Homeಮುಖಪುಟಇಸ್ಲಾಮಿಕ್ ಆಕ್ರಮಣಗಳಿಂದಾಗಿ ಮಹಿಳೆಯರಿಗೆ ನಿರ್ಬಂಧ ಹೇರಲಾಗಿದೆ: ಆರ್‌ಎಸ್‌ಎಸ್ ನಾಯಕ ಕೃಷ್ಣ ಗೋಪಾಲ್

ಇಸ್ಲಾಮಿಕ್ ಆಕ್ರಮಣಗಳಿಂದಾಗಿ ಮಹಿಳೆಯರಿಗೆ ನಿರ್ಬಂಧ ಹೇರಲಾಗಿದೆ: ಆರ್‌ಎಸ್‌ಎಸ್ ನಾಯಕ ಕೃಷ್ಣ ಗೋಪಾಲ್

- Advertisement -
- Advertisement -

”ಇಸ್ಲಾಮಿಕ್ ಆಕ್ರಮಣಗಳಿಂದಾಗಿ ಭಾರತದಲ್ಲಿ ಮಹಿಳೆಯರಿಗೆ ಹಲವಾರು ನಿರ್ಬಂಧಗಳನ್ನು ವಿಧಿಸಲಾಗಿದೆ” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಂಟಿ ಕಾರ್ಯದರ್ಶಿ ಕೃಷ್ಣ ಗೋಪಾಲ್ ಭಾನುವಾರ ಹೇಳಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯದಲ್ಲಿ ಮಹಿಳಾ ಸಬಲೀಕರಣ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೃಷ್ಣ ಗೋಪಾಲ್, ”ಇಸ್ಲಾಮಿಕ್ ರಾಜರುಗಳ ಆಕ್ರಮಣಕ್ಕಿಂತ ಮೊದಲು, ‘ಸತಿ’ ಪದ್ಧತಿಯು ಅಸ್ತಿತ್ವದಲ್ಲಿರಲಿಲ್ಲ ಮತ್ತು ವಿಧವೆ ಪುನರ್ವಿವಾಹಗಳ ಮೇಲೆ ಯಾವುದೇ ನಿರ್ಬಂಧಗಳಿರಲಿಲ್ಲ” ಎಂದು ಅವರು ಪ್ರತಿಪಾದಿಸಿದರು.

”1829ರಲ್ಲಿ ಮಹಿಳೆಯರನ್ನು ತಮ್ಮ ಗಂಡನ ಅಂತ್ಯಕ್ರಿಯೆಯ ಚಿತಾಗಾರದಲ್ಲಿ ಜೀವಂತವಾಗಿ ಸುಡುವಂತಹ ಪದ್ದತಿ ಜಾರಿ ಬಂದಿದೆ. ನಾವು ಮಧ್ಯಯುಗಕ್ಕೆ ಬರೋಣ, ಇಡೀ ದೇಶವು ಅಧೀನತೆಯೊಂದಿಗೆ ಹೋರಾಡುತ್ತಿರುವ ಅತ್ಯಂತ ಕಷ್ಟಕರ ಸಮಯವಾಗಿತ್ತು. ದೇವಾಲಯಗಳನ್ನು ಒಡೆಯಲಾಯಿತು, ವಿಶ್ವವಿದ್ಯಾನಿಲಯಗಳನ್ನು ನಾಶಪಡಿಸಲಾಯಿತು ಮತ್ತು ಮಹಿಳೆಯರು ಅಪಾಯದಲ್ಲಿದ್ದರು. ಲಕ್ಷಗಟ್ಟಲೆ ಮಹಿಳೆಯರನ್ನು ಅಪಹರಿಸಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗಿದೆ” ಎಂದೂ ಹೇಳಿದರು.

”ಅಹ್ಮದ್ ಷಾ, ಮೊಹಮ್ಮದ್ ಘೌರಿ ಮತ್ತು ಮಹಮೂದ್ ಗಜ್ನಿ ಎಲ್ಲರೂ ಇಲ್ಲಿಂದ ಮಹಿಳೆಯರನ್ನು ಕರೆದೊಯ್ದು ಮಾರಾಟ ಮಾಡಿದ್ದಾರೆ. ಅದೊಂದು ಮಹಾ ಅವಮಾನದ ಯುಗ. ಆದ್ದರಿಂದ, ನಮ್ಮ ಮಹಿಳೆಯರನ್ನು ರಕ್ಷಿಸಲು, ನಮ್ಮದೇ ಸಮಾಜವು ಅವರ ಮೇಲೆ ಅನೇಕ ನಿರ್ಬಂಧಗಳನ್ನು ಹಾಕಿದೆ” ಎಂದು ಸಮರ್ಥನೆ ಮಾಡಿಕೊಂಡರು.

