Homeಕರ್ನಾಟಕಅನರ್ಹ ಸಂಪುಟ, ಅತೃಪ್ತ ಸರ್ಕಾರ: ಹೈದರಾಬಾದ್ ಕರ್ನಾಟಕಕ್ಕೆ ಭಾರೀ ಅನ್ಯಾಯ

ಅನರ್ಹ ಸಂಪುಟ, ಅತೃಪ್ತ ಸರ್ಕಾರ: ಹೈದರಾಬಾದ್ ಕರ್ನಾಟಕಕ್ಕೆ ಭಾರೀ ಅನ್ಯಾಯ

- Advertisement -
- Advertisement -

ಅಂತೂ ಇಂತೂ ಗಜಪ್ರಸವದಂತೆ ಯಡಿಯೂರಪ್ಪ ತಮ್ಮ ಅರೆಬರೆ ಸಂಪುಟವನ್ನು ರಚಿಸಿದ್ದಾರೆ. ಆದರೆ ಸಾಮಾಜಿಕ ನ್ಯಾಯ ಹಾಗೂ ಪ್ರಾದೇಶಿಕ ಸಮತೋಲನವನ್ನು ಗಮನದಲ್ಲಿಟ್ಟುಕೊಳ್ಳದೇ ಮಾಡಿರುವ ಈ ಸಂಪುಟವನ್ನು ಅನರ್ಹ ಸಂಪುಟವೆನ್ನಬಹುದು. ಇನ್ನು ತಾನು ಭರವಸೆ ಕೊಟ್ಟಿದ್ದವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಆಗದಿದ್ದಕ್ಕಾಗಿ ಅಸಮಧಾನದಿಂದ ಕುದಿಯುತ್ತಿರುವ ಯಡಿಯೂರಪ್ಪ, ಉಪ – ಮುಖ್ಯಮಂತ್ರಿ ಸ್ಥಾನ ಸಿಗದೆ ಬೇಸರಗೊಂಡಿರುವ ಕೆ.ಎಸ್. ಈಶ್ವರಪ್ಪ, ಆರ್.ಅಶೋಕ, ಗೋವಿಂದ ಕಾರಜೋಳ, ಬಿ.ಶ್ರೀರಾಮುಲು ಹಾಗೂ ಪ್ರಮುಖ ಖಾತೆಗಳಿಗಾಗಿ ಹಾತೊರೆಯುತ್ತಿರುವ ಇತರ ಸಚಿವರಿಂದಾಗಿ ಇದನ್ನು ಅತೃಪ್ತ ಸರ್ಕಾರವೆಂದೇ ಕರೆಯಬೇಕಾಗುತ್ತದೆ.

ಯಾವುದೇ ಬದ್ಧತೆ, ಸಾಮಾಜಿಕ ಕಾಳಜಿಗಳಿಲ್ಲದ ಆರ್.ಎಸ್.ಎಸ್ ನ ಬಿ.ಎಲ್ ಸಂತೋಷ್‍ ಸಲಹೆಯಂತೆ, ಕರ್ನಾಟಕದ ಸಾಮಾಜಿಕ ಸಂರಚನೆ ಮತ್ತು ಪ್ರಾದೇಶಿಕ ಅಸಮತೋಲನ ಕುರಿತು ಪ್ರಾಥಮಿಕ ಜ್ಞಾನವೂ ಇರದ “ಮೋಟಾಭಾಯ್” ಅಮಿತ್ ಷಾ ಅಂತಿಮಗೊಳಿಸಿದ ಸಚಿವ ಸಂಪುಟವು ಮುಂದಿನ ದಿನಗಳಲ್ಲಿ ಭಾರೀ ರಾಜಕೀಯ ಪಲ್ಲಟಗಳಿಗೆ ಕಾರಣವಾಗಬಹುದು. ಸೇರ್ಪಡೆಯಾದ 17 ಜನರಲ್ಲಿ 7 ಲಿಂಗಾಯತ, 3 ಒಕ್ಕಲಿಗ, 2 ಹಿಂದುಳಿದ ವರ್ಗ, 3 ಪರಿಶಿಷ್ಟ ಜಾತಿ, 1 ಪರಿಶಿಷ್ಟ ಪಂಗಡ ಹಾಗು 1 ಬ್ರಾಹ್ಮಣರಿದ್ದಾರೆ.

