HomeಮುಖಪುಟINDIA vs ಭಾರತ: ವಿರೋಧ ಪಕ್ಷಗಳ ಒಕ್ಕೂಟಕ್ಕೆ ಹೊಸ ಹೆಸರು ಸೂಚಿಸಿದ ಶಶಿ ತರೂರ್

INDIA vs ಭಾರತ: ವಿರೋಧ ಪಕ್ಷಗಳ ಒಕ್ಕೂಟಕ್ಕೆ ಹೊಸ ಹೆಸರು ಸೂಚಿಸಿದ ಶಶಿ ತರೂರ್

- Advertisement -
- Advertisement -

INDIA ಮೈತ್ರಿಕೂಟ ರಚನೆ ಬಳಿಕ ದೇಶದ ಹೆಸರನ್ನೇ ಬದಲಾಯಿಸುತ್ತಿರುವುದಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ಬುಧವಾರ ಆಡಳಿತಾರೂಢ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

”ವಿರೋಧ ಪಕ್ಷಗಳು ಇದೀಗ ಅಲಯನ್ಸ್ ಫಾರ್ ಅಲೈಯನ್ಸ್ ಫಾರ್ ಟುಮಾರೊ, ಸೌಹಾರ್ದತೆ ಮತ್ತು ಜವಾಬ್ದಾರಿಯುತ ಪ್ರಗತಿಗಾಗಿ (ಭಾರತ್) [ Betterment, Harmony And Responsible Advancement for Tomorrow(BHARAT)] ಎಂದು ಮರುನಾಮಕರಣ ಮಾಡಿದರೆ ಆಗಲಾದರೂ ಹೆಸರುಗಳನ್ನು ಬದಲಾಯಿಸುವ ದುರಾಸೆಯ ಆಟವನ್ನು ಬಿಜೆಪಿ ನಿಲ್ಲಿಸಬಹುದು” ಎಂದು ತರೂರ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ನಾವು ಉತ್ತಮ, ಸಾಮರಸ್ಯ ಮತ್ತು ನಾಳೆಯ ಜವಾಬ್ದಾರಿಯುತ ಪ್ರಗತಿಗಾಗಿ (ಭಾರತ್) [ Betterment, Harmony And Responsible Advancement for Tomorrow(BHARAT)] ಎಂದು ಕರೆಯಬಹುದು. ಆನಂತರ ಆಡಳಿತ ಪಕ್ಷವು “ಹೆಸರು ಬದಲಾಯಿಸುವ ದುರಾಸೆಯ ಆಟವನ್ನು ನಿಲ್ಲಿಸಬಹುದು” ಎಂದಿದ್ದಾರೆ.

ಸರ್ಕಾರವು ಸಾಮಾನ್ಯ ‘ಭಾರತದ ರಾಷ್ಟ್ರಪತಿ’ ಬದಲಿಗೆ ‘ಭಾರತದ ಅಧ್ಯಕ್ಷ’ ಹೆಸರಿನಲ್ಲಿ ವಿಶ್ವ ನಾಯಕರಿಗೆ G20 ಔತಣಕೂಟದ ಆಹ್ವಾನಗಳನ್ನು ಕಳುಹಿಸಿದ ನಂತರ ದೇಶದ ಹೆಸರಿನ ಮೇಲೆ ರಾಜಕೀಯ ಗದ್ದಲ ಭುಗಿಲೆದ್ದಿದೆ.

INDIAವನ್ನು “ಭಾರತ್” ಎಂದು ಕರೆಯಲು ಯಾವುದೇ ಸಾಂವಿಧಾನಿಕ ಆಕ್ಷೇಪಣೆ ಇಲ್ಲ. ಆದರೆ INDIAವನ್ನು ಸಂಪೂರ್ಣವಾಗಿ ತ್ಯಜಿಸುವುದು ಮೂರ್ಖತನ. ದೇಶವನ್ನು ಉಲ್ಲೇಖಿಸಲು ‘INDIA ಮತ್ತು ಭಾರತ ಎರಡನ್ನೂ ಬಳಸಲಿ ಎಂದು ತರೂರ್ ಹೇಳಿದರು.

”ದೇಶದ ಎರಡು ಅಧಿಕೃತ ಹೆಸರುಗಳಲ್ಲಿ ಒಂದಾಗಿರುವ INDIAವನ್ನು “ಭಾರತ್” ಎಂದು ಕರೆಯಲು ಯಾವುದೇ ಸಾಂವಿಧಾನಿಕ ಆಕ್ಷೇಪಣೆ ಇಲ್ಲದಿದ್ದರೂ, “INDIA” ಎನ್ನುವ ಸಾಕಷ್ಟು ಬ್ರ್ಯಾಂಡ್‌ಗಳಿಗೆ ಆದರೂ ಅದನ್ನು ಸಂಪೂರ್ಣವಾಗಿ ತ್ಯಜಿಸುವಷ್ಟು ಸರ್ಕಾರವು ಮೂರ್ಖನಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು X ನಲ್ಲಿ ಬರೆದಿದ್ದಾರೆ.

”ಇತಿಹಾಸದಲ್ಲಿ ದಾಖಲಾಗಿರುವ ಹೆಸರು, ಪ್ರಪಂಚದಾದ್ಯಂತ ಗುರುತಿಸಲ್ಪಟ್ಟಿರುವ ಹೆಸರಿನ ನಮ್ಮ ಹಕ್ಕನ್ನು ಬಿಟ್ಟುಬಿಡುವ ಬದಲು ನಾವು ಎರಡೂ ಪದಗಳನ್ನು ಬಳಸುವುದನ್ನು ಮುಂದುವರಿಸಬೇಕು” ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...