Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯದ ಬೇಡಿಕೆ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯದ ಬೇಡಿಕೆ

- Advertisement -
- Advertisement -

ಚಿಂತಕಿ, ವಿಚಾರವಾದಿ ಹಾಗೂ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯಾಗಿ ಇಂದಿಗೆ 6 ವರ್ಷ ಕಳೆದಿವೆ. ಗೌರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ, 10 ಸಾವಿರ ಪುಟಕ್ಕೂ ಹೆಚ್ಚಿನ ಚಾರ್ಜ್‌ ಶೀಟ್ ಸಲ್ಲಿಸಲಾಗಿದೆ. ಆದರೂ ತಪ್ಪಿತಸ್ಥರಿಗೆ ಇನ್ನೂ ಶಿಕ್ಷೆಯಾಗಿಲ್ಲ, ಇದಕ್ಕೆ ನಿಧಾನಗತಿಯ ವಿಚಾರಣೆಯೇ ಕಾರಣವಾಗಿದೆ. ಹಾಗಾಗಿ ಗೌರಿ ಲಂಕೇಶ್ ಹಾಗೂ ಸಾಹಿತಿ ಎಂಎಂ ಕಲುಬುರ್ಗಿ ಅವರ ಹತ್ಯೆ ಪ್ರಕರಣದ ವಿಚಾರಣೆಯನ್ನು ವಿಶೇಷ ನ್ಯಾಯಾಲಯಕ್ಕೆ ನೀಡಬೇಕು ಎಂದು ಸಾಹಿತಿಗಳು, ಚಿಂತಕರು, ಪತ್ರಕರ್ತ ಹಾಗೂ ಹೋರಾಟಗಾರರು ಒತ್ತಾಯಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಒಟ್ಟು 18 ಆರೋಪಿಗಳ ಪೈಕಿ 17 ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ವಿಕಾಸ್ ಪಾಟೀಲ್ ತಲೆಮರೆಸಿಕೊಂಡಿದ್ದಾನೆ. ಈ ಪ್ರಕರಣದ ಕುರಿತು ತನಿಖೆ ನಡೆಸಿದ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ 1ನೇ ಸೆಷನ್ಸ್ ಕೋರ್ಟ್‌ಗೆ ಒಂದು ವರ್ಷದ ಬಳಿಕ 500ಕ್ಕೂ ಹೆಚ್ಚು ಸಾಕ್ಷಿಗಳು ಹಾಗೂ 1 ಸಾವಿರಕ್ಕೂ ಹೆಚ್ಚು ಪುರಾವೆಗಳನ್ನು ದಾಖಲಿಸಿರುವ ಸುಮಾರು 10 ಸಾವಿರ ಪುಟಕ್ಕೂ ಹೆಚ್ಚಿನ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದಾರೆ.

ಈ ಮಧ್ಯೆ ಪ್ರಗತಿಪರ ಚಿಂತಕರುಗಳು ‘ಗೌರಿ ಪ್ರಕರಣದ ವಿಚಾರಣೆ ಎಲ್ಲಿಗೆ ಬಂತು?’ ಎಂಬ ಪ್ರಶ್ನೆ ಮಾಡಲು ಪ್ರಾರಂಭ ಮಾಡಿದ್ದರಿಂದ ಕೋರ್ಟ್‌ನಲ್ಲಿ ಐದು ವರ್ಷಗಳ ನಂತರದಲ್ಲಿ ಪ್ರಕರಣದ ಕುರಿತು ವಿಚಾರಣೆ ಪ್ರಾರಂಭವಾಗಿದೆ.

