Homeಮುಖಪುಟದಲಿತ ಮಹಿಳೆ ಅಡುಗೆ ತಯಾರಿಸಿದ್ದಕ್ಕೆ ಶಾಲೆಯಲ್ಲಿ ಉಪಹಾರ ಸೇವಿಸಲು ನಿರಾಕರಿಸಿದ ಮಕ್ಕಳು

ದಲಿತ ಮಹಿಳೆ ಅಡುಗೆ ತಯಾರಿಸಿದ್ದಕ್ಕೆ ಶಾಲೆಯಲ್ಲಿ ಉಪಹಾರ ಸೇವಿಸಲು ನಿರಾಕರಿಸಿದ ಮಕ್ಕಳು

- Advertisement -
- Advertisement -

ದಲಿತ ಮಹಿಳೆ ಅಡುಗೆ ತಯಾರಿಸಿದ್ದಕ್ಕೆ ತಮಿಳುನಾಡಿನ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಸರಕಾರದ ಉಚಿತ ಉಪಹಾರ ಯೋಜನೆಯ ಊಟ ನಿರಾಕರಿಸಿರುವ ಘಟನೆ ನಡೆದಿದೆ.

ತಮಿಳುನಾಡಿನ ಕರೂರು ಜಿಲ್ಲೆಯ ಅರವಾಕುರಿಚಿ ಬಳಿಯ ವೆಲಾಂಚೆಟ್ಟಿಯೂರ್ ಪಂಚಾಯತ್‌ನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. 30 ಮಕ್ಕಳಲ್ಲಿ 15 ಮಕ್ಕಳು ದಲಿತ ಮಹಿಳೆ ಅಡುಗೆ ತಯಾರಿಸಿದ್ದಾರೆಂದು ಊಟ ಮಾಡಲು ನಿರಾಕರಿಸಿದ್ದಾರೆ.

ಮಂಗಳವಾರ ಶಾಲೆಗೆ ಭೇಟಿ ನೀಡಿ ಉಪಹಾರ ಯೋಜನೆ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಈ ಕುರಿತು ವಿದ್ಯಾರ್ಥಿಗಳ ಪೋಷಕರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಮಕ್ಕಳ ಪೋಷಕರು ದಲಿತ ಮಹಿಳೆ ಸುಮತಿ ಅವರು ಆಹಾರವನ್ನು ತಯಾರಿಸುತ್ತಿದ್ದಾರೆ. ದಲಿತ ಮಹಿಳೆ ಆಹಾರ ತಯಾರಿಸಿದ ಕಾರಣಕ್ಕೆ ನಮ್ಮ ಮಕ್ಕಳು ಶಾಲೆಯಲ್ಲಿ ಊಟ ಮಾಡುವುದಿಲ್ಲ ಎಂದು ಹೇಳಿದ್ದಾರೆ. ದಲಿತ ಮಹಿಳೆ ಶಾಲೆಯಲ್ಲಿ ಅಡುಗೆ ಮಾಡುವುದನ್ನು ನಿಲ್ಲಿಸುವವರೆಗೆ ಇದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. ಇದಲ್ಲದೆ ತಮ್ಮ ಮಕ್ಕಳಿಗೆ ಊಟ ಮಾಡುವಂತೆ ಒತ್ತಾಯಿಸಿದರೆ ಮಕ್ಕಳನ್ನು ಶಾಲೆಯಿಂದ ಬಿಡಿಸುವುದಾಗಿ ಪೋಷಕರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಟಿ. ಪ್ರಭುಶಂಕರ್, ದಲಿತ ಮಹಿಳೆ ಎಂಬ ಕಾರಣಕ್ಕೆ ಅವಮಾನ ಮಾಡಿದರೆ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸುವುದಾಗಿ ವಿದ್ಯಾರ್ಥಿಗಳ ಪೋಷಕರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಇದಲ್ಲದೆ ತಮ್ಮ ಮಕ್ಕಳಿಗೆ ಆಹಾರ ಸೇವನೆಗೆ ಅವಕಾಶ ನೀಡುವಂತೆ ಪೋಷಕರಿಗೆ ಆಗ್ರಹಿಸಿದ್ದಾರೆ.

ಇದಲ್ಲದೆ ಶಾಲೆಯಲ್ಲಿ ದಲಿತ ಮಹಿಳೆ ಸುಮತಿ ಎಂಬವರು ಸಿದ್ಧಪಡಿಸಿದ್ದ ಭೋಜನವನ್ನು ಒಗ್ಗಟ್ಟಿನ ಪ್ರದರ್ಶನದ ಭಾಗವಾಗಿ ಜಿಲ್ಲಾಧಿಕಾರಿ ಮಕ್ಕಳ ಜೊತೆ ಸೇವಿಸಿದ್ದಾರೆ.

30 ಮಕ್ಕಳಲ್ಲಿ 15 ಮಕ್ಕಳು ಊಟವನ್ನು ಮಾಡಲು ನಿರಾಕರಿಸಿದ್ದಾರೆ. ಈ ವಿಚಾರವನ್ನು ಉನ್ನತ ಧಿಕಾರಿಗಳ ಗಮನಕ್ಕೆ ತರಲಾಗಿದೆ.  ವಿದ್ಯಾರ್ಥಿಗಳ  ಪೋಷಕರ ಜೊತೆ ಮಾತುಕತೆ ನಡೆಸಲಾಗಿದೆ. ಆದರೆ ಆ ಬಳಿಕ ಇಬ್ಬರು ವಿದ್ಯಾರ್ಥಿಗಳು ಮಾತ್ರ ತಮ್ಮ ನಿಲುವನ್ನು ಬದಲಿಸಿದ್ದಾರೆ ಹೊರತು ಇತರ ವಿದ್ಯಾರ್ಥಿಗಳು ಊಟ ಮಾಡಿಲ್ಲ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಸಂವಿಧಾನವೇ ನನ್ನ ಧರ್ಮ, ಹೇಳಿಕೆಗೆ ಬದ್ಧನಾಗಿದ್ದೇನೆ: ಎಫ್‌ಐಆರ್ ಬಗ್ಗೆ ಪ್ರಿಯಾಂಕ್‌ ಖರ್ಗೆ ಪ್ರತಿಕ್ರಿಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...