Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯದ ಬೇಡಿಕೆ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯದ ಬೇಡಿಕೆ

- Advertisement -
- Advertisement -

ಚಿಂತಕಿ, ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿ ಇಂದಿಗೆ 6 ವರ್ಷ ಕಳೆದಿವೆ. ಗೌರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ, 10 ಸಾವಿರ ಪುಟಕ್ಕೂ ಹೆಚ್ಚಿನ ಚಾರ್ಜ್‌ ಶೀಟ್ ಸಲ್ಲಿಸಲಾಗಿದೆ. ಆದರೂ ತಪ್ಪಿತಸ್ಥರಿಗೆ ಇನ್ನೂ ಶಿಕ್ಷೆಯಾಗಿಲ್ಲ, ಇದಕ್ಕೆ ನಿಧಾನಗತಿಯ ವಿಚಾರಣೆಯೇ ಕಾರಣವಾಗಿದೆ. ಹಾಗಾಗಿ ಗೌರಿ ಲಂಕೇಶ್ ಹಾಗೂ ಸಾಹಿತಿ ಎಂಎಂ ಕಲುಬುರ್ಗಿ ಅವರ ಹತ್ಯೆ ಪ್ರಕರಣದ ವಿಚಾರಣೆಯನ್ನು ವಿಶೇಷ ನ್ಯಾಯಾಲಯಕ್ಕೆ ನೀಡಬೇಕು ಎಂದು ಸಾಹಿತಿಗಳು, ಚಿಂತಕರು, ಪತ್ರಕರ್ತ ಹಾಗೂ ಹೋರಾಟಗಾರರು ಒತ್ತಾಯಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಒಟ್ಟು 18 ಆರೋಪಿಗಳ ಪೈಕಿ 17 ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ವಿಕಾಸ್ ಪಾಟೀಲ್ ತಲೆಮರೆಸಿಕೊಂಡಿದ್ದಾನೆ. ಈ ಪ್ರಕರಣದ ಕುರಿತು ತನಿಖೆ ನಡೆಸಿದ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ 1ನೇ ಸೆಷನ್ಸ್ ಕೋರ್ಟ್‌ಗೆ ಒಂದು ವರ್ಷದ ಬಳಿಕ 500ಕ್ಕೂ ಹೆಚ್ಚು ಸಾಕ್ಷಿಗಳು ಹಾಗೂ 1 ಸಾವಿರಕ್ಕೂ ಹೆಚ್ಚು ಪುರಾವೆಗಳನ್ನು ದಾಖಲಿಸಿರುವ ಸುಮಾರು 10 ಸಾವಿರ ಪುಟಕ್ಕೂ ಹೆಚ್ಚಿನ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದಾರೆ.

ಈ ಮಧ್ಯೆ ಪ್ರಗತಿಪರ ಚಿಂತಕರುಗಳು ‘ಗೌರಿ ಪ್ರಕರಣದ ವಿಚಾರಣೆ ಎಲ್ಲಿಗೆ ಬಂತು?’ ಎಂಬ ಪ್ರಶ್ನೆ ಮಾಡಲು ಪ್ರಾರಂಭ ಮಾಡಿದ್ದರಿಂದ ಕೋರ್ಟ್‌ನಲ್ಲಿ ಐದು ವರ್ಷಗಳ ನಂತರದಲ್ಲಿ ಪ್ರಕರಣದ ಕುರಿತು ವಿಚಾರಣೆ ಪ್ರಾರಂಭವಾಗಿದೆ.

