Homeಕರ್ನಾಟಕಸಂಸದ ಸ್ಥಾನದಿಂದ ಪ್ರಜ್ವಲ್ ಅನರ್ಹ ಬೆನ್ನಲ್ಲೇ ರೇವಣ್ಣನ ಶಾಸಕ ಸ್ಥಾನಕ್ಕೂ ಕುತ್ತು!

ಸಂಸದ ಸ್ಥಾನದಿಂದ ಪ್ರಜ್ವಲ್ ಅನರ್ಹ ಬೆನ್ನಲ್ಲೇ ರೇವಣ್ಣನ ಶಾಸಕ ಸ್ಥಾನಕ್ಕೂ ಕುತ್ತು!

- Advertisement -
- Advertisement -

ಹಾಸನ ಲೋಕಸಭಾ ಕ್ಷೇತ್ರ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಘೋಷಿಸಿತ್ತು. ಇದೀಗ ಶಾಸಕರಾಗಿ ಹೆಚ್​.ಡಿ.ರೇವಣ್ಣ  ಆಯ್ಕೆ ಅಸಿಂಧು ಕೋರಿ ಅರ್ಜಿ ವಿಚಾರಣೆಗೆ ಬಂದಿದ್ದು, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಹೊಳೆನರಸೀಪುರದಿಂದ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೂ ಕರ್ನಾಟಕ ಹೈಕೋರ್ಟ್ ಸಮನ್ಸ್ ಜಾರಿಗೆ ಆದೇಶಿಸಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತಗೊಂಡಿರುವ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು(ಸೆಪ್ಟೆಂಬರ್ 04) ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠವು, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಅವರ ವಿರುದ್ಧ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಸಮನ್ಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ. ವಿಧಾನಸಭೆ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ಮಾಡಿದೆ.

ಈ ಹಿಂದೆ ಇದೇ ಚುನಾವಣಾ ತಕರಾರು ಅರ್ಜಿ ಸಂಬಂಧ ಶಾಸಕ ಹೆಚ್. ಡಿ.ರೇವಣ್ಣ ವಿರುದ್ಧ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್​ ಜಾರಿ ಮಾಡಿತ್ತು. ಇದೀಗ ಸಮನ್ಸ್​ ಜಾರಿಗೆ ಆದೇಶಿಸಿದೆ.

”ಹೆಚ್.ಡಿ. ರೇವಣ್ಣ ಅವರು ಚುನಾವಣಾ ಅಕ್ರಮಗಳಿಂದ ಜಯಗಳಿಸಿದ್ದಾರೆ. 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹೀಗಾಗಿ ಇವರಿಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸಬೇಕು” ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಅವರು ಕೋರ್ಟ್​ಗೆ ಮನವಿ ಮಾಡಿದ್ದರು.

ಇದನ್ನೂ ಓದಿ: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶ

ಸಂಸದ ಸ್ಥಾನದಿಂದ ಪ್ರಜ್ವಲ್ ಅನರ್ಹ

ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು (ಸೆಪ್ಟೆಂಬರ್ 01) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್​ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ.

ಜೆಡಿಎಸ್‌ನ ಏಕೈಕ ಸಂಸದ, ಹಾಸನ ಲೋಕಸಭಾ ಕ್ಷೇತ್ರದ ಎಂಪಿ ಪ್ರಜ್ವಲ್ ರೇವಣ್ಣ ಅವರು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಆಸ್ತಿ ಘೋಷಣೆ ವಿವರ, ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು 2019ರಲ್ಲಿ ಹೈಕೋರ್ಟ್ ನಲ್ಲಿ ಅವರ ವಿರುದ್ಧ ಅರ್ಜಿ ಸಲ್ಲಿಕೆಯಾಗಿತ್ತು.

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಭೇರಿ ಬಾರಿಸಿದ ಪ್ರಜ್ವಲ್ ರೇವಣ್ಣ ಅವರು ಚೊಚ್ಚಲ ಪ್ರಯತ್ನದಲ್ಲೇ ಜಯ ಗಳಿಸಿದ್ದರು. ಆದರೆ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಹಾಸನದಲ್ಲಿ ಸೋಲು ಕಂಡ ಪರಾಜಿತ ಬಿಜೆಪಿ ಅಭ್ಯರ್ಥಿ ಅರಕಲಗೂಡು ಮಂಜು ಅವರು 2019ರ ಜೂನ್ 26ರಂದು ಹೈಕೋರ್ಟಿನಲ್ಲಿ ಅರ್ಜಿ ಹಾಕಿದ್ದರು.

ಆದರೆ ಅವರ ಅರ್ಜಿ ಹೈಕೋರ್ಟಿನಲ್ಲಿ ತಿರಸ್ಕಾರಗೊಂಡಿತ್ತು. ಇದೀಗ ವಕೀಲ ದೇವರಾಜೇಗೌಡ ಅಲ್ಲಿಸಿದ್ದ ಅರ್ಜಿ ಆಧಾರದ ಮೇಲೆ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...