ವಿಚಾರಣೆಯು ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸಾಹಿತಿಗಳು, ಚಿಂತಕರು, ಪತ್ರಕರ್ತ ಹಾಗೂ ಹೋರಾಟಗಾರರು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಚಿಂತಕ, ವಿಚಾರಾವಾದಿ, ಹಿರಿಯ ಪತ್ರಕರ್ತ ಶಿವಸುಂದರ್ ಅವರು, ”ಸಧ್ಯ ವಿಚಾರಣೆ ನಡೆಯುತ್ತಿರುವ ನ್ಯಾಯಾಲಯದಲ್ಲಿ ನ್ಯಾಯ ಸಿಗುವುದು ತುಂಬಾ ವಿಳಂಬವಾಗುತ್ತದೆ. ಏಕೆಂದರೆ, 2022ರ ಜುಲೈನಲ್ಲಿ ವಿಚಾರಣೆ ಆರಂಭವಾಗಿದ್ದು, 2023ರ ಅಗಷ್ಟ್ ವರೆಗೆ ಅಂದರೆ ಒಂದು ವರ್ಷದ ಅವಧಿಯಲ್ಲಿ ಕೇವಲ 83 ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ಆದರೆ, ಚಾರ್ಜ್‌ಶೀಟ್‌ನಲ್ಲಿ 500 ಸಾಕ್ಷಿ ಹಾಗೂ ಪುರಾವೆಗಳಿದ್ದು, ಅವುಗಳಲ್ಲಿ 200 ಸಾಕ್ಷಿಗಳನ್ನು ಕೈಬಿಡಲಾಗಿದೆ. ಉಳಿದ 300 ಸಾಕ್ಷಿ ವಿಚಾರಣೆ ಪೂರ್ಣಗೊಳ್ಳಬೇಕಾದರೆ ಸುಮಾರು 3-4 ವರ್ಷ ಸಮಯ ತಗೆದುಕೊಳ್ಳುತ್ತದೆ. ಈಗಾಗಲೇ 6 ವರ್ಷ ಕಳೆದುಹೋಗಿದೆ” ಎಂದರು.

”ಒಂದು ಪ್ರಕರಣಕ್ಕೆ ನ್ಯಾಯ ಸಿಗಲು 10 ವರ್ಷಗಳು ಬೇಕಾ? ಎನ್ನುವ ಪ್ರಶ್ನೆ ಮೂಡುತ್ತದೆ. ಸಾಕ್ಷಿಗಳ ವಿಚಾರಣೆ ಇಷ್ಟೊಂದು ನಿಧಾನಗತಿಯಲ್ಲಿ ಸಾಗಿದರೆ ಅದರಿಂದ ನ್ಯಾಯಕ್ಕೂ ಹಿನ್ನೆಡೆಯಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಆರೋಪಿಗಳಿಗೂ ತೊಂದರೆ ಉಂಟಾಗುತ್ತದೆ. ಮಹಜರು ಮಾಡಿದ ಸಾಕ್ಷ್ಯದ ಗುಣಮಟ್ಟ ಕಳೆದುಹೋಗುತ್ತದೆ. ನ್ಯಾಯಬದ್ಧ ವಿಚಾರಣೆಯೂ ಸಾಧ್ಯವಾಗುವುದಿಲ್ಲ. ವಿಚಾರಣೆಯೇ ನಡೆಯದೆ ಆರೋಪಿಗಳು ಜೈಲಿನಲ್ಲಿ ಇರುವುದು ಸರಿಯಲ್ಲ. ಆರೋಪಿಗಳ ವಿಚಾರಣೆ ಬೇಗ ನಡೆದರೆ ಅಪರಾಧಿಗಳಿಗೆ ಶಿಕ್ಷೆಯಾಗಿ ನಿರಪರಾಧಿಗಳು ಹೊರಬರುತ್ತಾರೆ. ಹಾಗಾಗಿ ಎರಡೂ ದೃಷ್ಟಿಕೋನದಿಂದ ಗೌರಿ ಲಂಕೇಶ್ ಹಾಗೂ ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಲಯದ ಅಗತ್ಯವಿದೆ” ಎಂದು ಶಿವಸುಂದರ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಗೌರಿ ಲಂಕೇಶ್ ನೆನಪು: ಗೌರವ ನಮನ, ಸಂವಾದ ಕಾರ್ಯಕ್ರಮ – ಸಿಎಂ ಸಿದ್ದರಾಮಯ್ಯ ಭಾಗಿ

ಪ್ರಕರಣದ ವಿಚಾರಣೆ:

