Homeಮುಖಪುಟಸನಾತನ ವಿವಾದ: ಸ್ಟಾಲಿನ್ ಹೇಳಿಕೆ ತಿರುಚಿ ದ್ವೇಷ ಹರಡಿದ ಪತ್ರಕರ್ತ ರೈ, ಬಿಜೆಪಿ ನಾಯಕ ಮಾಳವೀಯ...

ಸನಾತನ ವಿವಾದ: ಸ್ಟಾಲಿನ್ ಹೇಳಿಕೆ ತಿರುಚಿ ದ್ವೇಷ ಹರಡಿದ ಪತ್ರಕರ್ತ ರೈ, ಬಿಜೆಪಿ ನಾಯಕ ಮಾಳವೀಯ ವಿರುದ್ಧ FIR

- Advertisement -
- Advertisement -

ಸನಾತನ ಧರ್ಮದ ಕುರಿತು ತಮಿಳುನಾಡು  ಅವರ ಹೇಳಿಕೆಯನ್ನು ಪತ್ರಕರ್ತ ಪಿಯೂಷ್ ರೈ ಮತ್ತು ಬಿಜೆಪಿಯ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ತಿರುಚಿ ದ್ವೇಷ ಹರಡಿದ್ದಕ್ಕೆ ಅವರ ವಿರುದ್ಧ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ. ಸ್ಟಾಲಿನ್ ತಲೆ ತೆಗೆಯಬೇಕೆಂದು ಕರೆ ನೀಡಿದ್ದ ಅಯೋಧ್ಯೆ ಸ್ವಾಮೀಜಿ ವಿರುದ್ಧವೂ ತಮಿಳುನಾಡು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಸೆಪ್ಟೆಂಬರ್ 2 ರಂದು ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಅವರು, ಸನಾತನ ಧರ್ಮ ಡೆಂಗ್ಯೂ ಮತ್ತು ಮಲೇರಿಯಾ ಇದ್ದಂತೆ, ಅದನ್ನು “ನಿರ್ಮೂಲನೆ ಮಾಡಬೇಕು” ಎಂದು ಹೇಳಿದ್ದರು.

ಈ ಹೇಳಿಕೆ ಬೆನ್ನಲ್ಲೇ ಅಯೋಧ್ಯೆಯ ಸ್ವಾಮೀಜಿ ಚವಾನಿ ದೇವಸ್ಥಾನದ ಧರ್ಮದರ್ಶಿ ರಾಮಚಂದ್ರ ದಾಸ್ ಪರಮಹಂಸ ಆಚಾರ್ಯ ಅವರು, ಸಚಿವ ಉದಯನಿಧಿ ಸ್ಟಾಲಿನ್ ತಲೆ ತೆಗೆದವರಿಗೆ 10 ಕೋಟಿ ರೂಪಾಯಿ ಬಹುಮಾನ ಘೋಷಿಸಿದರು. ಹಾಗಾಗಿ ಅವರ ವಿರುದ್ಧ ಬುಧವಾರದಂದು ಮಧುರೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಮಧ್ಯೆ ಬಿಜೆಪಿ ನಾಯಕ ಮಾಳ್ವಿಯಾ ಅವರು ಸ್ಟಾಲಿನ್ ಅವರ ಹೇಳಿಕೆಗಳನ್ನು ತಿರುಚಿ, ವಿವಿಧ ವರ್ಗಗಳ ಜನರ ನಡುವೆ ದ್ವೇಷವನ್ನು ಸೃಷ್ಟಿಸಲು ತಪ್ಪು ಮಾಹಿತಿಯನ್ನು ಹರಡಿದ್ದಾರೆ. ಹಾಗಾಗಿ ಅವರ ವಿರುದ್ಧವೂ ತಿರುಚಿರಾಪಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

”ಸನಾತನ ಧರ್ಮವನ್ನು ಅನುಸರಿಸುವ ಭಾರತದ 80% ಜನಸಂಖ್ಯೆಯ “ಜನಾಂಗೀಯ ಹತ್ಯೆ”ಗಾಗಿ ಸ್ಟಾಲಿನ್ ಕರೆ ನೀಡಿದ್ದಾರೆ” ಎಂದು ಬಿಜೆಪಿ ನಾಯಕ ಮಾಳ್ವಿಯಾ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಸ್ಟಾಲಿನ್ ಅವರು ಎಂದಿಗೂ ನರಮೇಧಕ್ಕೆ ಕರೆ ನೀಡಿಲ್ಲ ಎಂದು ಸ್ಪಷ್ಟೀಕರಣ ನೀಡಿದ ನಂತರವೂ ಮಾಳವೀಯ ಅವರು “ನಕಲಿ ಸುದ್ದಿ” ಹರಡುವುದನ್ನು ಮುಂದುವರೆಸಿದ್ದಾರೆ ಎಂದು ದ್ರಾವಿಡ ಮುನ್ನೇತ್ರ ಕಳಗಂ ಪದಾಧಿಕಾರಿಯೊಬ್ಬರು ದೂರಿದ್ದಾರೆ.

ಉತ್ತರ ಪ್ರದೇಶ ಮೂಲದ ಪತ್ರಕರ್ತ ರೈ ಅವರು ವೀಡಿಯೊವೊಂದನ್ನು ಪೋಸ್ಟ್ ಮಾಡುವ ಮೂಲಕ ಜನರಲ್ಲಿ ಭಯವನ್ನುಂಟು ಮಾಡಿದ್ದಾರೆ ಮತ್ತು ಕೋಮುಗಲಭೆಗೆ ಕಾರಣವಾಗುವಂತೆ ಮಾಡಿದ್ದಾರೆ ಎಂದು ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂನ ಮಧುರೈ ಘಟಕದ ಕಾನೂನು ವಿಭಾಗದ ಸಂಚಾಲಕ ಜೆ ದೇವಸೇನನ್ ಅವರು ದೂರು ನೀಡಿದ್ದಾರೆ.

ಆಚಾರ್ಯ ಮತ್ತು ರೈ ವಿರುದ್ಧ ಭಾರತೀಯ ದಂಡ ಸಂಹಿತೆ 153 (ಗಲಭೆ ಉಂಟು ಮಾಡಲು ಪ್ರಚೋದನೆ), 153 ಎ (ವಿವಿಧ ವರ್ಗಗಳ ಜನರ ನಡುವೆ ದ್ವೇಷವನ್ನು ಉತ್ತೇಜಿಸುವುದು), 504 (ಅಪರಾಧ ಬೆದರಿಕೆಗೆ ಶಿಕ್ಷೆ), 505 (1) (ಬಿ) (ಸಾರ್ವಜನಿಕರಿಗೆ ಪ್ರೇರೇಪಿಸುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಿಡಿಗೇಡಿತನ) ಮತ್ತು 506(2) (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರೈ ವಿರುದ್ಧದ ಎಫ್‌ಐಆರ್ ಹಿಂಪಡೆಯಲು ಪತ್ರಕರ್ತರ ಬೇಡಿಕೆಗಳ ನಂತರ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಮೊದಲು ಕಾನೂನು ಅಭಿಪ್ರಾಯವನ್ನು ಪಡೆಯುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ, ಸನಾತನ??: ನಟ ಕಿಶೋರ್ ಕುಮಾರ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...