ವಿಚಾರಣೆಯು ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸಾಹಿತಿಗಳು, ಚಿಂತಕರು, ಪತ್ರಕರ್ತ ಹಾಗೂ ಹೋರಾಟಗಾರರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಚಿಂತಕ, ವಿಚಾರಾವಾದಿ, ಹಿರಿಯ ಪತ್ರಕರ್ತ ಶಿವಸುಂದರ್ ಅವರು, ”ಸಧ್ಯ ವಿಚಾರಣೆ ನಡೆಯುತ್ತಿರುವ ನ್ಯಾಯಾಲಯದಲ್ಲಿ ನ್ಯಾಯ ಸಿಗುವುದು ತುಂಬಾ ವಿಳಂಬವಾಗುತ್ತದೆ. ಏಕೆಂದರೆ, 2022ರ ಜುಲೈನಲ್ಲಿ ವಿಚಾರಣೆ ಆರಂಭವಾಗಿದ್ದು, 2023ರ ಅಗಷ್ಟ್ ವರೆಗೆ ಅಂದರೆ ಒಂದು ವರ್ಷದ ಅವಧಿಯಲ್ಲಿ ಕೇವಲ 83 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ಆದರೆ, ಚಾರ್ಜ್‌ಶೀಟ್‌ನಲ್ಲಿ 500 ಸಾಕ್ಷಿ ಹಾಗೂ ಪುರಾವೆಗಳಿದ್ದು, ಅವುಗಳಲ್ಲಿ 200 ಸಾಕ್ಷಿಗಳನ್ನು ಕೈಬಿಡಲಾಗಿದೆ. ಉಳಿದ 300 ಸಾಕ್ಷಿ ವಿಚಾರಣೆ ಪೂರ್ಣಗೊಳ್ಳಬೇಕಾದರೆ ಸುಮಾರು 3-4 ವರ್ಷ ಸಮಯ ತಗೆದುಕೊಳ್ಳುತ್ತದೆ. ಈಗಾಗಲೇ 6 ವರ್ಷ ಕಳೆದುಹೋಗಿದೆ” ಎಂದರು.

”ಒಂದು ಪ್ರಕರಣಕ್ಕೆ ನ್ಯಾಯ ಸಿಗಲು 10 ವರ್ಷಗಳು ಬೇಕಾ? ಎನ್ನುವ ಪ್ರಶ್ನೆ ಮೂಡುತ್ತದೆ. ಸಾಕ್ಷಿಗಳ ವಿಚಾರಣೆ ಇಷ್ಟೊಂದು ನಿಧಾನಗತಿಯಲ್ಲಿ ಸಾಗಿದರೆ ಅದರಿಂದ ನ್ಯಾಯಕ್ಕೂ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಆರೋಪಿಗಳಿಗೂ ತೊಂದರೆ ಉಂಟಾಗುತ್ತದೆ. ಮಹಜರು ಮಾಡಿದ ಸಾಕ್ಷ್ಯದ ಗುಣಮಟ್ಟ ಕಳೆದುಹೋಗುತ್ತದೆ. ನ್ಯಾಯಬದ್ಧ ವಿಚಾರಣೆಯೂ ಸಾಧ್ಯವಾಗುವುದಿಲ್ಲ. ವಿಚಾರಣೆಯೇ ನಡೆಯದೆ ಆರೋಪಿಗಳು ಜೈಲಿನಲ್ಲಿ ಇರುವುದು ಸರಿಯಲ್ಲ. ಆರೋಪಿಗಳ ವಿಚಾರಣೆ ಬೇಗ ನಡೆದರೆ ಅಪರಾಧಿಗಳಿಗೆ ಶಿಕ್ಷೆಯಾಗಿ ನಿರಪರಾಧಿಗಳು ಹೊರಬರುತ್ತಾರೆ. ಹಾಗಾಗಿ ಎರಡೂ ದೃಷ್ಟಿಕೋನದಿಂದ ಗೌರಿ ಲಂಕೇಶ್ ಹಾಗೂ ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಲಯದ ಅಗತ್ಯವಿದೆ” ಎಂದು ಶಿವಸುಂದರ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್ ನೆನಪು: ಗೌರವ ನಮನ, ಸಂವಾದ ಕಾರ್ಯಕ್ರಮ – ಸಿಎಂ ಸಿದ್ದರಾಮಯ್ಯ ಭಾಗಿ

ಪ್ರಕರಣದ ವಿಚಾರಣೆ:

ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯು ಪ್ರತೀ ತಿಂಗಳಲ್ಲಿ ಮೊದಲ ಅಥವಾ ಎರಡನೇ ವಾರದ ಐದು ದಿನಗಳಲ್ಲಿ ನಡೆಯುತ್ತದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಬಾಲನ್ ಅವರನ್ನು ಸರಕಾರ ನೇಮಿಸಿದ್ದು, ಅವರೇ 2018ರಿಂದಲೂ ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸುತ್ತಿದ್ದಾರೆ. ಇದರ ಜೊತೆಗೆ ವಿಚಾರಣೆ ಸಾಗುತ್ತಿರುವಾಗಲೇ ಕೋರ್ಟ್‌ನ ನ್ಯಾಯಪೀಠದಿಂದ ನಾಲ್ವರು ನ್ಯಾಯಾಧೀಶರು ಬದಲಾಗಿದ್ದಾರೆ.

ಆರೋಪಿಗಳ ಪರವಾಗಿ ವಾದ ಮಂಡಿಸುತ್ತಿರುವ ಏಳೆಂಟು ಹಿರಿಯ ಮತ್ತು ಕಿರಿಯ ವಕೀಲರುಗಳು ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ ಎಂದು ಪ್ರಾಸಿಕ್ಯೂಷನ್ ಆರೋಪ ಮಾಡಿದೆ. ಈ ಎಲ್ಲ ಕಾರಣಗಳಿಂದಾಗಿ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದೆ ಎನ್ನಲಾಗಿದೆ. ಒಟ್ಟು 18 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302, 120ಬಿ, 114, 118, 109, 201, 203, 204 ಮತ್ತು 35, ಸಶಸ್ತ್ರ ಕಾಯ್ದೆಯ ಸೆಕ್ಷನ್ಗಳಾದ 25(1), 25(1ಃ), 27(1) ಮತ್ತು ಕೋಕಾ ಕಾಯ್ದೆಯ ಸೆಕ್ಷನ್ಗಳಾದ 3(1), 3(2), 3(3), 3(4) ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ, ಪರಶುರಾಮ್ ವಾಗ್ಮೊರೆ, ಗಣೇಶ್ ಮಿಸ್ಕಿನ್, ಅಮಿತ್ ಬಡ್ಡಿ, ಅಮಿತ್ ದೆಗ್ವೇಕರ್, ‘ರತ್ ಕುರ್ಣೇ, ಸುರೇಶ್ ಎಚ್.ಎಲ್., ರಾಜೇಶ್ ಬಂಗೇರ, ಸು‘ನ್ವ ಗೊಂದಲೇಕರ್, ಶರದ್ ಕಾಲಸ್ಕರ್, ಮೋಹನ್ ನಾಯಕ್, ವಾಸುದೇವ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ್ ಎಡವೆ, ಶ್ರೀಕಾಂತ್ ಪಂಗರ್ಕರ್, ಕೆ.ಟಿ.ನವೀನ್ಕುಮಾರ್ ಹಾಗೂ ಹೃಷಿಕೇಶ್ ದೇವಡೇಕರ್ ಈ ಎಲ್ಲ ಆರೋಪಿಗಳೂ ನಾಲ್ಕೆ‘ದು ವರ್ಷಗಳಿಂದ ನ್ಯಾಯಾಂಗ ಬಂ‘ನದಲ್ಲಿದ್ದಾರೆ. ಅಮೋಲ್ ಕಾಳೆಯನ್ನೂ ಒಳಗೊಂಡಂತೆ 7 ಆರೋಪಿಗಳು ಮಹಾರಾಷ್ಟ್ರದವರು, ಉಳಿದವರು ಕರ್ನಾಟಕ ರಾಜ್ಯದವರು ಆಗಿದ್ದಾರೆ.