ಈ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯು ಪ್ರತೀ ತಿಂಗಳಲ್ಲಿ ಮೊದಲ ಅಥವಾ ಎರಡನೇ ವಾರದ ಐದು ದಿನಗಳಲ್ಲಿ ನಡೆಯುತ್ತದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಬಾಲನ್ ಅವರನ್ನು ಸರಕಾರ ನೇಮಿಸಿದ್ದು, ಅವರೇ 2018ರಿಂದಲೂ ಪ್ರಾಸಿಕ್ಯೂಷನ್ ಪರವಾಗಿ ವಾದ ಮಂಡಿಸುತ್ತಿದ್ದಾರೆ. ಇದರ ಜೊತೆಗೆ ವಿಚಾರಣೆ ಸಾಗುತ್ತಿರುವಾಗಲೇ ಕೋರ್ಟ್‌ನ ನ್ಯಾಯಪೀಠದಿಂದ ನಾಲ್ವರು ನ್ಯಾಯಾಧೀಶರು ಬದಲಾಗಿದ್ದಾರೆ.

ಆರೋಪಿಗಳ ಪರವಾಗಿ ವಾದ ಮಂಡಿಸುತ್ತಿರುವ ಏಳೆಂಟು ಹಿರಿಯ ಮತ್ತು ಕಿರಿಯ ವಕೀಲರುಗಳು ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ ಎಂದು ಪ್ರಾಸಿಕ್ಯೂಷನ್ ಆರೋಪ ಮಾಡಿದೆ. ಈ ಎಲ್ಲ ಕಾರಣಗಳಿಂದಾಗಿ ಪ್ರಕರಣದ ವಿಚಾರಣೆ ವಿಳಂಬವಾಗುತ್ತಿದೆ ಎನ್ನಲಾಗಿದೆ. ಒಟ್ಟು 18 ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302, 120ಬಿ, 114, 118, 109, 201, 203, 204 ಮತ್ತು 35, ಸಶಸ್ತ್ರ ಕಾಯ್ದೆಯ ಸೆಕ್ಷನ್ಗಳಾದ 25(1), 25(1ಃ), 27(1) ಮತ್ತು ಕೋಕಾ ಕಾಯ್ದೆಯ ಸೆಕ್ಷನ್ಗಳಾದ 3(1), 3(2), 3(3), 3(4) ಅಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ, ಪರಶುರಾಮ್ ವಾಗ್ಮೊರೆ, ಗಣೇಶ್ ಮಿಸ್ಕಿನ್, ಅಮಿತ್ ಬಡ್ಡಿ, ಅಮಿತ್ ದೆಗ್ವೇಕರ್, ‘ರತ್ ಕುರ್ಣೇ, ಸುರೇಶ್ ಎಚ್.ಎಲ್., ರಾಜೇಶ್ ಬಂಗೇರ, ಸು‘ನ್ವ ಗೊಂದಲೇಕರ್, ಶರದ್ ಕಾಲಸ್ಕರ್, ಮೋಹನ್ ನಾಯಕ್, ವಾಸುದೇವ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ್ ಎಡವೆ, ಶ್ರೀಕಾಂತ್ ಪಂಗರ್ಕರ್, ಕೆ.ಟಿ.ನವೀನ್ಕುಮಾರ್ ಹಾಗೂ ಹೃಷಿಕೇಶ್ ದೇವಡೇಕರ್ ಈ ಎಲ್ಲ ಆರೋಪಿಗಳೂ ನಾಲ್ಕೆ‘ದು ವರ್ಷಗಳಿಂದ ನ್ಯಾಯಾಂಗ ಬಂ‘ನದಲ್ಲಿದ್ದಾರೆ. ಅಮೋಲ್ ಕಾಳೆಯನ್ನೂ ಒಳಗೊಂಡಂತೆ 7 ಆರೋಪಿಗಳು ಮಹಾರಾಷ್ಟ್ರದವರು, ಉಳಿದವರು ಕರ್ನಾಟಕ ರಾಜ್ಯದವರು ಆಗಿದ್ದಾರೆ.

ಈ ಎಲ್ಲ ಆರೋಪಿಗಳಿಗೂ ಸನಾತನ ಸಂಸ್ಥೆ ಮತ್ತು ‘ಹಿಂದೂ ಜನ ಜಾಗೃತಿ ಸಂಸ್ಥೆ’ಗಳೊಂದಿಗೆ ಪ್ರತ್ಯಕ್ಷ ಹಾಗೂ ಪರೋಕ್ಷ ಸಂಬಂ‘ಗಳಿವೆ ಎಂಬುದು ಪ್ರಾಸಿಕ್ಯೂಷನ್ ಪತ್ತೆ ಹಚ್ಚಿರುವ ಸಂಗತಿಯಾಗಿದ್ದು, ಸನಾತನ ಸಂಸ್ಥೆಯ ಸಿದ್ಧಾಂತ ಮತ್ತು ಗುರಿಗಳು ಈ ಆರೋಪಿಗಳನ್ನು ಹತ್ಯೆ ಮಾಡಲು ಪ್ರೇರೇಪಿಸಿದೆ ಎಂದು ಪ್ರಾಸಿಕ್ಯೂಷನ್ ಆರೋಪವಾಗಿದೆ.

