Homeಕರ್ನಾಟಕಸನಾತನ ಧರ್ಮದ ವಿವಾದ: ಬಸವಣ್ಣನ ವಚನದ ಮೂಲಕ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಸನಾತನ ಧರ್ಮದ ವಿವಾದ: ಬಸವಣ್ಣನ ವಚನದ ಮೂಲಕ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ತಿರುಗೇಟು

- Advertisement -
- Advertisement -

‘ಸನಾತನ ಧರ್ಮ ಕೊನೆಗಾಣಿಸುವ’ ಡಿಎಂಕೆ ಮುಖಂಡ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಯನ್ನು ಪ್ರಿಯಾಂಕ್ ಖರ್ಗೆ ಬೆಂಬಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಅವರು ”ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕಿದ್ದರೆ,  ಅವರ ತಲೆ ಕತ್ತರಿಸುತ್ತೀರಾ?” ಎಂದು ಕೇಳಿದ್ದಾರೆ.

ಸಂತೋಷ್ ಟ್ರೇಟ್‌ಗೆ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್ ಖರ್ಗೆ, ”ದಯವಿಲ್ಲದ ಧರ್ಮವಾವುದಯ್ಯಾ ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ ದಯವೇ ಧರ್ಮದ ಮೂಲವಯ್ಯಾ ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ” ಎಂಬ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ್ದಾರೆ.

”ಬಿ.ಎಲ್.ಸಂತೋಷ್ ಅವರೇ, ಸೋಂಕಿಗೆ ಚಿಕಿತ್ಸೆ ಬೇಕು ಎಂಬ ನಿಮ್ಮ ವಾದವನ್ನು ನಾನು ಒಪ್ಪುತ್ತೇನೆ, ಆದರೆ ಸಾವಿರಾರು ವರ್ಷಗಳಿಂದ ಬಹಳಷ್ಟು ಸೋಂಕುಗಳು ಈ ಸಮಾಜವನ್ನು ಕಾಡುತ್ತಿವೆ. ಆ ಸೋಂಕುಗಳು ಈಗಲೂ ಮುಂದುವರಿದಿದ್ದು, ಮನುಷ್ಯರ ನಡುವೆ ತಾರತಮ್ಯ ಸೃಷ್ಟಿಸಿವೆ. ಮನುಷ್ಯರು ಎಂಬ ಘನತೆಯನ್ನು ನೀಡಲು ಕೆಲವರಿಗೆ ನಿರಾಕರಿಸಿವೆ” ಎಂದಿದ್ದಾರೆ.

”ನಾನು ನಿಮ್ಮನ್ನು ಬುದ್ಧವಂತನಲ್ಲ. ನೀವು ದಯವಿಟ್ಟು ನನಗೂ ಮಾರ್ಗದರ್ಶನ ಮಾಡಿ. ಇಂಥ ಸಮಾಜವನ್ನು ಸೃಷ್ಟಿಸಿದವರು ಯಾರು? ಒಬ್ಬರು ಮತ್ತೊಬ್ಬರಿಗಿಂತ ನೀತಿವಂತರು ಎಂದು ಮಾಡಿದವರು ಯಾರು? ಜಾತಿ ಆಧಾರದಲ್ಲಿ ಸಮಾಜವನ್ನು ವಿಭಜಿಸಿದವರು ಯಾರು? ಒಂದಷ್ಟು ಜನ ಮತ್ತಷ್ಟು ಜನರಿಗೆ ಏಕೆ ಆಸ್ಪೃಶ್ಯರು? ಈಗಲೂ ಕೆಲ ದೇವಾಲಯಗಳಿಗೆ ಕೆಲವರಿಗೆ ಏಕೆ ಪ್ರವೇಶವಿಲ್ಲ? ಮಹಿಳೆಯರು ಕೀಳುಭಾವದಲ್ಲೇ ಬದುಕುವಂತೆ ಪದ್ಧತಿಯನ್ನು ಜಾರಿಗೆ ತಂದವರು ಯಾರು? ಅಸಮಾನತೆ ಹಾಗೂ ದಬ್ಬಾಳಿಕೆಯ ಇರುವ ಜಾತಿ ಆಧಾರಿತ ಸಾಮಾಜಿಕ ರಚನೆಯನ್ನು ತಂದವರು ಯಾರು” ಎಂದು ಸಾಲು ಸಾಲು ಪ್ರಶ್ನೆಗಳನ್ನು ಖರ್ಗೆ ಕೇಳಿದ್ದಾರೆ.

”ಯಾರೂ ಯಾರ ತಲೆಯನ್ನೇ ಕಡಿಯಬೇಕು ಎಂಬ ಉದ್ದೇಶ ಹೊಂದಿಲ್ಲ. ಆದರೆ ಸಮಾನ ಹಕ್ಕು ಮತ್ತು ಘನತೆಯ ಬದುಕನ್ನು ಪ್ರತಿಯೊಬ್ಬ ಮನುಷ್ಕರಿಗೂ ನೀಡುವ ಮೂಲಕ ಸೋಂಕನ್ನು ಗುಣಪಡಿಸಬೇಕಿದೆ. ಇವೆಲ್ಲದಕ್ಕೂ ಔಷದ ನಮ್ಮ ಸಂವಿಧಾನದಲ್ಲಿದೆ. ಆದರೆ ನೀವುಗಳು ಅದನ್ನು ವಿರೋಧಿಸುತ್ತಿದ್ದೀರಿ. ನೀವೂ ಕರ್ನಾಟಕದವರೇ, ಬಸವಣ್ಣನವರು ಸಾರಿದ ಮಾನವತೆಯ ಸಾರವನ್ನು ಎಲ್ಲೆಡೆ ಹರಡಿ. ಅದರಿಂದ ಸಮ ಸಮಾಜದ ನಿರ್ಮಾಣ ಸಾಧ್ಯವಾಗಲಿದೆ” ಎಂದು ಖರ್ಗೆ ಹೇಳಿದ್ದಾರೆ.

ಕೊನೆಯದಾಗಿ, ”ಇವನಾರವ ಇವನಾರವ ಇವನಾರವ ನೆಂದೆನಿಸದಿರಯ್ಯಾ, ಇವ ನಮ್ಮವ, ಇವ ನಮ್ಮವ, ಇವ ನಮ್ಮವ ನಂದೆನಿಸಯ್ಯಾ ಕೂಡಲ ಸಂಗಮದೇವ ನಿಮ್ಮ ಮಹಾ ಮನೆಯ ಮಗನೆಂದೆನಿಸಯ್ಯಾ” ಎಂಬ ಬಸವಣ್ಣನವರ ವಚನದ ಸಾಲುಗಳೊದಿಗೆ ಟೈಟ್ ಮುಗಿಸಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಸ್ವಾಮೀಜಿಯ ಜೀವ ಬೆದರಿಕೆಗೆ ನಾನು ಹೆದರಲ್ಲ: ಉದಯ್‌ ನಿಧಿ ಸ್ಟಾಲಿನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...