದು, ಸ್ಥಳದಲ್ಲಿದ್ದ ಜನರ ನಡುವೆ ಜಗಳವಾಗಿದೆ” ಎಂದು ಹೇಳಿದ್ದಾರೆ.

”ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ನಿವಾಸದಲ್ಲಿ ನನ್ನ ಸಹೋದರ ವಿನಯ್ ಶ್ರೀವಾಸ್ತವ್ ಅವರನ್ನು ಹತ್ಯೆ ಮಾಡಲಾಗಿದೆ. ನನ್ನ ಸಹೋದರ ಮತ್ತು ಸಚಿವರ ಮಗ ವಿಕಾಸ್ ಕಿಶೋರ್ ಇಬ್ಬರೂ ಸ್ನೇಹಿತರಾಗಿದ್ದರು. ಈ ಘಟನೆ ನಡೆದಾಗ ಮೂವರು ಇದ್ದರು ಆದರೆ ವಿಕಾಸ್ ಈಗ ಎಲ್ಲಿ ಹೋಗಿದ್ದಾನೆ ಎಂದು ನನಗೆ ಗೊತ್ತಿಲ್ಲ. ಪೊಲೀಸರು ಅವರ ಪರವಾನಗಿ ಪಡೆದ ರಿವಾಲ್ವರ್ ವಶಪಡಿಸಿಕೊಂಡಿದ್ದಾರೆ” ಎಂದು ಮೃತನ ಸಹೋದರ ಹೇಳಿದರು.

ಈ ಬಗ್ಗೆ ಪೊಲೀಸರು ಮಾತನಾಡಿದ್ದು, ”ಪ್ರಕರಣದ ತನಿಖೆ ನಡೆಸುತ್ತಿದ್ದೇವೆ, ಇದರಲ್ಲಿ ಭಾಗಿಯಾಗಿರುವವರನ್ನು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಕೌಶಲ್ ಕಿಶೋರ್ ಅವರು, ”ಈ ಘಟನೆ ನಡೆದ ಸಮಯದಲ್ಲಿ ನನ್ನ ಮಗ ಮನೆಯಲ್ಲಿ ಇರಲಿಲ್ಲ” ಎಂದು ಕೌಶಲ್ ಕಿಶೋರ್ ಹೇಳಿದ್ದಾರೆ.

”ಈ ವಿಷಯ ತಿಳಿದ ವಿಕಾಸ್ ತುಂಬಾ ದುಃಖಿತನಾಗಿದ್ದ, ಮೃತ ವಿನಯ್ ನನ್ನ ಮಗನಿಗೆ ತುಂಬಾ ಒಳ್ಳೆಯ ಸ್ನೇಹಿತ” ಎಂದು ತಿಳಿಸಿದ್ದಾರೆ.

”ಅದು ತನ್ನ ಮಗ ವಿಕಾಸ್‌ನ ಪಿಸ್ತೂಲ್‌, ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ, ಅಪರಾಧಿಗಳನ್ನು ಬಿಡುವುದಿಲ್ಲ” ಎಂದು ಸಂಸದರು ಹೇಳಿದ್ದಾರೆ.

ಇದನ್ನೂ ಓದಿ: 5 ದಿನಗಳ ಸಂಸತ್ತಿನ ವಿಶೇಷ ಅಧಿವೇಶನ ಕರೆದ ಕೇಂದ್ರ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...