Homeಕರ್ನಾಟಕಸನಾತನ ಧರ್ಮದ ವಿವಾದ: ಬಸವಣ್ಣನ ವಚನದ ಮೂಲಕ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಸನಾತನ ಧರ್ಮದ ವಿವಾದ: ಬಸವಣ್ಣನ ವಚನದ ಮೂಲಕ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

- Advertisement -
- Advertisement -

‘ಸನಾತನ ಧರ್ಮ ಕೊನೆಗಾಣಿಸುವ’ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಪ್ರಿಯಾಂಕ್ ಖರ್ಗೆ ಬೆಂಬಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಅವರು ”ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕಿದ್ದರೆ,  ಅವರ ತಲೆ ಕತ್ತರಿಸುತ್ತೀರಾ?” ಎಂದು ಕೇಳಿದ್ದಾರೆ.

ಸಂತೋಷ್ ಟ್ರೇಟ್‌ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್ ಖರ್ಗೆ, ”ದಯವಿಲ್ಲದ ಧರ್ಮವಾವುದಯ್ಯಾ ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ ದಯವೇ ಧರ್ಮದ ಮೂಲವಯ್ಯಾ ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ” ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ್ದಾರೆ.

”ಬಿ.ಎಲ್.ಸಂತೋಷ್ ಅವರೇ, ಸೋಂಕಿಗೆ ಚಿಕಿತ್ಸೆ ಬೇಕು ಎಂಬ ನಿಮ್ಮ ವಾದವನ್ನು ನಾನು ಒಪ್ಪುತ್ತೇನೆ, ಆದರೆ ಸಾವಿರಾರು ವರ್ಷಗಳಿಂದ ಬಹಳಷ್ಟು ಸೋಂಕುಗಳು ಈ ಸಮಾಜವನ್ನು ಕಾಡುತ್ತಿವೆ. ಆ ಸೋಂಕುಗಳು ಈಗಲೂ ಮುಂದುವರಿದಿದ್ದು, ಮನುಷ್ಯರ ನಡುವೆ ತಾರತಮ್ಯ ಸೃಷ್ಟಿಸಿವೆ. ಮನುಷ್ಯರು ಎಂಬ ಘನತೆಯನ್ನು ನೀಡಲು ಕೆಲವರಿಗೆ ನಿರಾಕರಿಸಿವೆ” ಎಂದಿದ್ದಾರೆ.

”ನಾನು ನಿಮ್ಮನ್ನು ಬುದ್ಧವಂತನಲ್ಲ. ನೀವು ದಯವಿಟ್ಟು ನನಗೂ ಮಾರ್ಗದರ್ಶನ ಮಾಡಿ. ಇಂಥ ಸಮಾಜವನ್ನು ಸೃಷ್ಟಿಸಿದವರು ಯಾರು? ಒಬ್ಬರು ಮತ್ತೊಬ್ಬರಿಗಿಂತ ನೀತಿವಂತರು ಎಂದು ಮಾಡಿದವರು ಯಾರು? ಜಾತಿ ಆಧಾರದಲ್ಲಿ ಸಮಾಜವನ್ನು ವಿಭಜಿಸಿದವರು ಯಾರು? ಒಂದಷ್ಟು ಜನ ಮತ್ತಷ್ಟು ಜನರಿಗೆ ಏಕೆ ಆಸ್ಪೃಶ್ಯರು? ಈಗಲೂ ಕೆಲ ದೇವಾಲಯಗಳಿಗೆ ಕೆಲವರಿಗೆ ಏಕೆ ಪ್ರವೇಶವಿಲ್ಲ? ಮಹಿಳೆಯರು ಕೀಳುಭಾವದಲ್ಲೇ ಬದುಕುವಂತೆ ಪದ್ಧತಿಯನ್ನು ಜಾರಿಗೆ ತಂದವರು ಯಾರು? ಅಸಮಾನತೆ ಹಾಗೂ ದಬ್ಬಾಳಿಕೆಯ ಇರುವ ಜಾತಿ ಆಧಾರಿತ ಸಾಮಾಜಿಕ ರಚನೆಯನ್ನು ತಂದವರು ಯಾರು” ಎಂದು ಸಾಲು ಸಾಲು ಪ್ರಶ್ನೆಗಳನ್ನು ಖರ್ಗೆ ಕೇಳಿದ್ದಾರೆ.

”ಯಾರೂ ಯಾರ ತಲೆಯನ್ನೇ ಕಡಿಯಬೇಕು ಎಂಬ ಉದ್ದೇಶ ಹೊಂದಿಲ್ಲ. ಆದರೆ ಸಮಾನ ಹಕ್ಕು ಮತ್ತು ಘನತೆಯ ಬದುಕನ್ನು ಪ್ರತಿಯೊಬ್ಬ ಮನುಷ್ಕರಿಗೂ ನೀಡುವ ಮೂಲಕ ಸೋಂಕನ್ನು ಗುಣಪಡಿಸಬೇಕಿದೆ. ಇವೆಲ್ಲದಕ್ಕೂ ಔಷದ ನಮ್ಮ ಸಂವಿಧಾನದಲ್ಲಿದೆ. ಆದರೆ ನೀವುಗಳು ಅದನ್ನು ವಿರೋಧಿಸುತ್ತಿದ್ದೀರಿ. ನೀವೂ ಕರ್ನಾಟಕದವರೇ, ಬಸವಣ್ಣನವರು ಸಾರಿದ ಮಾನವತೆಯ ಸಾರವನ್ನು ಎಲ್ಲೆಡೆ ಹರಡಿ. ಅದರಿಂದ ಸಮ ಸಮಾಜದ ನಿರ್ಮಾಣ ಸಾಧ್ಯವಾಗಲಿದೆ” ಎಂದು ಖರ್ಗೆ ಹೇಳಿದ್ದಾರೆ.

ಕೊನೆಯದಾಗಿ, ”ಇವನಾರವ ಇವನಾರವ ಇವನಾರವ ನೆಂದೆನಿಸದಿರಯ್ಯಾ, ಇವ ನಮ್ಮವ, ಇವ ನಮ್ಮವ, ಇವ ನಮ್ಮವ ನಂದೆನಿಸಯ್ಯಾ ಕೂಡಲ ಸಂಗಮದೇವ ನಿಮ್ಮ ಮಹಾ ಮನೆಯ ಮಗನೆಂದೆನಿಸಯ್ಯಾ” ಎಂಬ ಬಸವಣ್ಣನವರ ವಚನದ ಸಾಲುಗಳೊದಿಗೆ ಟೈಟ್ ಮುಗಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಸ್ವಾಮೀಜಿಯ ಜೀವ ಬೆದರಿಕೆಗೆ ನಾನು ಹೆದರಲ್ಲ: ಉದಯ್‌ ನಿಧಿ ಸ್ಟಾಲಿನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...