”ತುರ್ತು ಪರಿಸ್ಥಿತಿ”ಯನ್ನು ಎದುರಿಸಲು ಈ ನಿರ್ಬಂಧಗಳು ಕ್ರಮಗಳಾಗಿವೆ ಎಂದು ಗೋಪಾಲ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದ ವಿರುದ್ಧ ಮಹಿಳೆಯರಿಗೆ ಎಚ್ಚರಿಕೆ ನೀಡಿದ ಗೋಪಾಲ್ ಅವರು, ”ತಮ್ಮ ಆಯ್ಕೆಯ ವೃತ್ತಿಯನ್ನು ಅನುಸರಿಸಬೇಕು, ಆದರೆ ಮಹಿಳೆಯಾಗಿ ತಮ್ಮ ಗುರುತನ್ನು ಕಳೆದುಕೊಳ್ಳಬಾರದು” ಎಂದು ಹೇಳಿದರು.

”ನೀವು ತಂತ್ರಜ್ಞಾನವನ್ನು ಬಳಸುತ್ತೀರಿ, ವಿಮಾನಗಳನ್ನು ಹಾರಿಸುತ್ತೀರಿ, ಹಡಗುಗಳನ್ನು ನಡೆಸುತ್ತೀರಿ, ಇಸ್ರೋಗೆ [ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ] ಹೋಗಿ, ವಿಜ್ಞಾನಿ, ವೈದ್ಯ ಅಥವಾ ಇಂಜಿನಿಯರ್ ಆಗಿ ನೀವು ಇಷ್ಟಪಡುವದನ್ನು ಮಾಡಿ ಆದರೆ ಮಹಿಳೆಯಾಗಿ ಉಳಿಯಿರಿ. ಹೆಣ್ಣು ಮನೆಯ ಮುಖ್ಯ ಕೇಂದ್ರ, ಅದನ್ನು ನೆನಪಿಡಿ. ಮಕ್ಕಳಿಗೆ ಮತ್ತು ಕುಟುಂಬಕ್ಕೆ ಮೌಲ್ಯಗಳನ್ನು ನೀಡುವವಳು ಮಹಿಳೆ” ಎಂದು ಗೋಪಾಲ್ ಹೇಳಿದರು.

”ಇಂದು ಮಹಿಳೆಯರು, ‘ಅಡುಗೆ ಮಾಡುವುದು ನಮ್ಮ ಕೆಲಸವೇ?’ ಎಂದು ಕೇಳುತ್ತಾರೆ. ಆದರೆ ಮಹಿಳೆಯರು ಅಡುಗೆ ಮಾಡುವುದರಿಂದ ಮಕ್ಕಳು ನಿಮ್ಮೊಂದಿಗೆ ಇರುತ್ತಾರೆ, ಅವರು ತಾಯಿಯ ಪ್ರೀತಿಯನ್ನು ಅನುಭವಿಸುತ್ತಾರೆ. ಇಂದಿರಾಜಿ [ಮಾಜಿ ಪ್ರಧಾನಿ ಇಂದಿರಾಗಾಂಧಿ] ತಮ್ಮ ಅಡುಗೆ ಮನೆಯನ್ನು ತಾವೇ ನಿರ್ವಹಿಸುತ್ತಿದ್ದರು ಎಂದು ನಿಮಗೆ ತಿಳಿದಿದೆಯೇ? [ಜವಾಹರಲಾಲ್] ನೆಹರೂಜಿ ಪ್ರಧಾನಿಯಾಗಿದ್ದಾಗ, ಇಂದಿರಾಜಿ ಅಡುಗೆಮನೆಯನ್ನು ನಿಯಂತ್ರಿಸುತ್ತಿದ್ದರು” ಎಂದು ಮಹಿಳೆಯರನ್ನು ಅಡುಗೆ ಮನೆಗೆ ಸೀಮಿತಗೊಳಿಸುವ ಮಾತುಗಳನ್ನು ಕೃಷ್ಣ ಗೋಪಾಲ್ ಆಡಿದ್ದಾರೆ.

ಇದನ್ನೂ ಓದಿ: ಆರ್‌ಎಸ್ಎಸ್ ಆಳ ಮತ್ತು ಅಗಲ: ಭಾರತೀಯ ಜಾತ್ಯತೀತ ಹೋರಾಟಕ್ಕೆ ಹೊಸ ದೇವನೂರ ಭಾಷೆ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...