2018 ರ ವಿಧಾನಸಭಾ ಚುನಾವಣೆಯಲ್ಲಿ ಮತ್ತು ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸಾರಾಸಗಟಾಗಿ ಬೆಂಬಲಿಸಿದ್ದ ಬೋವಿ, ಯಾದವ, ಮರಾಠ ಹಾಗೂ ಮೀನುಗಾರ ಸಮುದಾಯಗಳಿಗೆ ಇಲ್ಲಿ ಯಾವುದೇ ಪ್ರಾತಿನಿಧ್ಯ ಇಲ್ಲ. ಇನ್ನು ರೆಡ್ಡಿ, ಕಮ್ಮ ಹಾಗು ಬಲಿಜ ಜಾತಿಗಳಿಗೆ ಸಂಪುಟದಲ್ಲಿ ಯಾವುದೇ ಸ್ಥಾನ ದೊರೆತಿಲ್ಲ. ಇದಲ್ಲದೆ ಕರಾವಳಿಯಲ್ಲಿ ಬಿಜೆಪಿಯ ಕಟ್ಟಾ ಬೆಂಬಲಿಗರಾಗಿರುವ ಬಂಟ ಮತ್ತು ಮೊಗವೀರ ಸಮುದಾಯಗಳಿಗೂ ನಿರಾಶೆಯಾಗಿದೆ.

ಇತ್ತ ಜಿಲ್ಲಾವಾರು ಪ್ರಾತಿನಿಧ್ಯವನ್ನು ನೋಡಿದರೆ ಬೆಳಗಾವಿ (2), ಬೆಂಗಳೂರು ನಗರ (3), ಶಿವಮೊಗ್ಗ(2), ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಗಳಿಗೆ ತಲಾ ಒಂದೊಂದು ಸಚಿವ ಸ್ಥಾನ ದೊರೆತಿದೆ. ಉಳಿದ ವಿಜಯಪುರ, ಕಲ್ಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಉತ್ತರ ಕನ್ನಡ, ದಾವಣಗೆರೆ, ಹಾಸನ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಮಂಗಳೂರು, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ. ಈ 17 ಜಿಲ್ಲೆಗಳಿಗೆ ಪ್ರಾತಿನಿಧ್ಯವೇ ಇಲ್ಲ. ಇವುಗಳಲ್ಲಿ ಅರ್ಧದಷ್ಟು ಜಿಲ್ಲೆಗಳು ಇತ್ತೀಚಿನ ಪ್ರವಾಹ, ಭೂ ಕುಸಿತದಂತಹ ಪ್ರಾಕೃತಿಕ ವಿಕೋಪಕ್ಕೆ ಬಲಿಯಾಗಿವೆ. ಇಲ್ಲಿ ತುರ್ತು ಪರಿಹಾರ ಕಾರ್ಯದ ಉಸ್ತುವಾರಿಯ ಅವಶ್ಯಕತೆ ಇದೆ.

ಸಂಪುಟ ವಿಸ್ತರಣೆಯಲ್ಲಿ ಪ್ರಾದೇಶಿಕವಾಗಿ ಅತಿಹೆಚ್ಚು ಅನ್ಯಾಯವಾಗಿರುವುದು ಅತ್ಯಂತ ಹಿಂದುಳಿದ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಎನ್ನುವುದೇ ದುರಂತ. ಇಲ್ಲಿನ 6 ಜಿಲ್ಲೆಗಳ ಪೈಕಿ ಬೀದರ್ ಜಿಲ್ಲೆಯ ಔರಾದ್‍ನ ಪ್ರಭು ಚವ್ಹಾಣ್‍ಗೆ ಮಾತ್ರ ಸಂಪುಟದಲ್ಲಿ ಸ್ಥಾನ ದೊರೆತಿದೆ. ಅದು ಕೂಡ ಪಶುಸಂಗೋಪನಾ ಇಲಾಖೆಯಾಗಿದೆ. ಹೈ.ಕರ್ನಾಟಕದ ಒಟ್ಟು 40 ಶಾಸಕರಲ್ಲಿ 15 ಜನ ಬಿಜೆಪಿಯವರಿದ್ದಾರೆ. ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ಒಬ್ಬ ವಿಧಾನ ಪರಿಷತ್ ಸದಸ್ಯರೂ ಇದ್ದಾರೆ. ಮೊನ್ನೆ ತಾನೇ ನಡೆದ ಲೋಕಸಭಾ ಚುನಾವಣೆಯಲ್ಲಿ 5 ಕ್ಕೆ 5 ಕ್ಷೇತ್ರಗಳಲ್ಲಿ ಬಿಜೆಪಿಯ ಸಂಸದರೇ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಸದನದ ರಸಿಕ ಸವದಿಗೆ ಸುಗ್ಗಿ: ಮೂವರು ಡಿಸಿಎಂ, ಸಿಎಂಗೆ ಮೂರುನಾಮ!

