Homeಕರ್ನಾಟಕಕೋವಿಡ್‌ಗೆ ಬಲಿಯಾದ ಸಾರಿಗೆ ಸಿಬ್ಬಂದಿಗೆ ತಕ್ಷಣ ಪರಿಹಾರ ಒದಗಿಸಿ: ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಒತ್ತಾಯ

ಕೋವಿಡ್‌ಗೆ ಬಲಿಯಾದ ಸಾರಿಗೆ ಸಿಬ್ಬಂದಿಗೆ ತಕ್ಷಣ ಪರಿಹಾರ ಒದಗಿಸಿ: ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಒತ್ತಾಯ

- Advertisement -
- Advertisement -

ಕೋವಿಡ್-19 ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ರಾಜ್ಯ ಸಾರಿಗೆ ನಿಗಮದ ಕುಟುಂಬಗಳಿಗೆ ಕೂಡಲೇ ಪರಿಹಾರಧನ ಬಿಡುಗಡೆಗೊಳಿಸಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ಒತ್ತಾಯಿಸಿದ್ದಾರೆ.

ಸಾಂಕ್ರಾಮಿಕ ರೋಗ ಕೋವಿಡ್‌ಗೆ ರಾಜ್ಯ ಸಾರಿಗೆ ನಿಗಮದ ಒಟ್ಟು 351 ಜನ ತಮ್ಮ ಪ್ರಾಣ ಕಳೆದುಕೊಂಡಿದ್ದರು. ಈ ಬಗ್ಗೆ ಆರ್,ಟಿ.ಐ ನಿಂದ ಮಾಹಿತಿ ಪಡೆದು, ವೆಲ್ಫೇರ್ ಪಾರ್ಟಿಯು ಆ ಮಾಹಿತಿಯನ್ವಯ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ವೆಲ್ಫೇರ್ ಪಾರ್ಟಿಯು ಮನವಿ ಮಾಡಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ವೆಲ್ಫೇರ್ ಪಾರ್ಟಿ, ”ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 80 ಜನ ಸಿಬ್ಬಂದಿಗಳು ಬಲಿಯಾಗಿದ್ದು, ಬಿಎಂಟಿಸಿಯ 110 ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 64 ಜನ ಸಿಬ್ಬಂದಿಗಳು ಪ್ರಾಣ ಕಳಕೊಂಡಿದ್ದಾರೆ. ಹಾಗೆಯೇ ಕನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 96 ಜನ ಸಿಬ್ಬಂದಿಗಳು ಪ್ರಾಣ ಕಳಕೊಂಡಿದ್ದಾರೆ. ಈ ಸಂತ್ರಸ್ಥರಲ್ಲಿ ಹಿಂದಿನ ಬಿಜೆಪಿ ಸರಕಾರ ಕೇವಲ ಹನ್ನೊಂದು ಕುಟುಂಬಗಳಿಗೆ ಮಾತ್ರ ಪರಿಹಾರಧನ ನೀಡಿದೆ. ಆಗಿನ ಬಿಜೆಪಿ ಸರಕಾರ ಬಲಿಯಾದ ಪ್ರತೀ ಕುಟುಂಬಗಳಿಗೆ ತಲಾ 30 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು” ಎಂದು ಮಾಹಿತಿ ವೆಲ್ಫೇರ್ ಪಾರ್ಟಿ ಮಾಹಿತಿ ಪಡೆದಿದೆ.

”ಈ ನಿಟ್ಟಿನಲ್ಲಿ ವೆಲ್ಫೇರ್ ಪಾರ್ಟಿಯ ವತಿಯಿಂದ ಹಲವು ಬಾರಿ ಪ್ರತಿಭಟನೆ ನಡೆಸಿ ಸರಕಾರವನ್ನು ಒತ್ತಾಯಿತ್ತು. ಸಾರಿಗೆ ಸಚಿವರನ್ನು ಕೂಡಾ ಬೇಟಿಯಾಗಿ ಈ ಬಗ್ಗೆ ಗಮನ ಹರಿಸುವಂತೆ ಒತ್ತಾಯಿಸಿತ್ತು. ಆದರೆ ಸರಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ದೊರಕಿರಲಿಲ್ಲ. ಈ ಬಗ್ಗೆ ಪ್ರಸಕ್ತ ನೂತನ ಸರಕಾರದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರನ್ನು ವೆಲ್ಪೇರ್ ಪಾರ್ಟಿಯ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ರ ನೇತೃತ್ವದ ತಂಡವು ಭೇಟಿಯಾಗಿ ಸಮರ್ಪಕ ದಾಖಲೆ ಒದಗಿಸಿ, 340 ಕುಟುಂಬಗಳು ಇನ್ನೂ ಕೂಡಾ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

”ಪರಿಹಾರ ಸಿಗದೇ ಈ ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ, ಅವರ ಬದುಕು ಶೋಚನೀಯವಾಗಿದೆ. ಮನೆಯ ಯಜಮಾನನೇ ಈ ಕೋವಿಡ್‌ಗೆ ಬಲಿಯಾಗಿರುವಾಗ ಈ ಕುಟುಂಬದ ಸಂಕಷ್ಟದ ಬಗ್ಗೆ ಗಮನವಿಟ್ಟು ಆಲಿಸಿ ಪರಿಹಾರ ಕಲ್ಪಿಸಬೇಕು” ಎಂದು ಮನವಿ ಮಾಡಿದ್ದಾರೆ.

ವೆಲ್ಫೇರ್ ಪಾರ್ಟಿಯ ನಿಯೋಗವು ಇಂದು (ಬುಧವಾರ) ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾಗಿದೆ. ನಿಯೋಗದಲ್ಲಿ ರಾಜ್ಯ ಉಪಾಧ್ಯಕ್ಷ ಹಬೀಬುಲ್ಲಾಖಾನ್, ರಾಜ್ಯ ಕಾರ್ಯದರ್ಶಿ ರಿಯಾಝ್ ಅಹಮದ್ ಮತ್ತು ಬೆಂಗಳೂರು ನಗರ ಉಪಾಧ್ಯಕ್ಷರಾದ ಎ.ಪ್ರಭಾಕರ್ ಇದ್ದರು.

ಇದನ್ನೂ ಓದಿ: ದೇಶದ ಹೆಸರು ಬದಲಾವಣೆ ಮಾಡಿದ್ರೆ ಏನು ಲಾಭ? ಜನರ ಬದುಕು ಬದಲಾಗಬೇಕು: ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...