Homeಮುಖಪುಟದಲಿತ ಮಹಿಳೆ ಅಡುಗೆ ತಯಾರಿಸಿದ್ದಕ್ಕೆ ಶಾಲೆಯಲ್ಲಿ ಉಪಹಾರ ಸೇವಿಸಲು ನಿರಾಕರಿಸಿದ ಮಕ್ಕಳು

ದಲಿತ ಮಹಿಳೆ ಅಡುಗೆ ತಯಾರಿಸಿದ್ದಕ್ಕೆ ಶಾಲೆಯಲ್ಲಿ ಉಪಹಾರ ಸೇವಿಸಲು ನಿರಾಕರಿಸಿದ ಮಕ್ಕಳು

- Advertisement -
- Advertisement -

ದಲಿತ ಮಹಿಳೆ ಅಡುಗೆ ತಯಾರಿಸಿದ್ದಕ್ಕೆ ತಮಿಳುನಾಡಿನ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಸರಕಾರದ ಉಚಿತ ಉಪಹಾರ ಯೋಜನೆಯ ಊಟ ನಿರಾಕರಿಸಿರುವ ಘಟನೆ ನಡೆದಿದೆ.

ತಮಿಳುನಾಡಿನ ಕರೂರು ಜಿಲ್ಲೆಯ ಅರವಾಕುರಿಚಿ ಬಳಿಯ ವೆಲಾಂಚೆಟ್ಟಿಯೂರ್ ಪಂಚಾಯತ್‌ನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. 30 ಮಕ್ಕಳಲ್ಲಿ 15 ಮಕ್ಕಳು ದಲಿತ ಮಹಿಳೆ ಅಡುಗೆ ತಯಾರಿಸಿದ್ದಾರೆಂದು ಊಟ ಮಾಡಲು ನಿರಾಕರಿಸಿದ್ದಾರೆ.

ಮಂಗಳವಾರ ಶಾಲೆಗೆ ಭೇಟಿ ನೀಡಿ ಉಪಹಾರ ಯೋಜನೆ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಈ ಕುರಿತು ವಿದ್ಯಾರ್ಥಿಗಳ ಪೋಷಕರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಮಕ್ಕಳ ಪೋಷಕರು ದಲಿತ ಮಹಿಳೆ ಸುಮತಿ ಅವರು ಆಹಾರವನ್ನು ತಯಾರಿಸುತ್ತಿದ್ದಾರೆ. ದಲಿತ ಮಹಿಳೆ ಆಹಾರ ತಯಾರಿಸಿದ ಕಾರಣಕ್ಕೆ ನಮ್ಮ ಮಕ್ಕಳು ಶಾಲೆಯಲ್ಲಿ ಊಟ ಮಾಡುವುದಿಲ್ಲ ಎಂದು ಹೇಳಿದ್ದಾರೆ. ದಲಿತ ಮಹಿಳೆ ಶಾಲೆಯಲ್ಲಿ ಅಡುಗೆ ಮಾಡುವುದನ್ನು ನಿಲ್ಲಿಸುವವರೆಗೆ ಇದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. ಇದಲ್ಲದೆ ತಮ್ಮ ಮಕ್ಕಳಿಗೆ ಊಟ ಮಾಡುವಂತೆ ಒತ್ತಾಯಿಸಿದರೆ ಮಕ್ಕಳನ್ನು ಶಾಲೆಯಿಂದ ಬಿಡಿಸುವುದಾಗಿ ಪೋಷಕರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಟಿ. ಪ್ರಭುಶಂಕರ್, ದಲಿತ ಮಹಿಳೆ ಎಂಬ ಕಾರಣಕ್ಕೆ ಅವಮಾನ ಮಾಡಿದರೆ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸುವುದಾಗಿ ವಿದ್ಯಾರ್ಥಿಗಳ ಪೋಷಕರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಇದಲ್ಲದೆ ತಮ್ಮ ಮಕ್ಕಳಿಗೆ ಆಹಾರ ಸೇವನೆಗೆ ಅವಕಾಶ ನೀಡುವಂತೆ ಪೋಷಕರಿಗೆ ಆಗ್ರಹಿಸಿದ್ದಾರೆ.

ಇದಲ್ಲದೆ ಶಾಲೆಯಲ್ಲಿ ದಲಿತ ಮಹಿಳೆ ಸುಮತಿ ಎಂಬವರು ಸಿದ್ಧಪಡಿಸಿದ್ದ ಭೋಜನವನ್ನು ಒಗ್ಗಟ್ಟಿನ ಪ್ರದರ್ಶನದ ಭಾಗವಾಗಿ ಜಿಲ್ಲಾಧಿಕಾರಿ ಮಕ್ಕಳ ಜೊತೆ ಸೇವಿಸಿದ್ದಾರೆ.

30 ಮಕ್ಕಳಲ್ಲಿ 15 ಮಕ್ಕಳು ಊಟವನ್ನು ಮಾಡಲು ನಿರಾಕರಿಸಿದ್ದಾರೆ. ಈ ವಿಚಾರವನ್ನು ಉನ್ನತ ಧಿಕಾರಿಗಳ ಗಮನಕ್ಕೆ ತರಲಾಗಿದೆ.  ವಿದ್ಯಾರ್ಥಿಗಳ  ಪೋಷಕರ ಜೊತೆ ಮಾತುಕತೆ ನಡೆಸಲಾಗಿದೆ. ಆದರೆ ಆ ಬಳಿಕ ಇಬ್ಬರು ವಿದ್ಯಾರ್ಥಿಗಳು ಮಾತ್ರ ತಮ್ಮ ನಿಲುವನ್ನು ಬದಲಿಸಿದ್ದಾರೆ ಹೊರತು ಇತರ ವಿದ್ಯಾರ್ಥಿಗಳು ಊಟ ಮಾಡಿಲ್ಲ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಸಂವಿಧಾನವೇ ನನ್ನ ಧರ್ಮ, ಹೇಳಿಕೆಗೆ ಬದ್ಧನಾಗಿದ್ದೇನೆ: ಎಫ್‌ಐಆರ್ ಬಗ್ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...