Homeಮುಖಪುಟಉತ್ತರ ಪ್ರದೇಶ: ಕೇಂದ್ರ ಸಚಿವರ ಮನೆಯಲ್ಲಿ ಶವ ಪತ್ತೆ; ಸಚಿವರ ಮಗನ ಬಂದೂಕಿನಿಂದಲೇ ಗುಂಡಿನ ದಾಳಿ

ಉತ್ತರ ಪ್ರದೇಶ: ಕೇಂದ್ರ ಸಚಿವರ ಮನೆಯಲ್ಲಿ ಶವ ಪತ್ತೆ; ಸಚಿವರ ಮಗನ ಬಂದೂಕಿನಿಂದಲೇ ಗುಂಡಿನ ದಾಳಿ

- Advertisement -
- Advertisement -

ಕೇಂದ್ರ ಸಚಿವ ಹಾಗೂ ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ನಿವಾಸದಲ್ಲಿ ಶುಕ್ರವಾರ ಬೆಳಿಗ್ಗೆ 30 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ. ಗುಂಡೇಟಿನಿಂದ ಈ ವ್ಯಕ್ತಿ ಮೃತಪಟ್ಟಿದ್ದು, ಗುಂಡಿನ ದಾಳಿಗೆ ಬಳಸಿದ ಪಿಸ್ತೂಲ್ ಸಚಿವರ ಪುತ್ರ ವಿಕಾಸ್ ಕಿಶೋರ್ ಅವರದ್ದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಪಶ್ಚಿಮ ಲಕ್ನೋದ ಉಪ ಪೊಲೀಸ್ ಆಯುಕ್ತ ರಾಹುಲ್ ರಾಜ್, ”ಮೃತರನ್ನು ವಿನಯ್ ಶ್ರೀವಾಸ್ತವ ಎಂದು ಗುರುತಿಸಲಾಗಿದ್ದು, ಇವರು ಗುಂಡೇಟಿನಿಂದ ಮೃತಪಟ್ಟಿದ್ದಾರೆ. ಈ ಘಟನೆ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ” ಎಂದು ಅವರು ತಿಳಿಸಿದ್ದಾರೆ.

ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಡಿಸಿಪಿ, ”ವಿನಯ್ ಶ್ರೀವಾಸ್ತವ್ ಎಂಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ವಿಕಾಸ್ ಕಿಶೋರ್ ಅವರಿಗೆ ಸೇರಿದ ಪಿಸ್ತೂಲ್‌ನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

”ವಿಧಿವಿಜ್ಞಾನ ತಂಡ ಆಗಮಿಸಿದ್ದು, ತನಿಖೆ ನಡೆಸಲಾಗುತ್ತಿದೆ. ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ” ಎಂದು ತಿಳಿಸಿದರು.

ಮೃತರ ಸಹೋದರ ಮಾತನಾಡಿದ್ದು, ”ಇದು ಆತ್ಮಹತ್ಯೆಯಲ್ಲ ಕೊಲೆ ನಡೆದಿದೆ. ವಿನಯ್ ಅವರ ಶರ್ಟ್ ಹರಿದಿದ್ದು, ಸ್ಥಳದಲ್ಲಿದ್ದ ಜನರ ನಡುವೆ ಜಗಳವಾಗಿದೆ” ಎಂದು ಹೇಳಿದ್ದಾರೆ.

”ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ನಿವಾಸದಲ್ಲಿ ನನ್ನ ಸಹೋದರ ವಿನಯ್ ಶ್ರೀವಾಸ್ತವ್ ಅವರನ್ನು ಹತ್ಯೆ ಮಾಡಲಾಗಿದೆ. ನನ್ನ ಸಹೋದರ ಮತ್ತು ಸಚಿವರ ಮಗ ವಿಕಾಸ್ ಕಿಶೋರ್ ಇಬ್ಬರೂ ಸ್ನೇಹಿತರಾಗಿದ್ದರು. ಈ ಘಟನೆ ನಡೆದಾಗ ಮೂವರು ಇದ್ದರು ಆದರೆ ವಿಕಾಸ್ ಈಗ ಎಲ್ಲಿ ಹೋಗಿದ್ದಾನೆ ಎಂದು ನನಗೆ ಗೊತ್ತಿಲ್ಲ. ಪೊಲೀಸರು ಅವರ ಪರವಾನಗಿ ಪಡೆದ ರಿವಾಲ್ವರ್ ವಶಪಡಿಸಿಕೊಂಡಿದ್ದಾರೆ” ಎಂದು ಮೃತನ ಸಹೋದರ ಹೇಳಿದರು.

ಈ ಬಗ್ಗೆ ಪೊಲೀಸರು ಮಾತನಾಡಿದ್ದು, ”ಪ್ರಕರಣದ ತನಿಖೆ ನಡೆಸುತ್ತಿದ್ದೇವೆ, ಇದರಲ್ಲಿ ಭಾಗಿಯಾಗಿರುವವರನ್ನು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಕೌಶಲ್ ಕಿಶೋರ್ ಅವರು, ”ಈ ಘಟನೆ ನಡೆದ ಸಮಯದಲ್ಲಿ ನನ್ನ ಮಗ ಮನೆಯಲ್ಲಿ ಇರಲಿಲ್ಲ” ಎಂದು ಕೌಶಲ್ ಕಿಶೋರ್ ಹೇಳಿದ್ದಾರೆ.

”ಈ ವಿಷಯ ತಿಳಿದ ವಿಕಾಸ್ ತುಂಬಾ ದುಃಖಿತನಾಗಿದ್ದ, ಮೃತ ವಿನಯ್ ನನ್ನ ಮಗನಿಗೆ ತುಂಬಾ ಒಳ್ಳೆಯ ಸ್ನೇಹಿತ” ಎಂದು ತಿಳಿಸಿದ್ದಾರೆ.

”ಅದು ತನ್ನ ಮಗ ವಿಕಾಸ್‌ನ ಪಿಸ್ತೂಲ್‌, ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ, ಅಪರಾಧಿಗಳನ್ನು ಬಿಡುವುದಿಲ್ಲ” ಎಂದು ಸಂಸದರು ಹೇಳಿದ್ದಾರೆ.

ಇದನ್ನೂ ಓದಿ: 5 ದಿನಗಳ ಸಂಸತ್ತಿನ ವಿಶೇಷ ಅಧಿವೇಶನ ಕರೆದ ಕೇಂದ್ರ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...