ಯಾದಗಿರಿ ಜಿಲ್ಲೆಯಿಂದ ರಾಜು ಗೌಡ ಹಾಗು ಬಳ್ಳಾರಿ ಜಿಲ್ಲೆಯ ಕರುಣಾಕರ ರೆಡ್ಡಿಯವರಿಗೆ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗುವ ಭರವಸೆ ಕೊನೆಯ ಕ್ಷಣದವರೆಗೂ ಇತ್ತು. ಹೀಗಿದ್ದೂ ಕೂಡ ಕೇವಲ ಒಬ್ಬರಿಗೆ ಮಾತ್ರ ಅವಕಾಶ ನೀಡಿರುವುದು ಈ ಭಾಗದ ಬಿಜೆಪಿಯ ಶಾಸಕರು ಹಾಗೂ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಹೀಗಾಗಿ ಅವರನ್ನು ಸಮಾಧಾನ ಪಡಿಸಲು ಬಳ್ಳಾರಿ ಜಿಲ್ಲೆಯ ಶ್ರೀರಾಮುಲು ಅವರಿಗೂ ಅವಕಾಶ ನೀಡಿರುವುದಾಗಿ ಹೇಳಲಾಗುತ್ತಿದೆ. ಆದರೆ ಶ್ರೀರಾಮುಲು ಆಯ್ಕೆಯಾಗಿರುವುದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದ ಹಾಗಾಗಿ ಆ ಜಿಲ್ಲೆಯಿಂದ ಆಯ್ಕೆಯಾದ ಬಿಜೆಪಿಯ 5 ಜನ ಶಾಸಕರಿಗೂ ಶ್ರೀರಾಮಲುರನ್ನೇ ತೋರಿಸಿ ಸಮಾಧಾನ ಪಡಿಸುತ್ತಿದ್ದಾರೆ.

ಇದನ್ನೂ ಓದಿ: ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾದ ಸಿ.ಟಿ ರವಿ: ಕಾರಣವೇನು ಗೊತ್ತೆ?

ಹೈ.ಕರ್ನಾಟಕದಲ್ಲಿ ರಾಯಚೂರು, ಯಾದಗಿರಿ ಹಾಗು ಕಲ್ಬುರ್ಗಿ ಜಿಲ್ಲೆಗಳು ತೀವ್ರ ಮಳೆ ಮತ್ತು ಭೀಮಾ, ಕೃಷ್ಣ, ತುಂಗಭದ್ರಾ ನದಿಗಳ ಪ್ರವಾಹದಿಂದ ತತ್ತರಿಸಿ ಹೋಗಿವೆ. ಜನಜೀವನ ಸಹಜ ಪರಿಸ್ಥಿತಿಗೆ ಬರಲು ಪರಿಹಾರ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯಬೇಕಾದ ಅಗತ್ಯವಿದೆ. ಹಾಗೆ ನೋಡಿದರೆ ಹಿಂದಿನ ಮೈತ್ರಿ ಸರ್ಕಾರದಲ್ಲಿ ಬೀದರ್‍ನಿಂದ 3 , ಬಳ್ಳಾರಿಯಿಂದ 2 , ರಾಯಚೂರು ಮತ್ತು ಕಲ್ಬುರ್ಗಿಯಿಂದ ತಲಾ ಒಬ್ಬರು ಹೀಗೆ ಹೈ.ಕರ್ನಾಟಕದಿಂದ ಒಟ್ಟು 7 ಜನ ಸಚಿವರಿದ್ದರು. ಈಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೈ.ಕರ್ನಾಟಕ ಪ್ರದೇಶ ನಿರ್ಲಕ್ಷ್ಯಕ್ಕೊಳಗಾಗಿರುವುದು ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.

– ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ-ಕೋಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಭಿಮನಗೌಡ ಕಾಸಿರೆಡ್ಡಿ ಇವರ ಲೇಖನ ವಾಸ್ತವಕ್ಕೆ ಹಿಡಿದ ಕನ್ನಡಿಯಾಗಿದೆ.
    ಬಂಗಿ ದೊಡ್ಡ ಮಂಜುನಾಥ, ಕಂಪ್ಲಿ.

  2. ಹೈಕ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ ಯಂತಿದೆ ಗೌಡರ ಲೇಖನ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ : ಬಿಎಲ್‌ಒ ಸೇರಿದಂತೆ ಒಂದೇ ಬೂತ್‌ನ 340 ಮುಸ್ಲಿಂ ಮತದಾರರ ಹೆಸರು ಡಿಲೀಟ್!

