Homeಕರ್ನಾಟಕಕೋವಿಡ್‌ಗೆ ಬಲಿಯಾದ ಸಾರಿಗೆ ಸಿಬ್ಬಂದಿಗೆ ತಕ್ಷಣ ಪರಿಹಾರ ಒದಗಿಸಿ: ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಒತ್ತಾಯ

ಕೋವಿಡ್‌ಗೆ ಬಲಿಯಾದ ಸಾರಿಗೆ ಸಿಬ್ಬಂದಿಗೆ ತಕ್ಷಣ ಪರಿಹಾರ ಒದಗಿಸಿ: ಸರಕಾರಕ್ಕೆ ವೆಲ್ಫೇರ್ ಪಾರ್ಟಿ ಒತ್ತಾಯ

- Advertisement -
- Advertisement -

ಕೋವಿಡ್-19 ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ರಾಜ್ಯ ಸಾರಿಗೆ ನಿಗಮದ ಕುಟುಂಬಗಳಿಗೆ ಕೂಡಲೇ ಪರಿಹಾರಧನ ಬಿಡುಗಡೆಗೊಳಿಸಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ಒತ್ತಾಯಿಸಿದ್ದಾರೆ.

ಸಾಂಕ್ರಾಮಿಕ ರೋಗ ಕೋವಿಡ್‌ಗೆ ರಾಜ್ಯ ಸಾರಿಗೆ ನಿಗಮದ ಒಟ್ಟು 351 ಜನ ತಮ್ಮ ಪ್ರಾಣ ಕಳೆದುಕೊಂಡಿದ್ದರು. ಈ ಬಗ್ಗೆ ಆರ್,ಟಿ.ಐ ನಿಂದ ಮಾಹಿತಿ ಪಡೆದು, ವೆಲ್ಫೇರ್ ಪಾರ್ಟಿಯು ಆ ಮಾಹಿತಿಯನ್ವಯ ಪರಿಹಾರ ನೀಡಬೇಕು ಎಂದು ಸರ್ಕಾರಕ್ಕೆ ವೆಲ್ಫೇರ್ ಪಾರ್ಟಿಯು ಮನವಿ ಮಾಡಿದೆ.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ವೆಲ್ಫೇರ್ ಪಾರ್ಟಿ, ”ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 80 ಜನ ಸಿಬ್ಬಂದಿಗಳು ಬಲಿಯಾಗಿದ್ದು, ಬಿಎಂಟಿಸಿಯ 110 ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 64 ಜನ ಸಿಬ್ಬಂದಿಗಳು ಪ್ರಾಣ ಕಳಕೊಂಡಿದ್ದಾರೆ. ಹಾಗೆಯೇ ಕನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 96 ಜನ ಸಿಬ್ಬಂದಿಗಳು ಪ್ರಾಣ ಕಳಕೊಂಡಿದ್ದಾರೆ. ಈ ಸಂತ್ರಸ್ಥರಲ್ಲಿ ಹಿಂದಿನ ಬಿಜೆಪಿ ಸರಕಾರ ಕೇವಲ ಹನ್ನೊಂದು ಕುಟುಂಬಗಳಿಗೆ ಮಾತ್ರ ಪರಿಹಾರಧನ ನೀಡಿದೆ. ಆಗಿನ ಬಿಜೆಪಿ ಸರಕಾರ ಬಲಿಯಾದ ಪ್ರತೀ ಕುಟುಂಬಗಳಿಗೆ ತಲಾ 30 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು” ಎಂದು ಮಾಹಿತಿ ವೆಲ್ಫೇರ್ ಪಾರ್ಟಿ ಮಾಹಿತಿ ಪಡೆದಿದೆ.

”ಈ ನಿಟ್ಟಿನಲ್ಲಿ ವೆಲ್ಫೇರ್ ಪಾರ್ಟಿಯ ವತಿಯಿಂದ ಹಲವು ಬಾರಿ ಪ್ರತಿಭಟನೆ ನಡೆಸಿ ಸರಕಾರವನ್ನು ಒತ್ತಾಯಿತ್ತು. ಸಾರಿಗೆ ಸಚಿವರನ್ನು ಕೂಡಾ ಬೇಟಿಯಾಗಿ ಈ ಬಗ್ಗೆ ಗಮನ ಹರಿಸುವಂತೆ ಒತ್ತಾಯಿಸಿತ್ತು. ಆದರೆ ಸರಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ದೊರಕಿರಲಿಲ್ಲ. ಈ ಬಗ್ಗೆ ಪ್ರಸಕ್ತ ನೂತನ ಸರಕಾರದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರನ್ನು ವೆಲ್ಪೇರ್ ಪಾರ್ಟಿಯ ರಾಜ್ಯಾಧ್ಯಕ್ಷ ತಾಹಿರ್ ಹುಸೇನ್ ರ ನೇತೃತ್ವದ ತಂಡವು ಭೇಟಿಯಾಗಿ ಸಮರ್ಪಕ ದಾಖಲೆ ಒದಗಿಸಿ, 340 ಕುಟುಂಬಗಳು ಇನ್ನೂ ಕೂಡಾ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

”ಪರಿಹಾರ ಸಿಗದೇ ಈ ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ, ಅವರ ಬದುಕು ಶೋಚನೀಯವಾಗಿದೆ. ಮನೆಯ ಯಜಮಾನನೇ ಈ ಕೋವಿಡ್‌ಗೆ ಬಲಿಯಾಗಿರುವಾಗ ಈ ಕುಟುಂಬದ ಸಂಕಷ್ಟದ ಬಗ್ಗೆ ಗಮನವಿಟ್ಟು ಆಲಿಸಿ ಪರಿಹಾರ ಕಲ್ಪಿಸಬೇಕು” ಎಂದು ಮನವಿ ಮಾಡಿದ್ದಾರೆ.

ವೆಲ್ಫೇರ್ ಪಾರ್ಟಿಯ ನಿಯೋಗವು ಇಂದು (ಬುಧವಾರ) ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಅವರನ್ನು ಭೇಟಿಯಾಗಿದೆ. ನಿಯೋಗದಲ್ಲಿ ರಾಜ್ಯ ಉಪಾಧ್ಯಕ್ಷ ಹಬೀಬುಲ್ಲಾಖಾನ್, ರಾಜ್ಯ ಕಾರ್ಯದರ್ಶಿ ರಿಯಾಝ್ ಅಹಮದ್ ಮತ್ತು ಬೆಂಗಳೂರು ನಗರ ಉಪಾಧ್ಯಕ್ಷರಾದ ಎ.ಪ್ರಭಾಕರ್ ಇದ್ದರು.

ಇದನ್ನೂ ಓದಿ: ದೇಶದ ಹೆಸರು ಬದಲಾವಣೆ ಮಾಡಿದ್ರೆ ಏನು ಲಾಭ? ಜನರ ಬದುಕು ಬದಲಾಗಬೇಕು: ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...