ಸನಾತನ ಸಂಸ್ಥೆಯ ಮಾರ್ಗ ದರ್ಶಕ ಗ್ರಂಥವಾಗಿರುವ ‘ಕ್ಷಾತ್ರ ‘ರ್ಮ ಸಾ‘ನ’ದ ಪ್ರಕಾರ ಹಿಂದೂ/ ಸನಾತನ ‘ರ್ಮಕ್ಕೆ ಕಂಟಕಪ್ರಾಯವಾಗಿರುವ ಜನರನ್ನು ಹತ್ಯೆ ಮಾಡುವ ಮೂಲಕ ಸನಾತನಕ್ಕೆ ಇರುವ ಅಡ್ಡಿಯನ್ನು ನಿವಾರಿಸಬೇಕು. ಅದರಲ್ಲೂ ಸ್ವಧರ್ಮೀಯರಲ್ಲೇ ಇರುವ ದ್ರೋಹಿಗಳನ್ನು ಶಿಕ್ಷಿಸಬೇಕು. ಈ ಸಿದ್ಧಾಂತವೇ ಆರೋಪಿಗಳಿಗೆ ಗೌರಿ ಹತ್ಯೆ ಕೊಲೆಗೆ ಪ್ರೇರಣೆ ನೀಡಿತು. ಈ ಅಪರಾ‘ದಲ್ಲಿ ಒಬ್ಬೊಬ್ಬರದ್ದು ಒಂದೊಂದು ನಿರ್ದಿಷ್ಟ ಪಾತ್ರವಿದೆ ಎಂಬುದು ಪ್ರಾಸಿಕ್ಯೂಷನ್ ಆರೋಪವಾಗಿದೆ.

ಪ್ರಕರಣದ ಪ್ರಮುಖ ಆರೋಪಿ ಅಮೋಲ್ ಕಾಳೆ ತಂಡದವರೇ ಮಹಾರಾಷ್ಟ್ರದ ದಾಬೋಲ್ಕರ್, ಪನ್ಸಾರೆ ಹಾಗೂ ಕರ್ನಾಟಕದ ಸಂಶೋ‘ನ ಪ್ರೊ.ಎಂ.ಎಂ.ಕಲಬುರ್ಗಿಯವರ ಹತ್ಯೆಯಲ್ಲೂ ಆರೋಪಿಗಳಾಗಿದ್ದಾರೆ ಎನ್ನಲಾಗಿದೆ. ಹೀಗಾಗಿ ಇವರಲ್ಲಿ ಕೆಲವರು ಮಹಾರಾಷ್ಟ್ರದ ಜೈಲಿನಲ್ಲಿದ್ದಾರೆ. ಉಳಿದವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಆರೋಪಿಗಳನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಹಾಜರು ಪಡಿಸಲಾಗುತ್ತಿದೆ.

ಈ ಮಧ್ಯೆ ಕೆಲ ಆರೋಪಿಗಳು ಜಾಮೀನು ಪಡೆಯಲು ಸೆಷನ್ಸ್ ಕೋರ್ಟ್‌ನಿಂದ ಹಿಡಿದು ಹೈಕೋರ್ಟ್, ಸುಪ್ರೀಂ ಕೋರ್ಟ್ ವರೆಗೂ ಪ್ರಯತ್ನಿಸಿದರೂ ಎಲ್ಲ ನ್ಯಾಯಾಲಯಗಳಲ್ಲೂ ಆರೋಪಿಗಳಿಗೆ ಜಾಮೀನು ನಿರಾಕರಣೆಯಾಗಿದೆ ಎಂಬುದು ಪ್ರಕರಣದ ಗಂಭೀರತೆಗೆ ಸಾಕ್ಷಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...