ಈ ಎಲ್ಲ ಆರೋಪಿಗಳಿಗೂ ಸನಾತನ ಸಂಸ್ಥೆ ಮತ್ತು ‘ಹಿಂದೂ ಜನ ಜಾಗೃತಿ ಸಂಸ್ಥೆ’ಗಳೊಂದಿಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಸಂಬಂ‘ಗಳಿವೆ ಎಂಬುದು ಪ್ರಾಸಿಕ್ಯೂಷನ್ ಪತ್ತೆ ಹಚ್ಚಿರುವ ಸಂಗತಿಯಾಗಿದ್ದು, ಸನಾತನ ಸಂಸ್ಥೆಯ ಸಿದ್ಧಾಂತ ಮತ್ತು ಗುರಿಗಳು ಈ ಆರೋಪಿಗಳನ್ನು ಹತ್ಯೆ ಮಾಡಲು ಪ್ರೇರೇಪಿಸಿದೆ ಎಂದು ಪ್ರಾಸಿಕ್ಯೂಷನ್ ಆರೋಪವಾಗಿದೆ.

ಸನಾತನ ಸಂಸ್ಥೆಯ ಮಾರ್ಗ ದರ್ಶಕ ಗ್ರಂಥವಾಗಿರುವ ‘ಕ್ಷಾತ್ರ ‘ರ್ಮ ಸಾ‘ನ’ದ ಪ್ರಕಾರ ಹಿಂದೂ/ ಸನಾತನ ‘ರ್ಮಕ್ಕೆ ಕಂಟಕಪ್ರಾಯವಾಗಿರುವ ಜನರನ್ನು ಹತ್ಯೆ ಮಾಡುವ ಮೂಲಕ ಸನಾತನಕ್ಕೆ ಇರುವ ಅಡ್ಡಿಯನ್ನು ನಿವಾರಿಸಬೇಕು. ಅದರಲ್ಲೂ ಸ್ವಧರ್ಮೀಯರಲ್ಲೇ ಇರುವ ದ್ರೋಹಿಗಳನ್ನು ಶಿಕ್ಷಿಸಬೇಕು. ಈ ಸಿದ್ಧಾಂತವೇ ಆರೋಪಿಗಳಿಗೆ ಗೌರಿ ಹತ್ಯೆ ಕೊಲೆಗೆ ಪ್ರೇರಣೆ ನೀಡಿತು. ಈ ಅಪರಾ‘ದಲ್ಲಿ ಒಬ್ಬೊಬ್ಬರದ್ದು ಒಂದೊಂದು ನಿರ್ದಿಷ್ಟ ಪಾತ್ರವಿದೆ ಎಂಬುದು ಪ್ರಾಸಿಕ್ಯೂಷನ್ ಆರೋಪವಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ ತಂಡದವರೇ ಮಹಾರಾಷ್ಟ್ರದ ದಾಬೋಲ್ಕರ್, ಪನ್ಸಾರೆ ಹಾಗೂ ಕರ್ನಾಟಕದ ಸಂಶೋ‘ನ ಪ್ರೊ.ಎಂ.ಎಂ.ಕಲಬುರ್ಗಿಯವರ ಹತ್ಯೆಯಲ್ಲೂ ಆರೋಪಿಗಳಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಇವರಲ್ಲಿ ಕೆಲವರು ಮಹಾರಾಷ್ಟ್ರದ ಜೈಲಿನಲ್ಲಿದ್ದಾರೆ. ಉಳಿದವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಆರೋಪಿಗಳನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಾಗುತ್ತಿದೆ.

ಈ ಮಧ್ಯೆ ಕೆಲ ಆರೋಪಿಗಳು ಜಾಮೀನು ಪಡೆಯಲು ಸೆಷನ್ಸ್ ಕೋರ್ಟ್‌ನಿಂದ ಹಿಡಿದು ಹೈಕೋರ್ಟ್, ಸುಪ್ರೀಂ ಕೋರ್ಟ್ ವರೆಗೂ ಪ್ರಯತ್ನಿಸಿದರೂ ಎಲ್ಲ ನ್ಯಾಯಾಲಯಗಳಲ್ಲೂ ಆರೋಪಿಗಳಿಗೆ ಜಾಮೀನು ನಿರಾಕರಣೆಯಾಗಿದೆ ಎಂಬುದು ಪ್ರಕರಣದ ಗಂಭೀರತೆಗೆ ಸಾಕ್ಷಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...