Homeಕರ್ನಾಟಕನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ, ಸನಾತನ??: ನಟ ಕಿಶೋರ್ ಕುಮಾರ್ ಪ್ರಶ್ನೆ

ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ, ಸನಾತನ??: ನಟ ಕಿಶೋರ್ ಕುಮಾರ್ ಪ್ರಶ್ನೆ

- Advertisement -
- Advertisement -

ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ಹೇಳಿಕೆಯೊಮದನ್ನು ನೀಡಿದ್ದರು. ಅದಕ್ಕೆ ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಅಯೋಧ್ಯೆ ಸ್ವಾಮಿಯೊಬ್ಬರು ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿಯಬೇಕು ಎಂದಿದ್ದಾರೆ. ಇದಕ್ಕೆ ಖ್ಯಾತ ಬಹುಭಾಷಾ ನಟ ಕಿಶೋರ್ ಕುಮಾರ್ ಅವರು ಕಿಡಿ ಕಾರಿದ್ದಾರೆ.

ಈ ಬಗ್ಗೆ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ”ಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ? ಹಾಗಾದರೆ ನಾವು ಹಿಂದೂಗಳಲ್ಲವೇ?
ಇದಾವುದು ಹೊಸ ಧರ್ಮ ? ಸನಾತನ??” ಎಂದು ಪ್ರಶ್ನೆ ಮಾಡಿದ್ದಾರೆ.

”ಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕು..” ಎಂದಿದ್ದಾರೆ.

”ವಾಟ್ಸಾಪ್ ವಿಶ್ವವಿದ್ಯಾಲಯದಿಂದ ಹೊರಬಂದು, ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನವಶ್ಯಕ ಚರ್ಚೆಗೆ ಕಾರಣ” ಎಂದು ಹೇಳಿದ್ದಾರೆ.

 

View this post on Instagram

 

A post shared by Kishore Kumar Huli (@actorkishore)

”ರಾಜಕೀಯದ ದೃಷ್ಟಿಯಿಂದ ಉದಯನಿಧಿಯವರ ಭಾಷಾಪ್ರಯೋಗದ ತೀಕ್ಷ್ಣತೆ ಸ್ವಲ್ಪ ಕಡಿಮೆಯಾಗಬಹುದಿತ್ತೆನಿಸಿದರೂ ಅವರು ಖಂಡಿಸಿದ್ದು ಇವರ ದ್ವೇಷದ ಜಾತಿವಾದದ, ಅಸ್ಪೃಷ್ಯತೆಯ , ಅಸಮಾನತೆಯ ವೈದಿಕ ರಾಜಕೀಯವು ಕಿಡ್ನಾಪ್ ಮಾಡಿದ ಸನಾತನವನ್ನು , ಆದಿ ಅಂತ್ಯವಿಲ್ಲದ ಸನಾತನ ಪದವನ್ನಲ್ಲವೆಂಬುದು ಸ್ಪಷ್ಟ.. ಅದನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್ ಮುಕ್ತವೆಂದು ಕೂಗಾಡುತ್ತ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇ ಕೇಳಬೇಕಲ್ಲ..” ಎಂದು ಪ್ರಶ್ನೆ ಮಾಡಿದ್ದಾರೆ.

”ಧರ್ಮವೆನ್ನುವುದು ಅಧರ್ಮದ ವಿರುದ್ಧ ಪದವಾದರೆ, ಅಧರ್ಮವೆನ್ನುವುದು ಕೆಟ್ಟ ಕೆಲಸವೆಂದಾದರೆ, ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲ. ಈ ದಾರಿತಪ್ಪಿಸುವ ಧರ್ಮಾಂಧ ರಾಜಕೀಯದಲ್ಲಿ ನಮ್ಮ ಜ್ವಲಂತ ಸಮಸ್ಯೆಗಳೂ , ಜಾತಿವಾದದ, ರಾಜಕೀಯ, ಆರ್ಥಿಕ, ಸಾಮಾಜಿಕ ಕ್ರೌರ್ಯದ, ಅಸಮಾನತೆಯ ಸಮಸ್ಯೆಗಳೆಲ್ಲ ಕೊಚ್ಚಿ ಹೋಗುವ ಮುನ್ನ ಎಚ್ಚರಗೊಳ್ಳುವ.
ಮನುಷ್ಯರನ್ನು ಮನುಷ್ಯರಾಗಿ, ಕಾಣುವ ಮನುಷ್ಯ ಧರ್ಮದವರಾಗುವ ವಿಶ್ವಮಾನವರಾಗುವ…” ಎಂದು ಕರೆ ನೀಡಿದ್ದಾರೆ.

ಇದನ್ನೂ ಓದಿ: ಸಂವಿಧಾನವೇ ನನ್ನ ಧರ್ಮ, ಹೇಳಿಕೆಗೆ ಬದ್ಧನಾಗಿದ್ದೇನೆ: ಎಫ್‌ಐಆರ್ ಬಗ್ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...