Homeಮುಖಪುಟಉತ್ತರಾಖಂಡ: ಜೈಶ್ರೀರಾಂ ಘೋಷಣೆ ಕೂಗುತ್ತಾ ಮಝರ್‌ಗಳ ಧ್ವಂಸ

ಉತ್ತರಾಖಂಡ: ಜೈಶ್ರೀರಾಂ ಘೋಷಣೆ ಕೂಗುತ್ತಾ ಮಝರ್‌ಗಳ ಧ್ವಂಸ

- Advertisement -
- Advertisement -

ಉತ್ತರಾಖಂಡದ ಋಷಿಕೇಶದ ಅಮಿತ ಗ್ರಾಮ ಪ್ರದೇಶದಲ್ಲಿ ಬಲಪಂಥೀಯ ಸಂಘಟನೆಯ ಕಾರ್ಯಕರ್ತರು ಎರಡು ಮಝರ್‌ಗಳನ್ನು ಸುತ್ತಿಗೆಗಳು ಮತ್ತು ಜೆಸಿಬಿಗಳನ್ನು ಬಳಸಿ ಧ್ವಂಸಗೊಳಿಸಿದ್ದು ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜೈಶ್ರೀರಾಂ ಘೋಷಣೆಗಳನ್ನು ಕೂಗುತ್ತಾ ಇಬ್ಬರು ಯುವಕರು ಸುತ್ತಿಗೆಗಳನ್ನು ಬಳಸಿ ಮಝರ್‌ನ್ನು ಧ್ವಂಸ ಮಾಡುವುದು ಒಂದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನೊಂದು ವೈರಲ್ ವಿಡಿಯೋದಲ್ಲಿ ಧ್ವಂಸಮಾಡಿದ ಮಝರ್‌ನ ಅವಶೇಷಗಳನ್ನು ಜೆಸಿಬಿ ಮೂಲಕ ತೆರವುಗೊಳಿಸುತ್ತಿರುವುದು ಕಂಡು ಬಂದಿದೆ. ವ್ಯಕ್ತಿಯೋರ್ವ ಇದೇ ವೇಳೆ ಅಕ್ರಮ ಮಝರ್‌ಗಳು ಎಲ್ಲಿದೆಯೋ ಅಲ್ಲೆಲ್ಲ ಧ್ವಂಸ ಮಾಡುತ್ತೇವೆ, ಇದು ದೇವಭೂಮಿ, ಮಝರ್ ಭೂಮಿ ಅಲ್ಲ ಎಂದು  ವಿಡಿಯೋದಲ್ಲಿ ಹೇಳುವುದು ಸೆರೆಯಾಗಿದೆ.

ಮಝರ್‌ನ್ನು ಧ್ವಂಸಗೊಳಿಸಿದ ದೇವಭೂಮಿ ರಕ್ಷಾ ಅಭಿಯಾನದ ಅಧ್ಯಕ್ಷ ನಮಗೆ ಮಝರ್‌ಗಳನ್ನು ಧ್ವಂಸ ಮಾಡಲು ಆ ಭೂಮಿಯ ಮಾಲಕ ಅನುಮತಿ ನೀಡಿದ್ದ ಎಂದು ಹೇಳಿದ್ದಾರೆ. ಮಜರ್‌ಗಳನ್ನು ನಿರ್ಮಿಸಿದ್ದ ಭೂಮಿ ಇಬ್ಬರು ಹಿಂದೂಗಳಿಗೆ ಸೇರಿದೆ. ಅವುಗಳನ್ನು ಕೆಡವಲು ಅವರು ನಮಗೆ ಅನುಮತಿ ನೀಡಿದರು. ಪೊಲೀಸ್ ಸಿಬ್ಬಂದಿ ಸಮ್ಮುಖದಲ್ಲಿಯೇ ಕಡೆವಿದ್ದೇವೆ ಎಂದು ಹೇಳಿದ್ದಾರೆ.

ಋಷಿಕೇಶದ ಗುಮಾನಿವಾಲಾ ಮತ್ತು ಶ್ಯಾಮ್‌ಪುರ ಪ್ರದೇಶಗಳಲ್ಲಿ ಇಂತಹ 25-30 ಮಜರ್‌ಗಳಿವೆ. ಅವನ್ನೂ ಕೆಡವುತ್ತೇವೆ, ದೇವಭೂಮಿಯಲ್ಲಿ ಮಜಾರ್‌ಗಳನ್ನು ನಿರ್ಮಿಸುವುದು ನಮ್ಮ ಧರ್ಮದ ಮೇಲಿನ ದಾಳಿಯಾಗಿದೆ ಎಂದು  ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ರಿಷಿಕೇಶ್ ಕೊತ್ವಾಲಿ ಎಸ್‌ಎಚ್‌ಒ ಖುಷಿ ರಾಮ್ ಪಾಂಡೆ ತಿಳಿಸಿದ್ದಾರೆ.

ಮಝರ್‌ಗಳನ್ನು ಧ್ವಂಸಗೊಳಿಸಿರುವುದು ನಾವೇ ಎಂದು ದೇವಭೂಮಿ ರಕ್ಷಾ ಅಭಿಯಾನದ ಅಧ್ಯಕ್ಷ ಹೇಳಿದ್ದು, ಈ ವೇಳೆ ಪೊಲೀಸರು ಕೂಡ ಉಪಸ್ಥಿತರಿದ್ದರು ಎಂದು ಹೇಳಿದ್ದಾರೆ. ಆದರೆ ಪೊಲೀಸರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಇದನ್ನು ಓದಿ: ‘ಒಂದು ದೇಶ, ಒಂದು ಚುನಾವಣೆ’ ಸಮಿತಿಯ ಭಾಗವಾಗಲು ನಿರಾಕರಿಸಿದ ಅಧೀರ್ ರಂಜನ್ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...