Homeಮುಖಪುಟಭಿಲ್ವಾರಾ ಸಾಮೂಹಿಕ ಅತ್ಯಾಚಾರ: ಬಾಲಕಿಯ ಸಜೀವ ದಹನ; ಚಾರ್ಜ್‌ಶೀಟ್ ಸಲ್ಲಿಕೆ

ಭಿಲ್ವಾರಾ ಸಾಮೂಹಿಕ ಅತ್ಯಾಚಾರ: ಬಾಲಕಿಯ ಸಜೀವ ದಹನ; ಚಾರ್ಜ್‌ಶೀಟ್ ಸಲ್ಲಿಕೆ

- Advertisement -
- Advertisement -

ಕಳೆದ ತಿಂಗಳು ಭಿಲ್ವಾರಾ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಬಾಲಕಿಯ ಮೇಲೆ ಗುಂಪೊಂದು ಸಾಮೂಹಿಕವಾಗಿ ಅತ್ಯಾಚಾರ ಮಾಡಿದ ನಂತರ ಆಕೆಗೆ ಬೆಂಕಿ ಹಚ್ಚಿದ್ದಾರೆ. ಶವ ಆಗಸ್ಟ್ 2 ರಂದು ಕುಲುಮೆಯ ಬಳಿ ಪತ್ತೆಯಾಗಿತ್ತು.

ಕೊಟಾರಿ ಉಪ ಪೊಲೀಸ್ ವರಿಷ್ಠಾಧಿಕಾರಿ ಶ್ಯಾಮ್ ಸುಂದರ್ ಬಿಷ್ಣೋಯ್ ಅವರು ಶಹಪುರ ಜಿಲ್ಲೆಯ ವಿಶೇಷ ನ್ಯಾಯಾಲಯದ ಮುಂದೆ 400 ಪುಟಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಿದ್ದಾರೆ. ಆರೋಪಪಟ್ಟಿಯಲ್ಲಿ ಒಂಬತ್ತು ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಇಬ್ಬರು ಅಪ್ರಾಪ್ತ ಆರೋಪಿಗಳ ವಿರುದ್ಧ ಪ್ರತ್ಯೇಕ ಆರೋಪಪಟ್ಟಿ ಸಲ್ಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

”ಆರೋಪಿಗಳು ಕುಲುಮೆಗೆ ಹಾಕಿದಾಗ ಬಾಲಕಿ ಇನ್ನೂ ಜೀವಂತವಾಗಿದ್ದಳು ಎಂದು ಫೋರೆನ್ಸಿಕ್ ಪರೀಕ್ಷೆಯು ಸೂಚಿಸಿದೆ. ಅವಳು ಪ್ರಜ್ಞಾಹೀನಳಾಗಿರಬಹುದು ಆದರೆ ಅವಳು ಜೀವಂತವಾಗಿದ್ದಳು. ಆದ್ದರಿಂದ, ಐಪಿಸಿ ಸೆಕ್ಷನ್ 326 [ಸ್ವಯಂಪ್ರೇರಿತವಾಗಿ ಘೋರವಾದ ಗಾಯವನ್ನು ಉಂಟುಮಾಡುತ್ತದೆ] ಅಡಿಯಲ್ಲಿ ಈ ಪ್ರಕರಣವನ್ನು ಸೇರಿಸಲಾಗಿದೆ” ಎಂದು ಬಿಷ್ಣೋಯ್ ಹೇಳಿದ್ದಾರೆ.

”ಆಕೆಯ ದೇಹವನ್ನು ಸುಟ್ಟು ಹಾಕುವ ಮುನ್ನ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ. ಬೆಂಕಿ ಹಚ್ಚುವ ಮೊದಲು ಆಕೆಯ ದೇಹದ ಮೇಲೆ ಪೆಟ್ರೋಲಿಯಂ ಆಧಾರಿತ ರಾಸಾಯನಿಕವನ್ನು ಸುರಿಯಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಲಯದ ಮುಂದೆ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 8 ರಂದು ನಿಗದಿಪಡಿಸಲಾಗಿದೆ.

ಪೊಲೀಸರ ಕರ್ತವ್ಯಲೋಪ: ಕುಟುಂಬಸ್ಥರ ಆರೋಪ

ಕಳೆದ ತಿಂಗಳು ಬಾಲಕಿಯು ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿದ ನಂತರವೂ ಪೊಲೀಸರು ಸಕಾಲಿಕ ಕ್ರಮ ಕೈಗೊಂಡಿಲ್ಲ ಎಂದು ಆಕೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿದ್ದರೆ, ಬಾಲಕಿ ಈಗ ಬದುಕಿದ್ದಿರಬಹುದು, ಇಲ್ಲವೇ ಅಂತಿಮ ಸಂಸ್ಕಾರಕ್ಕಾಗಿ ಆಕೆಯ ದೇಹವನ್ನು ಪಡೆಯುತ್ತಿದ್ದೆವು ಎಂದು ಆಕೆಯ ಚಿಕ್ಕಪ್ಪ ಹೇಳಿಕೊಂಡಿದ್ದಾರೆ.

”ಪೊಲೀಸರಿಗೆ ದೂರು ನೀಡಲು ಹೋದಾಗ, ಅಧಿಕಾರಿಗಳು ಆರಂಭದಲ್ಲಿ ದೂರನ್ನು ದಾಖಲಿಸಲಿಲ್ಲ, ಆದರೆ ಹುಡುಗಿಯ ವಯಸ್ಸಿನ ಪುರಾವೆಗಳು, ಅಂಕಪಟ್ಟಿ ಮತ್ತು ಇತರ ದಾಖಲೆಗಳನ್ನು ತೆಗೆದುಕೊಂಡುಬರುವಂತೆ ನಮ್ಮನ್ನು ಕಳುಹಿಸಿದರು” ಎಂದು ಬಾಲಕಿಯ ಕುಟುಂಬದವರು ಹೇಳಿದ್ದಾರೆ.

ಆನಂತರ ಮನೆಯವರೇ ಬಾಲಕಿಗಾಗಿ ಹುಡುಕಾಟ ನಡೆಸಿದ್ದಾರೆ. ಆಗ ಕೊಟಾರಿ ಪ್ರದೇಶದಲ್ಲಿ ಕಲ್ಲಿದ್ದಲು ಕುಲುಮೆಯಲ್ಲಿ ಕೆಲವು ಮೂಳೆಗಳು ಮತ್ತು ಆಭರಣಗಳು ಪತ್ತೆಯಾಗಿವೆ.

ಈ ಘಟನೆಯು ರಾಜಕೀಯ ಆಕ್ರೋಶಕ್ಕೆ ಕಾರಣವಾಗಿತ್ತು, ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳಾ ಭದ್ರತೆಯ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು.

ಇದನ್ನೂ ಓದಿ: ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸರ ಕರ್ತವ್ಯಲೋಪವೆಂದು ಕುಟುಂಬಸ್ಥರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...