Homeಮುಖಪುಟಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ:  ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ

ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ:  ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಬಂಧನ

- Advertisement -
- Advertisement -

ಕೆನರಾ ಬ್ಯಾಂಕ್‌ಗೆ ಸಂಬಂಧಿಸಿದ 538 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈನಲ್ಲಿರುವ ಇಡಿ ಕಚೇರಿಯಲ್ಲಿ ಸುದೀರ್ಘ ವಿಚಾರಣೆಯ ನಂತರ  ಗೋಯಲ್ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಬಂಧಿಸಲಾಗಿದೆ.

74ರ ಹರೆಯದ ಗೋಯಲ್  ಅವರನ್ನು ಇಂದು ಮುಂಬೈನ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಇಡಿ ಅಧಿಕಾರಿಗಳು  ಹೇಳಿದ್ದು, ಇಡಿ ಕೋರ್ಟ್‌ನಲ್ಲಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಕೇಳಲಿದೆ.

ಕೆನರಾ ಬ್ಯಾಂಕ್‌ಗೆ 538 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್ ಏರ್‌ವೇಸ್ ಮತ್ತು ಗೋಯಲ್, ಅವರ ಪತ್ನಿ ಅನಿತಾ ಮತ್ತು ಕಂಪೆನಿಯ ಮಾಜಿ ಅಧಿಕಾರಿಗಳ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಪ್ರಥಮ ಮಾಹಿತಿ ವರದಿ (ಎಫ್‌ಐಆರ್)  ದಾಖಲಿಸಿದ ನಂತರ ಪ್ರಕರಣ ಬಯಲಾಗಿದೆ.

ಜೆಟ್‌ ಏರ್‌ವೇಸ್‌ (ಇಂಡಿಯಾ) ಲಿಮಿಟೆಡ್‌ ಸಂಸ್ಥೆಯು ಬ್ಯಾಂಕ್‌ನಿಂದ ಒಟ್ಟು 848.86 ಕೋಟಿ ಸಾಲ ಪಡೆದಿದ್ದು, ಈ ಪೈಕಿ ಇನ್ನೂ 538.62 ಕೋಟಿ ಬಾಕಿ ಉಳಿದಿದೆ ಎಂದು ತಿಳಿಸಿತ್ತು. ಇದನ್ನು ವಂಚನೆ ಖಾತೆಯಾಗಿ ಜುಲೈ 29, 2011ರಲ್ಲಿ ಸಿಬಿಐ ಘೋಷಿಸಿತ್ತು.

ಇದನ್ನು ಓದಿ: INDIA ಮೈತ್ರಿಕೂಟ: ಸಮನ್ವಯ ಸಮಿತಿ’ಯಲ್ಲಿನ 13 ನಾಯಕರ ಪಟ್ಟಿ ಇಲ್ಲಿದೆ..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಭಾರತವು ದ್ವೀಪ ರಾಷ್ಟ್ರದೊಂದಿಗೆ ಮುಕ್ತ ವ್ಯಾಪಾರ ಒಪ್ಪಂದವನ್ನು ಬಯಸುತ್ತಿದೆ: ಮಾಲ್ಡೀವ್ಸ್ ಸಚಿವ

0
ಮಾಲ್ಡೀವ್ಸ್‌ನೊಂದಿಗೆ ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ರಚಿಸಲು ಭಾರತವು ಪ್ರಯತ್ನಗಳನ್ನು ಪ್ರಾರಂಭಿಸಿದೆ ಎಂದು ಮಾಲ್ಡೀವ್ಸ್ ಸಚಿವ ಮೊಹಮ್ಮದ್ ಸಯೀದ್ ಹೇಳಿದ್ದಾರೆ. ಮಾಲೆಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆರ್ಥಿಕ ಅಭಿವೃದ್ಧಿ ಮತ್ತು ವ್ಯಾಪಾರ ಸಚಿವ ಸಯೀದ್, "ಎಫ್‌ಟಿಎಗೆ...