Homeಮುಖಪುಟ'ಒಂದು ರಾಷ್ಟ್ರ, ಒಂದು ಚುನಾವಣೆ’: ಸಮಿತಿ ರಚನೆ ಕಣ್ಣೊರೆಸುವ ತಂತ್ರ; ಅಧೀರ್ ರಂಜನ್ ಚೌಧರಿ

‘ಒಂದು ರಾಷ್ಟ್ರ, ಒಂದು ಚುನಾವಣೆ’: ಸಮಿತಿ ರಚನೆ ಕಣ್ಣೊರೆಸುವ ತಂತ್ರ; ಅಧೀರ್ ರಂಜನ್ ಚೌಧರಿ

- Advertisement -
- Advertisement -

‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆ ಕುರಿತ ಅಧ್ಯಯನಕ್ಕೆ ರಚಿಸಿದ ಸಮಿತಿ ಬಗ್ಗೆ ಕಣ್ಣೊರೆಸುವ ತಂತ್ರ  ಎಂದು ಕರೆದಿರುವ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸಮಿತಿಯು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರ ಒಲವು ಹೊಂದಿರುವವರಿಂದ ತುಂಬಿಕೊಂಡಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ‘ಒಂದು ದೇಶ, ಒಂದು ಚುನಾವಣೆ’ ಕಲ್ಪನೆ ಕುರಿತು ಅಧ್ಯಯನ ನಡೆಸಲು ರಚಿಸಿದ 8 ಸದಸ್ಯರ ಸಮಿತಿಯ ಭಾಗವಾಗಲು ನಿರಾಕರಿಸಿದ್ದಾರೆ.

ಈ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಚೌಧರಿ, ಸಮಿತಿಯಿಂದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೊರಗಿಡಲಾಗಿದೆ. ಬದಲಿಗೆ ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರನ್ನು ಸೇರಿಸಲಾಗಿದೆ. ಇದರಿಂದ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಎಂಟು ಸದಸ್ಯರ ಸಮಿತಿಯಲ್ಲಿ 7 ಮಂದಿ ಸದಸ್ಯರ ಜೊತೆ ಮೊದಲು ಸಮಾಲೋಚಿಸಿರಬಹುದು ಅಥವಾ ಇಲ್ಲದಿರಬಹುದು. ಆದರೆ ಅವರಲ್ಲಿ ಹೆಚ್ಚಿನವರು ಈ ಹಿಂದೆ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರವಾಗಿ ಮಾತನಾಡಿದ್ದಾರೆ. ಕೆಲವರು ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸದಸ್ಯರಾಗಿದ್ದಾರೆ ಮತ್ತು ಕೆಲವರು ಪಕ್ಷದ ನಿರ್ದೇಶನವನ್ನು ಅನುಸರಿಸುವವರಾಗಿದ್ದಾರೆ. ಆದ್ದರಿಂದ ಅವರ ಅಭಿಪ್ರಾಯ ಯೋಜಿತವಾಗಿದೆ ಎಂದು ಚೌದರಿ ಹೇಳಿದ್ದಾರೆ.

ಸಮಿತಿಯ ಹಿರಿಯ ಸದಸ್ಯ ಸುಭಾಷ್ ಸಿ ಕಶ್ಯಪ್ ಅವರಿಗೆ 94 ವರ್ಷ, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಸುಭಾಷ್ ಸಿ.ಕಶ್ಯಪ್ ಅವರು ಈ ಹಿಂದೆ ಒಂದು ದೇಶ-ಒಂದು ಚುನಾವಣೆಯ ಪರವಾಗಿ ಮಾತನಾಡಿರುವ ದಾಖಲೆ ಇದೆ.

ರಾಮ್ ನಾಥ್ ಕೋವಿಂದ್ ಅವರು ಭಾರತದ ರಾಷ್ಟ್ರಪತಿಯಾಗಿದ್ದಾಗ ಅವರ ಕಾರ್ಯದರ್ಶಿಯಾಗಿ ಸಂಜಯ್ ಕೊಠಾರಿ ಕೆಲಸ ಮಾಡಿದ್ದರು. ಈಗ ಅವರು ಸಮಿತಿಯಲ್ಲಿದ್ದಾರೆ. ಇನ್ನೋರ್ವ ಸದಸ್ಯ ಲಂಡನ್ ಮೂಲದ ಎನ್‌ಆರ್‌ಐ ವಕೀಲ ಹರೀಶ್ ಸಾಳ್ವೆ ಬಿಜೆಪಿಗೆ ಆಪ್ತರು. ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್‌ಕೆ ಸಿಂಗ್ 2014 ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಕಳೆದ ವರ್ಷ ಕಾಂಗ್ರೆಸ್ ತೊರೆದು ಸ್ವಂತ ಪಕ್ಷ ಸ್ಥಾಪಿಸಿದ್ದ ಮಾಜಿ ಸಂಸದ ಗುಲಾಂ ನಬಿ ಆಜಾದ್ ಕೂಡ ಬಿಜೆಪಿಯ ಜೊತೆ ನಿಕಟ ಬಾಂದವ್ಯ ಹೊಂದಿದ್ದಾರೆ ಎಂದು ಚೌದರಿ ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಕೂಡ ಸಮಿತಿಯ ಸದಸ್ಯರಾಗಿದ್ದಾರೆ. ಎಂಟು ಸದಸ್ಯರಲ್ಲಿ ಸಮಿತಿಯ ಅಧ್ಯಕ್ಷರಾದ ಮಾಜಿ ರಾಷ್ಟ್ರಪತಿ ಕೋವಿಂದ್ ಸೇರಿ 7 ಮಂದಿ ಬಿಜೆಪಿಗೆ ಆಪ್ತರಾಗಿದ್ದಾರೆ. ಎಂಟನೇ ಸದಸ್ಯ ಚೌಧರಿ ಸಮಿತಿಯ ಭಾಗವಾಗಲು  ನಿರಾಕರಿಸಿದ್ದು, ಅವರ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ಸಮಿತಿಯಲ್ಲಿ ಮುಖ್ಯಮಂತ್ರಿಗಳಾಗಲಿ, ವಿಶೇಷವಾಗಿ ಪ್ರತಿಪಕ್ಷಗಳ ನಾಯಕರಾಗಲಿ ಮಾಜಿ ಕಾನೂನು ಮಂತ್ರಿಗಳಾಗಲಿ ಯಾರೂ ಇಲ್ಲ ಎಂಬುದು ಗಮನಾರ್ಹವಾಗಿದೆ.

ಇದನ್ನು ಓದಿ: ಮರಾಠ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಬದ್ಧವಾಗಿದೆ: ಸಿಎಂ ಏಕನಾಥ್ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...