Homeಕರ್ನಾಟಕಸಂಸದ ಸ್ಥಾನದಿಂದ ಪ್ರಜ್ವಲ್ ಅನರ್ಹ ಬೆನ್ನಲ್ಲೇ ರೇವಣ್ಣನ ಶಾಸಕ ಸ್ಥಾನಕ್ಕೂ ಕುತ್ತು!

ಸಂಸದ ಸ್ಥಾನದಿಂದ ಪ್ರಜ್ವಲ್ ಅನರ್ಹ ಬೆನ್ನಲ್ಲೇ ರೇವಣ್ಣನ ಶಾಸಕ ಸ್ಥಾನಕ್ಕೂ ಕುತ್ತು!

- Advertisement -
- Advertisement -

ಹಾಸನ ಲೋಕಸಭಾ ಕ್ಷೇತ್ರ ಸಂಸದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ಘೋಷಿಸಿತ್ತು. ಇದೀಗ ಶಾಸಕರಾಗಿ ಹೆಚ್​.ಡಿ.ರೇವಣ್ಣ  ಆಯ್ಕೆ ಅಸಿಂಧು ಕೋರಿ ಅರ್ಜಿ ವಿಚಾರಣೆಗೆ ಬಂದಿದ್ದು, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಹೊಳೆನರಸೀಪುರದಿಂದ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೂ ಕರ್ನಾಟಕ ಹೈಕೋರ್ಟ್ ಸಮನ್ಸ್ ಜಾರಿಗೆ ಆದೇಶಿಸಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಪರಾಜಿತಗೊಂಡಿರುವ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು(ಸೆಪ್ಟೆಂಬರ್ 04) ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠವು, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಅವರ ವಿರುದ್ಧ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಸಮನ್ಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ. ವಿಧಾನಸಭೆ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ಮಾಡಿದೆ.

ಈ ಹಿಂದೆ ಇದೇ ಚುನಾವಣಾ ತಕರಾರು ಅರ್ಜಿ ಸಂಬಂಧ ಶಾಸಕ ಹೆಚ್. ಡಿ.ರೇವಣ್ಣ ವಿರುದ್ಧ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್​ ಜಾರಿ ಮಾಡಿತ್ತು. ಇದೀಗ ಸಮನ್ಸ್​ ಜಾರಿಗೆ ಆದೇಶಿಸಿದೆ.

”ಹೆಚ್.ಡಿ. ರೇವಣ್ಣ ಅವರು ಚುನಾವಣಾ ಅಕ್ರಮಗಳಿಂದ ಜಯಗಳಿಸಿದ್ದಾರೆ. 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹೀಗಾಗಿ ಇವರಿಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸಬೇಕು” ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಅವರು ಕೋರ್ಟ್​ಗೆ ಮನವಿ ಮಾಡಿದ್ದರು.

ಇದನ್ನೂ ಓದಿ: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ: ಹೈಕೋರ್ಟ್ ಆದೇಶ

ಸಂಸದ ಸ್ಥಾನದಿಂದ ಪ್ರಜ್ವಲ್ ಅನರ್ಹ

ಎ ಮಂಜು, ದೇವರಾಜೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ. ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಅಫಿಡವಿಟ್ ನಲ್ಲಿ ಘೋಷಿಸಿದ ಆಸ್ತಿ ವಿವರಗಳ ಕುರಿತು ಅಕ್ಷೇಪ ವ್ಯಕ್ತಪಡಿಸಿ ವಕೀಲ ದೇವರಾಜೇಗೌಡ, ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇಂದು (ಸೆಪ್ಟೆಂಬರ್ 01) ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್​ ರೇವಣ್ಣ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಆದೇಶಿಸಿದೆ.

ಜೆಡಿಎಸ್‌ನ ಏಕೈಕ ಸಂಸದ, ಹಾಸನ ಲೋಕಸಭಾ ಕ್ಷೇತ್ರದ ಎಂಪಿ ಪ್ರಜ್ವಲ್ ರೇವಣ್ಣ ಅವರು ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಆಸ್ತಿ ಘೋಷಣೆ ವಿವರ, ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು 2019ರಲ್ಲಿ ಹೈಕೋರ್ಟ್ ನಲ್ಲಿ ಅವರ ವಿರುದ್ಧ ಅರ್ಜಿ ಸಲ್ಲಿಕೆಯಾಗಿತ್ತು.

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಜಯಭೇರಿ ಬಾರಿಸಿದ ಪ್ರಜ್ವಲ್ ರೇವಣ್ಣ ಅವರು ಚೊಚ್ಚಲ ಪ್ರಯತ್ನದಲ್ಲೇ ಜಯ ಗಳಿಸಿದ್ದರು. ಆದರೆ ಅಫಿಡವಿಟ್​ನಲ್ಲಿ ಸುಳ್ಳು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಪ್ರಜ್ವಲ್ ಅವರ ಸಂಸದ ಸ್ಥಾನವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಹಾಸನದಲ್ಲಿ ಸೋಲು ಕಂಡ ಪರಾಜಿತ ಬಿಜೆಪಿ ಅಭ್ಯರ್ಥಿ ಅರಕಲಗೂಡು ಮಂಜು ಅವರು 2019ರ ಜೂನ್ 26ರಂದು ಹೈಕೋರ್ಟಿನಲ್ಲಿ ಅರ್ಜಿ ಹಾಕಿದ್ದರು.

ಆದರೆ ಅವರ ಅರ್ಜಿ ಹೈಕೋರ್ಟಿನಲ್ಲಿ ತಿರಸ್ಕಾರಗೊಂಡಿತ್ತು. ಇದೀಗ ವಕೀಲ ದೇವರಾಜೇಗೌಡ ಅಲ್ಲಿಸಿದ್ದ ಅರ್ಜಿ ಆಧಾರದ ಮೇಲೆ ಹೈಕೋರ್ಟ್ ಈ ಮಹತ್ವದ ಆದೇಶ ಹೊರಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...