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಬಳಿಕ ಪ್ರಕಟಗೊಂಡ ಮತದಾರರ ಪೂರಕ ಪಟ್ಟಿಯಲ್ಲಿ, ಒಂದೇ ಬೂತ್‌ನ 340 ಜನರ ಹೆಸರುಗಳನ್ನು ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಸಿರ್ಹತ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಈ ಬೆಳವಣಿಗೆ...

ಹಾರ್ಮುಜ್ ಮಾರ್ಗದ ಅನುಮತಿ: ಭಾರತ ನಮ್ಮ ‘ಸ್ನೇಹಪರ ರಾಷ್ಟ್ರ’ಗಳ ಸಾಲಿನಲ್ಲಿ ಸೇರಿದೆ: ಇರಾನ್ ವಿದೇಶಾಂಗ ಸಚಿವ 

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಇತರರಿಗೆ ನಿರ್ಬಂಧಗಳು ಮುಂದುವರಿದಿದ್ದರೂ, ಭಾರತ ಸೇರಿದಂತೆ ಆಯ್ದ "ಸ್ನೇಹಪರ ರಾಷ್ಟ್ರಗಳ" ಹಡಗುಗಳಿಗೆ ಆಯಕಟ್ಟಿನ ನಿರ್ಣಾಯಕ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅನುಮತಿ ನೀಡುತ್ತಿರುವುದಾಗಿ ಇರಾನ್ ಹೇಳಿದೆ. ಚೀನಾ, ರಷ್ಯಾ,...

ʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು

ಗೋಡೆ ನಿರ್ಮಿಸಿ ಚರ್ಚ್‌ಗೆ ಹೋಗುವ ದಾರಿಯನ್ನು ತಡೆದಿರುವ ಭೂ ವಿವಾದದ ಬಗ್ಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ತಮಿಳುನಾಡಿನ ಶಂಕರಲಿಂಗಪುರಂ ಗ್ರಾಮದ ಪರಿಶಿಷ್ಟ ಜಾತಿಯ ನಿವಾಸಿಗಳು, ಮುಂಬರುವ ವಿಧಾನಸಭಾ ಚುನಾವಣೆಯನ್ನು...

ಬಂಗಾಳ ಚುನಾವಣೆ : ಆರ್‌ಜಿ ಕರ್ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಯನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಬುಧವಾರ (ಮಾ.25) ಬಿಜೆಪಿ...

ಆಂಧ್ರ ಪ್ರದೇಶ | ಟಿಪ್ಪರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ : 14 ಮಂದಿ ಸಜೀವ ದಹನ

ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ 14 ಜನರು ಸಜೀವ ದಹನವಾದ ಘಟನೆ ಆಂಧ್ರ ಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಗುರುವಾರ (ಮಾ.26) ಸಂಭವಿಸಿದೆ ಎಂದು...

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...

ಗೋವಾ | 25 ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಬಿಜೆಪಿ ಕೌನ್ಸಿಲರ್ ಮಗನ ಬಂಧನ

ಗೋವಾದ ಕುರ್ಚೋರೆಮ್ ಪುರಸಭೆಯ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯ್ಕ್ ಅವರ ಮಗ ಸೋಹಮ್ ನಾಯ್ಕ್ (20) ಎಂಬಾತನನ್ನು ಸುಮಾರು 25ರಿಂದ 30 ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಕ್ಷಿಣ ಗೋವಾ ಪೊಲೀಸರು ಬಂಧಿಸಿದ್ದಾರೆ.  ಆರೋಪಿ...

ಇರಾನ್‌ ಕದನ ವಿರಾಮಕ್ಕೆ 15 ಅಂಶಗಳ ಪ್ರಸ್ತಾಪ ಮುಂದಿಟ್ಟ ಟ್ರಂಪ್

ಪಶ್ಚಿಮ ಏಷ್ಯಾ ಸಂಘರ್ಷ ಪ್ರಾರಂಭಗೊಂಡು ನಾಲ್ಕು ವಾರಗಳು ಪೂರ್ಣಗೊಳ್ಳುವಾಗ, ಈವರೆಗೆ ಸುಮಾರು 2000 ಜೀವಗಳನ್ನು ಬಲಿ ಪಡೆದ ಹಾಗೂ ಜಾಗತಿಕವಾಗಿ ಇಂಧನ ಸಮಸ್ಯೆಯನ್ನು ಹುಟ್ಟು ಹಾಕಿರುವ ಯುದ್ಧವನ್ನು ಕೊನೆಗೊಳಿಸಲು ಅಮೆರಿಕ ಇರಾನ್‌ ಮುಂದೆ...

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...